ಆರ್ಥಿಕ ಶಿಸ್ತು ರೂಢಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ ನೀಡಿದ ಮುಖ್ಯ ಪ್ರಬಂಧಕ ಮಧುಕರ್

ಅಳತೆ ಮೀರಿದ ಸಾಲದಿಂದ ಆರ್ಥಿಕ ದುಃಸ್ಥಿತಿ ಉಂಟಾಗುವುದಲ್ಲದೆ, ಮಾನಸಿಕ ಆರೋಗ್ಯವು ಹದಗೆಡುತ್ತದೆ. ಇಂತಹ ಸಮಸ್ಯೆಗಳನ್ನು ತಪ್ಪಿಸಲು ವಿದ್ಯಾರ್ಥಿ ದೆಸೆಯಿಂದಲೇ ಉಳಿತಾಯದ ಕುರಿತು ಅರಿವು ಸೇರಿದಂತೆ ಆರ್ಥಿಕ ಶಿಸ್ತನ್ನು ರೂಢಿಸಿಕೊಳ್ಳಬೇಕೆಂದು ಬ್ಯಾಂಕಿನ ಮುಖ್ಯ ಪ್ರಬಂಧಕರಾದ ಮಧುಕರ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಭಾರತೀಯ ರಿಸರ್ವ್ ಬ್ಯಾಂಕಿನ ಆದೇಶದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಘ್ರಣೀಯ ಬ್ಯಾಂಕ್ ಹಾಗೂ ರುಡ್‌ಸೆಟ್ ಸಂಸ್ಥೆಯ ಸಹಯೋಗದೊಂದಿಗೆ ನೆಲಮಂಗಲ ತಾಲ್ಲೂಕಿನ ರುಡ್‌ಸೆಟ್ ಸಂಸ್ಥೆಯಲ್ಲಿ ಇಂದು ಆರ್ಥಿಕ ಸಾಕ್ಷರತಾ ಸಪ್ತಾಹದ ಅಂಗವಾಗಿ ಆರ್ಥಿಕ ಸಾಕ್ಷರತಾ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಸಭಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಭಾರತೀಯ ರಿಸರ್ವ್ ಬ್ಯಾಂಕಿನ ಆದೇಶದಂತೆ ಆರ್ಥಿಕ ಸಾಕ್ಷರತಾ ಸಪ್ತಾಹವನ್ನು ಫೆಬ್ರವರಿ 13 ರಿಂದ 17 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರಲ್ಲಿ ಆರ್ಥಿಕ ಶಿಸ್ತು ಮೂಡಬೇಕಾದರೆ ಎಲ್ಲರೂ ಆರ್ಥಿಕ ಸಾಕ್ಷರತೆ ಕುರಿತು ಅರಿವು ಹೊಂದುವುದು ಅತ್ಯಗತ್ಯ ಎಂದು ತಿಳಿಸಿದರು.

ಡಿಜಿಟಲ್ ಬ್ಯಾಂಕಿಂಗ್ ಉಪಯುಕ್ತವಾಗಿದ್ದು, ಸುರಕ್ಷಿತ ಮಾರ್ಗಗಳ ಮೂಲಕ ಬಳಕೆ ಮಾಡಬೇಕು ಎಂದರಲ್ಲದೆ, ಡಿಜಿಟಲ್ ಬ್ಯಾಂಕಿಂಗ್ ಅಳವಡಿಸಿಕೊಳ್ಳುವುದರಿಂದ ನೋಟುಗಳ ಮುದ್ರಣ, ನಿರ್ವಹಣೆಗೆ ತಗುಲುವ ಖರ್ಚುಗಳನ್ನು ತಗ್ಗಿಸಬಹುದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಜೆ.ಆನಂದ್, ಸೊಣ್ಣಹಳ್ಳಿಪುರ ಆರ್‌ಸೆಟಿಯ ನಿರ್ದೇಶಕರಾದ ಗಿರಿಯಪ್ಪ, ಆರ್ಥಿಕ ಸಾಕ್ಷರತಾ ಕೇಂದ್ರದ ನೆಲಮಂಗಲ ತಾಲ್ಲೂಕಿನ ಸಲಹೆಗಾರರಾದ ಮಹಾಂತೇಶಯ್ಯ ಹಾಗೂ ದೇವನಹಳ್ಳಿ ತಾಲ್ಲೂಕಿನ ಸಲಹೆಗಾರರಾದ ಮಂಜುನಾಥ್, ಜ್ಞಾನಮಂದಿರ ಕಾಲೇಜಿನ ಪ್ರಾಂಶುಪಾಲರಾದ ಶ್ರೀಕಾಂತ್ ಸೇರಿದಂತೆ ಬ್ಯಾಂಕಿನ ಅಧಿಕಾರಿಗಳು, ರುಡ್‌ಸೆಟ್ ಸಂಸ್ಥೆಯ ಸಿಬ್ಬಂದಿಗಳು, ಸ್ವಸಹಾಯ ಸಂಘದ ಮಹಿಳೆಯರು, ಜ್ಞಾನ ಮಂದಿರ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ಆರ್ಥಿಕ ಸಾಕ್ಷರತೆ ಕುರಿತು ಆಯೋಜಿಸಲಾಗಿದ್ದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

Ramesh Babu

Journalist

Recent Posts

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

20 minutes ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

14 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

17 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago