ಸ್ವ ಪ್ರೇರಣೆ, ಸಮಯ ನಿರ್ವಹಣೆಯನ್ನು ಅಳವಡಿಸಿಕೊಂಡು, ಸ್ವಯಂ ಉದ್ಯಮಶೀಲ ಮಹಿಳೆಯಾಗುವುದರೊಂದಿಗೆ, ಸಾಮಾಜಿಕ, ಆರ್ಥಿಕವಾಗಿ ಸದೃಢರಾಗುವ ಮೂಲಕ ಮಹಿಳೆಯರು ಸಬಲೀಕರಣವಾಗಬೇಕೆಂದು ಕೆನರಾ ಬ್ಯಾಂಕ್ನ, ಅರಶಿನಕುಂಟೆ ಶಾಖೆಯ ವ್ಯವಸ್ಥಾಪಕರಾದ ಕಾವ್ಯ ಅವರು ಶಿಬಿರಾರ್ಥಿಗಳಿಗೆ ಕರೆ ನೀಡಿದರು.
ನೆಲಮಂಗಲ ತಾಲ್ಲೂಕಿನ ಅರಶಿನಕುಂಟೆಯಲ್ಲಿರುವ ರುಡ್ಸೆಟ್ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಜವಾಬ್ದಾರಿಗಳನ್ನು ಅರಿತು, ಸರಿಯಾದ ಮಾರ್ಗದಲ್ಲಿ ಮಹಿಳೆಯರು ಸ್ವಾಭಿಮಾನದ ಜೀವನವನ್ನು ಕಟ್ಟಿಕೊಳ್ಳಬೇಕೆಂದು ತಿಳಿಸಿದರಲ್ಲದೆ, ಸರ್ಕಾರ ಹಾಗೂ ಬ್ಯಾಂಕಿನಲ್ಲಿ ಮಹಿಳೆಯರಿಗೆಂದೇ ಇರುವ ಯೋಜನೆಗಳ ಸೌಲಭ್ಯ, ಸಹಾಯಧನದ ಸೌಲಭ್ಯಗಳನ್ನು ಪಡೆಯಬೇಕೆಂದು ಹೇಳಿದರು.
ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಉಕ್ತಿಯಂತೆ ಆಕೆಯಿಂದು ಎಲ್ಲ ಕ್ಷೇತ್ರದಲ್ಲೂ ತನ್ನನ್ನು ಗುರುತಿಸಿಕೊಂಡಿದ್ದಾಳೆ. ಅಂತೆಯೇ ಮಹಿಳಾ ಶಿಬಿರಾರ್ಥಿಗಳಾದ ಬದುಕಿನ ಅವಶ್ಯಕತೆಗಳ ಪೂರೈಕೆಗಾಗಿ ಕೌಶಲ್ಯಗಳನ್ನು ಹೊಂದಿ, ದುಡಿಮೆ ಆರಂಭಿಸಿ ಎಂದು ಸಲಹೆ ನೀಡಿದರಲ್ಲದೆ, ತಾವುಗಳು ಸಾಧನೆ ಮಾಡಲು ಅಗತ್ಯ ಪ್ರೇರಣೆ ಹೊಂದಿ ಸಾಧಿಸಬೇಕೆಂದು ಎಂದು ಹೇಳಿದರು.
ರುಡ್ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆದು ಯಶಸ್ವಿ ಮಹಿಳಾ ಉದ್ಯಮಿಗಳಾಗಿರುವವರ ಪೈಕಿ ಸಾಂಕೇತಿಕವಾಗಿ ಭವ್ಯ, ಗಾಯತ್ರಿ ಹಾಗೂ ಶೃತಿ ಎಂಬ ಮಹಿಳಾ ಉದ್ಯಮಿಗಳು ಭಾಗವಹಿಸಿ, ತಮ್ಮ ಉದ್ಯಮದ ದಾರಿ ಬೆಳೆದು ಬಂದ ಹಾದಿಯ ಕುರಿತು ಶಿಬಿರಾರ್ಥಿಗಳೊಂದಿಗೆ ಹಂಚಿಕೊಂಡರು.
ಮಹಿಳಾ ದಿನಾಚರಣೆ ನಿಮಿತ್ತ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಿಬಿರಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…