ಆರ್ಥಿಕ ಶಿಸ್ತು ರೂಢಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ ನೀಡಿದ ಮುಖ್ಯ ಪ್ರಬಂಧಕ ಮಧುಕರ್

ಅಳತೆ ಮೀರಿದ ಸಾಲದಿಂದ ಆರ್ಥಿಕ ದುಃಸ್ಥಿತಿ ಉಂಟಾಗುವುದಲ್ಲದೆ, ಮಾನಸಿಕ ಆರೋಗ್ಯವು ಹದಗೆಡುತ್ತದೆ. ಇಂತಹ ಸಮಸ್ಯೆಗಳನ್ನು ತಪ್ಪಿಸಲು ವಿದ್ಯಾರ್ಥಿ ದೆಸೆಯಿಂದಲೇ ಉಳಿತಾಯದ ಕುರಿತು ಅರಿವು ಸೇರಿದಂತೆ ಆರ್ಥಿಕ ಶಿಸ್ತನ್ನು ರೂಢಿಸಿಕೊಳ್ಳಬೇಕೆಂದು ಬ್ಯಾಂಕಿನ ಮುಖ್ಯ ಪ್ರಬಂಧಕರಾದ ಮಧುಕರ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಭಾರತೀಯ ರಿಸರ್ವ್ ಬ್ಯಾಂಕಿನ ಆದೇಶದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಘ್ರಣೀಯ ಬ್ಯಾಂಕ್ ಹಾಗೂ ರುಡ್‌ಸೆಟ್ ಸಂಸ್ಥೆಯ ಸಹಯೋಗದೊಂದಿಗೆ ನೆಲಮಂಗಲ ತಾಲ್ಲೂಕಿನ ರುಡ್‌ಸೆಟ್ ಸಂಸ್ಥೆಯಲ್ಲಿ ಇಂದು ಆರ್ಥಿಕ ಸಾಕ್ಷರತಾ ಸಪ್ತಾಹದ ಅಂಗವಾಗಿ ಆರ್ಥಿಕ ಸಾಕ್ಷರತಾ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಸಭಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಭಾರತೀಯ ರಿಸರ್ವ್ ಬ್ಯಾಂಕಿನ ಆದೇಶದಂತೆ ಆರ್ಥಿಕ ಸಾಕ್ಷರತಾ ಸಪ್ತಾಹವನ್ನು ಫೆಬ್ರವರಿ 13 ರಿಂದ 17 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರಲ್ಲಿ ಆರ್ಥಿಕ ಶಿಸ್ತು ಮೂಡಬೇಕಾದರೆ ಎಲ್ಲರೂ ಆರ್ಥಿಕ ಸಾಕ್ಷರತೆ ಕುರಿತು ಅರಿವು ಹೊಂದುವುದು ಅತ್ಯಗತ್ಯ ಎಂದು ತಿಳಿಸಿದರು.

ಡಿಜಿಟಲ್ ಬ್ಯಾಂಕಿಂಗ್ ಉಪಯುಕ್ತವಾಗಿದ್ದು, ಸುರಕ್ಷಿತ ಮಾರ್ಗಗಳ ಮೂಲಕ ಬಳಕೆ ಮಾಡಬೇಕು ಎಂದರಲ್ಲದೆ, ಡಿಜಿಟಲ್ ಬ್ಯಾಂಕಿಂಗ್ ಅಳವಡಿಸಿಕೊಳ್ಳುವುದರಿಂದ ನೋಟುಗಳ ಮುದ್ರಣ, ನಿರ್ವಹಣೆಗೆ ತಗುಲುವ ಖರ್ಚುಗಳನ್ನು ತಗ್ಗಿಸಬಹುದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಜೆ.ಆನಂದ್, ಸೊಣ್ಣಹಳ್ಳಿಪುರ ಆರ್‌ಸೆಟಿಯ ನಿರ್ದೇಶಕರಾದ ಗಿರಿಯಪ್ಪ, ಆರ್ಥಿಕ ಸಾಕ್ಷರತಾ ಕೇಂದ್ರದ ನೆಲಮಂಗಲ ತಾಲ್ಲೂಕಿನ ಸಲಹೆಗಾರರಾದ ಮಹಾಂತೇಶಯ್ಯ ಹಾಗೂ ದೇವನಹಳ್ಳಿ ತಾಲ್ಲೂಕಿನ ಸಲಹೆಗಾರರಾದ ಮಂಜುನಾಥ್, ಜ್ಞಾನಮಂದಿರ ಕಾಲೇಜಿನ ಪ್ರಾಂಶುಪಾಲರಾದ ಶ್ರೀಕಾಂತ್ ಸೇರಿದಂತೆ ಬ್ಯಾಂಕಿನ ಅಧಿಕಾರಿಗಳು, ರುಡ್‌ಸೆಟ್ ಸಂಸ್ಥೆಯ ಸಿಬ್ಬಂದಿಗಳು, ಸ್ವಸಹಾಯ ಸಂಘದ ಮಹಿಳೆಯರು, ಜ್ಞಾನ ಮಂದಿರ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ಆರ್ಥಿಕ ಸಾಕ್ಷರತೆ ಕುರಿತು ಆಯೋಜಿಸಲಾಗಿದ್ದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

5 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

12 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

15 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

16 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago