ಅಳತೆ ಮೀರಿದ ಸಾಲದಿಂದ ಆರ್ಥಿಕ ದುಃಸ್ಥಿತಿ ಉಂಟಾಗುವುದಲ್ಲದೆ, ಮಾನಸಿಕ ಆರೋಗ್ಯವು ಹದಗೆಡುತ್ತದೆ. ಇಂತಹ ಸಮಸ್ಯೆಗಳನ್ನು ತಪ್ಪಿಸಲು ವಿದ್ಯಾರ್ಥಿ ದೆಸೆಯಿಂದಲೇ ಉಳಿತಾಯದ ಕುರಿತು ಅರಿವು ಸೇರಿದಂತೆ ಆರ್ಥಿಕ ಶಿಸ್ತನ್ನು ರೂಢಿಸಿಕೊಳ್ಳಬೇಕೆಂದು ಬ್ಯಾಂಕಿನ ಮುಖ್ಯ ಪ್ರಬಂಧಕರಾದ ಮಧುಕರ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಭಾರತೀಯ ರಿಸರ್ವ್ ಬ್ಯಾಂಕಿನ ಆದೇಶದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಘ್ರಣೀಯ ಬ್ಯಾಂಕ್ ಹಾಗೂ ರುಡ್ಸೆಟ್ ಸಂಸ್ಥೆಯ ಸಹಯೋಗದೊಂದಿಗೆ ನೆಲಮಂಗಲ ತಾಲ್ಲೂಕಿನ ರುಡ್ಸೆಟ್ ಸಂಸ್ಥೆಯಲ್ಲಿ ಇಂದು ಆರ್ಥಿಕ ಸಾಕ್ಷರತಾ ಸಪ್ತಾಹದ ಅಂಗವಾಗಿ ಆರ್ಥಿಕ ಸಾಕ್ಷರತಾ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಸಭಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಭಾರತೀಯ ರಿಸರ್ವ್ ಬ್ಯಾಂಕಿನ ಆದೇಶದಂತೆ ಆರ್ಥಿಕ ಸಾಕ್ಷರತಾ ಸಪ್ತಾಹವನ್ನು ಫೆಬ್ರವರಿ 13 ರಿಂದ 17 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರಲ್ಲಿ ಆರ್ಥಿಕ ಶಿಸ್ತು ಮೂಡಬೇಕಾದರೆ ಎಲ್ಲರೂ ಆರ್ಥಿಕ ಸಾಕ್ಷರತೆ ಕುರಿತು ಅರಿವು ಹೊಂದುವುದು ಅತ್ಯಗತ್ಯ ಎಂದು ತಿಳಿಸಿದರು.
ಡಿಜಿಟಲ್ ಬ್ಯಾಂಕಿಂಗ್ ಉಪಯುಕ್ತವಾಗಿದ್ದು, ಸುರಕ್ಷಿತ ಮಾರ್ಗಗಳ ಮೂಲಕ ಬಳಕೆ ಮಾಡಬೇಕು ಎಂದರಲ್ಲದೆ, ಡಿಜಿಟಲ್ ಬ್ಯಾಂಕಿಂಗ್ ಅಳವಡಿಸಿಕೊಳ್ಳುವುದರಿಂದ ನೋಟುಗಳ ಮುದ್ರಣ, ನಿರ್ವಹಣೆಗೆ ತಗುಲುವ ಖರ್ಚುಗಳನ್ನು ತಗ್ಗಿಸಬಹುದಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ಜೆ.ಆನಂದ್, ಸೊಣ್ಣಹಳ್ಳಿಪುರ ಆರ್ಸೆಟಿಯ ನಿರ್ದೇಶಕರಾದ ಗಿರಿಯಪ್ಪ, ಆರ್ಥಿಕ ಸಾಕ್ಷರತಾ ಕೇಂದ್ರದ ನೆಲಮಂಗಲ ತಾಲ್ಲೂಕಿನ ಸಲಹೆಗಾರರಾದ ಮಹಾಂತೇಶಯ್ಯ ಹಾಗೂ ದೇವನಹಳ್ಳಿ ತಾಲ್ಲೂಕಿನ ಸಲಹೆಗಾರರಾದ ಮಂಜುನಾಥ್, ಜ್ಞಾನಮಂದಿರ ಕಾಲೇಜಿನ ಪ್ರಾಂಶುಪಾಲರಾದ ಶ್ರೀಕಾಂತ್ ಸೇರಿದಂತೆ ಬ್ಯಾಂಕಿನ ಅಧಿಕಾರಿಗಳು, ರುಡ್ಸೆಟ್ ಸಂಸ್ಥೆಯ ಸಿಬ್ಬಂದಿಗಳು, ಸ್ವಸಹಾಯ ಸಂಘದ ಮಹಿಳೆಯರು, ಜ್ಞಾನ ಮಂದಿರ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಆರ್ಥಿಕ ಸಾಕ್ಷರತೆ ಕುರಿತು ಆಯೋಜಿಸಲಾಗಿದ್ದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…