ಸ್ವ ಪ್ರೇರಣೆ, ಸಮಯ ನಿರ್ವಹಣೆಯನ್ನು ಅಳವಡಿಸಿಕೊಂಡು, ಸ್ವಯಂ ಉದ್ಯಮಶೀಲ ಮಹಿಳೆಯಾಗುವುದರೊಂದಿಗೆ, ಸಾಮಾಜಿಕ, ಆರ್ಥಿಕವಾಗಿ ಸದೃಢರಾಗುವ ಮೂಲಕ ಮಹಿಳೆಯರು ಸಬಲೀಕರಣವಾಗಬೇಕೆಂದು ಕೆನರಾ ಬ್ಯಾಂಕ್ನ, ಅರಶಿನಕುಂಟೆ ಶಾಖೆಯ ವ್ಯವಸ್ಥಾಪಕರಾದ ಕಾವ್ಯ ಅವರು ಶಿಬಿರಾರ್ಥಿಗಳಿಗೆ ಕರೆ ನೀಡಿದರು.
ನೆಲಮಂಗಲ ತಾಲ್ಲೂಕಿನ ಅರಶಿನಕುಂಟೆಯಲ್ಲಿರುವ ರುಡ್ಸೆಟ್ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಜವಾಬ್ದಾರಿಗಳನ್ನು ಅರಿತು, ಸರಿಯಾದ ಮಾರ್ಗದಲ್ಲಿ ಮಹಿಳೆಯರು ಸ್ವಾಭಿಮಾನದ ಜೀವನವನ್ನು ಕಟ್ಟಿಕೊಳ್ಳಬೇಕೆಂದು ತಿಳಿಸಿದರಲ್ಲದೆ, ಸರ್ಕಾರ ಹಾಗೂ ಬ್ಯಾಂಕಿನಲ್ಲಿ ಮಹಿಳೆಯರಿಗೆಂದೇ ಇರುವ ಯೋಜನೆಗಳ ಸೌಲಭ್ಯ, ಸಹಾಯಧನದ ಸೌಲಭ್ಯಗಳನ್ನು ಪಡೆಯಬೇಕೆಂದು ಹೇಳಿದರು.
ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಉಕ್ತಿಯಂತೆ ಆಕೆಯಿಂದು ಎಲ್ಲ ಕ್ಷೇತ್ರದಲ್ಲೂ ತನ್ನನ್ನು ಗುರುತಿಸಿಕೊಂಡಿದ್ದಾಳೆ. ಅಂತೆಯೇ ಮಹಿಳಾ ಶಿಬಿರಾರ್ಥಿಗಳಾದ ಬದುಕಿನ ಅವಶ್ಯಕತೆಗಳ ಪೂರೈಕೆಗಾಗಿ ಕೌಶಲ್ಯಗಳನ್ನು ಹೊಂದಿ, ದುಡಿಮೆ ಆರಂಭಿಸಿ ಎಂದು ಸಲಹೆ ನೀಡಿದರಲ್ಲದೆ, ತಾವುಗಳು ಸಾಧನೆ ಮಾಡಲು ಅಗತ್ಯ ಪ್ರೇರಣೆ ಹೊಂದಿ ಸಾಧಿಸಬೇಕೆಂದು ಎಂದು ಹೇಳಿದರು.
ರುಡ್ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆದು ಯಶಸ್ವಿ ಮಹಿಳಾ ಉದ್ಯಮಿಗಳಾಗಿರುವವರ ಪೈಕಿ ಸಾಂಕೇತಿಕವಾಗಿ ಭವ್ಯ, ಗಾಯತ್ರಿ ಹಾಗೂ ಶೃತಿ ಎಂಬ ಮಹಿಳಾ ಉದ್ಯಮಿಗಳು ಭಾಗವಹಿಸಿ, ತಮ್ಮ ಉದ್ಯಮದ ದಾರಿ ಬೆಳೆದು ಬಂದ ಹಾದಿಯ ಕುರಿತು ಶಿಬಿರಾರ್ಥಿಗಳೊಂದಿಗೆ ಹಂಚಿಕೊಂಡರು.
ಮಹಿಳಾ ದಿನಾಚರಣೆ ನಿಮಿತ್ತ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಿಬಿರಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…