ಆರ್ಥಿಕ ಶಿಸ್ತು ರೂಢಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ ನೀಡಿದ ಮುಖ್ಯ ಪ್ರಬಂಧಕ ಮಧುಕರ್

ಅಳತೆ ಮೀರಿದ ಸಾಲದಿಂದ ಆರ್ಥಿಕ ದುಃಸ್ಥಿತಿ ಉಂಟಾಗುವುದಲ್ಲದೆ, ಮಾನಸಿಕ ಆರೋಗ್ಯವು ಹದಗೆಡುತ್ತದೆ. ಇಂತಹ ಸಮಸ್ಯೆಗಳನ್ನು ತಪ್ಪಿಸಲು ವಿದ್ಯಾರ್ಥಿ ದೆಸೆಯಿಂದಲೇ ಉಳಿತಾಯದ ಕುರಿತು ಅರಿವು ಸೇರಿದಂತೆ ಆರ್ಥಿಕ ಶಿಸ್ತನ್ನು ರೂಢಿಸಿಕೊಳ್ಳಬೇಕೆಂದು ಬ್ಯಾಂಕಿನ ಮುಖ್ಯ ಪ್ರಬಂಧಕರಾದ ಮಧುಕರ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಭಾರತೀಯ ರಿಸರ್ವ್ ಬ್ಯಾಂಕಿನ ಆದೇಶದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಘ್ರಣೀಯ ಬ್ಯಾಂಕ್ ಹಾಗೂ ರುಡ್‌ಸೆಟ್ ಸಂಸ್ಥೆಯ ಸಹಯೋಗದೊಂದಿಗೆ ನೆಲಮಂಗಲ ತಾಲ್ಲೂಕಿನ ರುಡ್‌ಸೆಟ್ ಸಂಸ್ಥೆಯಲ್ಲಿ ಇಂದು ಆರ್ಥಿಕ ಸಾಕ್ಷರತಾ ಸಪ್ತಾಹದ ಅಂಗವಾಗಿ ಆರ್ಥಿಕ ಸಾಕ್ಷರತಾ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಸಭಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಭಾರತೀಯ ರಿಸರ್ವ್ ಬ್ಯಾಂಕಿನ ಆದೇಶದಂತೆ ಆರ್ಥಿಕ ಸಾಕ್ಷರತಾ ಸಪ್ತಾಹವನ್ನು ಫೆಬ್ರವರಿ 13 ರಿಂದ 17 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರಲ್ಲಿ ಆರ್ಥಿಕ ಶಿಸ್ತು ಮೂಡಬೇಕಾದರೆ ಎಲ್ಲರೂ ಆರ್ಥಿಕ ಸಾಕ್ಷರತೆ ಕುರಿತು ಅರಿವು ಹೊಂದುವುದು ಅತ್ಯಗತ್ಯ ಎಂದು ತಿಳಿಸಿದರು.

ಡಿಜಿಟಲ್ ಬ್ಯಾಂಕಿಂಗ್ ಉಪಯುಕ್ತವಾಗಿದ್ದು, ಸುರಕ್ಷಿತ ಮಾರ್ಗಗಳ ಮೂಲಕ ಬಳಕೆ ಮಾಡಬೇಕು ಎಂದರಲ್ಲದೆ, ಡಿಜಿಟಲ್ ಬ್ಯಾಂಕಿಂಗ್ ಅಳವಡಿಸಿಕೊಳ್ಳುವುದರಿಂದ ನೋಟುಗಳ ಮುದ್ರಣ, ನಿರ್ವಹಣೆಗೆ ತಗುಲುವ ಖರ್ಚುಗಳನ್ನು ತಗ್ಗಿಸಬಹುದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಜೆ.ಆನಂದ್, ಸೊಣ್ಣಹಳ್ಳಿಪುರ ಆರ್‌ಸೆಟಿಯ ನಿರ್ದೇಶಕರಾದ ಗಿರಿಯಪ್ಪ, ಆರ್ಥಿಕ ಸಾಕ್ಷರತಾ ಕೇಂದ್ರದ ನೆಲಮಂಗಲ ತಾಲ್ಲೂಕಿನ ಸಲಹೆಗಾರರಾದ ಮಹಾಂತೇಶಯ್ಯ ಹಾಗೂ ದೇವನಹಳ್ಳಿ ತಾಲ್ಲೂಕಿನ ಸಲಹೆಗಾರರಾದ ಮಂಜುನಾಥ್, ಜ್ಞಾನಮಂದಿರ ಕಾಲೇಜಿನ ಪ್ರಾಂಶುಪಾಲರಾದ ಶ್ರೀಕಾಂತ್ ಸೇರಿದಂತೆ ಬ್ಯಾಂಕಿನ ಅಧಿಕಾರಿಗಳು, ರುಡ್‌ಸೆಟ್ ಸಂಸ್ಥೆಯ ಸಿಬ್ಬಂದಿಗಳು, ಸ್ವಸಹಾಯ ಸಂಘದ ಮಹಿಳೆಯರು, ಜ್ಞಾನ ಮಂದಿರ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ಆರ್ಥಿಕ ಸಾಕ್ಷರತೆ ಕುರಿತು ಆಯೋಜಿಸಲಾಗಿದ್ದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

40 minutes ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

3 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

6 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

21 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago