‘ಆರ್ಥಿಕ ಸಾಕ್ಷರತೆಯನ್ನು ಹೊಂದುವ ಮೂಲಕ ಮಹಿಳೆಯರು ಸಬಲೀಕರಣವಾಗಬೇಕು’

ಸ್ವ ಪ್ರೇರಣೆ, ಸಮಯ ನಿರ್ವಹಣೆಯನ್ನು ಅಳವಡಿಸಿಕೊಂಡು, ಸ್ವಯಂ ಉದ್ಯಮಶೀಲ ಮಹಿಳೆಯಾಗುವುದರೊಂದಿಗೆ, ಸಾಮಾಜಿಕ, ಆರ್ಥಿಕವಾಗಿ ಸದೃಢರಾಗುವ ಮೂಲಕ ಮಹಿಳೆಯರು ಸಬಲೀಕರಣವಾಗಬೇಕೆಂದು ಕೆನರಾ ಬ್ಯಾಂಕ್‌ನ, ಅರಶಿನಕುಂಟೆ ಶಾಖೆಯ ವ್ಯವಸ್ಥಾಪಕರಾದ ಕಾವ್ಯ ಅವರು ಶಿಬಿರಾರ್ಥಿಗಳಿಗೆ ಕರೆ ನೀಡಿದರು.

ನೆಲಮಂಗಲ ತಾಲ್ಲೂಕಿನ ಅರಶಿನಕುಂಟೆಯಲ್ಲಿರುವ ರುಡ್‌ಸೆಟ್‌ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಜವಾಬ್ದಾರಿಗಳನ್ನು ಅರಿತು, ಸರಿಯಾದ ಮಾರ್ಗದಲ್ಲಿ ಮಹಿಳೆಯರು ಸ್ವಾಭಿಮಾನದ ಜೀವನವನ್ನು ಕಟ್ಟಿಕೊಳ್ಳಬೇಕೆಂದು ತಿಳಿಸಿದರಲ್ಲದೆ, ಸರ್ಕಾರ ಹಾಗೂ ಬ್ಯಾಂಕಿನಲ್ಲಿ ಮಹಿಳೆಯರಿಗೆಂದೇ ಇರುವ ಯೋಜನೆಗಳ ಸೌಲಭ್ಯ, ಸಹಾಯಧನದ ಸೌಲಭ್ಯಗಳನ್ನು ಪಡೆಯಬೇಕೆಂದು ಹೇಳಿದರು.

ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಹೆಣ್ಣು ಕೇವಲ ಸಂತಾನಾಭಿವೃದ್ಧಿಗೆ ಮಾತ್ರವಲ್ಲದೇ, ಎಲ್ಲ ಕ್ಷೇತ್ರಗಳಲ್ಲೂ ಸರಿ ಸಮಾನವಾದ ಪಾಲನ್ನು ಪಡೆದಿದ್ದಾಳೆ, ತನ್ನದೇ ಆದ ಛಾಪನ್ನು ಮೂಡಿಸಿದ್ದಾಳೆ ಎಂದರು.

ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಉಕ್ತಿಯಂತೆ ಆಕೆಯಿಂದು ಎಲ್ಲ ಕ್ಷೇತ್ರದಲ್ಲೂ ತನ್ನನ್ನು ಗುರುತಿಸಿಕೊಂಡಿದ್ದಾಳೆ. ಅಂತೆಯೇ ಮಹಿಳಾ ಶಿಬಿರಾರ್ಥಿಗಳಾದ ಬದುಕಿನ ಅವಶ್ಯಕತೆಗಳ ಪೂರೈಕೆಗಾಗಿ ಕೌಶಲ್ಯಗಳನ್ನು ಹೊಂದಿ, ದುಡಿಮೆ ಆರಂಭಿಸಿ ಎಂದು ಸಲಹೆ ನೀಡಿದರಲ್ಲದೆ, ತಾವುಗಳು ಸಾಧನೆ ಮಾಡಲು ಅಗತ್ಯ ಪ್ರೇರಣೆ ಹೊಂದಿ ಸಾಧಿಸಬೇಕೆಂದು ಎಂದು ಹೇಳಿದರು.

ರುಡ್‌ಸೆಟ್‌ ಸಂಸ್ಥೆಯಲ್ಲಿ ತರಬೇತಿ ಪಡೆದು ಯಶಸ್ವಿ ಮಹಿಳಾ ಉದ್ಯಮಿಗಳಾಗಿರುವವರ ಪೈಕಿ ಸಾಂಕೇತಿಕವಾಗಿ ಭವ್ಯ, ಗಾಯತ್ರಿ ಹಾಗೂ ಶೃತಿ ಎಂಬ ಮಹಿಳಾ ಉದ್ಯಮಿಗಳು ಭಾಗವಹಿಸಿ, ತಮ್ಮ ಉದ್ಯಮದ ದಾರಿ ಬೆಳೆದು ಬಂದ ಹಾದಿಯ ಕುರಿತು ಶಿಬಿರಾರ್ಥಿಗಳೊಂದಿಗೆ ಹಂಚಿಕೊಂಡರು.

ಮಹಿಳಾ ದಿನಾಚರಣೆ ನಿಮಿತ್ತ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ‌ ಶಿಬಿರಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರುಡ್‌ಸೆಟ್‌ ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ ಹಾಗೂ ವಿದ್ಯಾ ಹೊಸಮನಿ,‌ ಕಚೇರಿ ಸಹಾಯಕರಾದ ಅರುಣ್‌ಕುಮಾರ್ ಹಾಗೂ ಸಂತೋಷ್ ಸೇರಿದಂತೆ ಸಹಸಿಬ್ಬಂದಿ ಹಾಗೂ ಬ್ಯೂಟಿಪಾರ್ಲರ್ ತರಬೇತಿಯ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಶಿಬಿರಾರ್ಥಿಗಳಿಂದ ಜಾಥಾ ಕಾರ್ಯಕ್ರಮ ಹಾಗೂ ಮಾನವ ಸರಪಳಿ ನಿರ್ಮಿಸಿ, ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

11 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

12 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

16 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

18 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

21 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

22 hours ago