ಸ್ವ ಪ್ರೇರಣೆ, ಸಮಯ ನಿರ್ವಹಣೆಯನ್ನು ಅಳವಡಿಸಿಕೊಂಡು, ಸ್ವಯಂ ಉದ್ಯಮಶೀಲ ಮಹಿಳೆಯಾಗುವುದರೊಂದಿಗೆ, ಸಾಮಾಜಿಕ, ಆರ್ಥಿಕವಾಗಿ ಸದೃಢರಾಗುವ ಮೂಲಕ ಮಹಿಳೆಯರು ಸಬಲೀಕರಣವಾಗಬೇಕೆಂದು ಕೆನರಾ ಬ್ಯಾಂಕ್ನ, ಅರಶಿನಕುಂಟೆ ಶಾಖೆಯ ವ್ಯವಸ್ಥಾಪಕರಾದ ಕಾವ್ಯ ಅವರು ಶಿಬಿರಾರ್ಥಿಗಳಿಗೆ ಕರೆ ನೀಡಿದರು.
ನೆಲಮಂಗಲ ತಾಲ್ಲೂಕಿನ ಅರಶಿನಕುಂಟೆಯಲ್ಲಿರುವ ರುಡ್ಸೆಟ್ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಜವಾಬ್ದಾರಿಗಳನ್ನು ಅರಿತು, ಸರಿಯಾದ ಮಾರ್ಗದಲ್ಲಿ ಮಹಿಳೆಯರು ಸ್ವಾಭಿಮಾನದ ಜೀವನವನ್ನು ಕಟ್ಟಿಕೊಳ್ಳಬೇಕೆಂದು ತಿಳಿಸಿದರಲ್ಲದೆ, ಸರ್ಕಾರ ಹಾಗೂ ಬ್ಯಾಂಕಿನಲ್ಲಿ ಮಹಿಳೆಯರಿಗೆಂದೇ ಇರುವ ಯೋಜನೆಗಳ ಸೌಲಭ್ಯ, ಸಹಾಯಧನದ ಸೌಲಭ್ಯಗಳನ್ನು ಪಡೆಯಬೇಕೆಂದು ಹೇಳಿದರು.
ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಉಕ್ತಿಯಂತೆ ಆಕೆಯಿಂದು ಎಲ್ಲ ಕ್ಷೇತ್ರದಲ್ಲೂ ತನ್ನನ್ನು ಗುರುತಿಸಿಕೊಂಡಿದ್ದಾಳೆ. ಅಂತೆಯೇ ಮಹಿಳಾ ಶಿಬಿರಾರ್ಥಿಗಳಾದ ಬದುಕಿನ ಅವಶ್ಯಕತೆಗಳ ಪೂರೈಕೆಗಾಗಿ ಕೌಶಲ್ಯಗಳನ್ನು ಹೊಂದಿ, ದುಡಿಮೆ ಆರಂಭಿಸಿ ಎಂದು ಸಲಹೆ ನೀಡಿದರಲ್ಲದೆ, ತಾವುಗಳು ಸಾಧನೆ ಮಾಡಲು ಅಗತ್ಯ ಪ್ರೇರಣೆ ಹೊಂದಿ ಸಾಧಿಸಬೇಕೆಂದು ಎಂದು ಹೇಳಿದರು.
ರುಡ್ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆದು ಯಶಸ್ವಿ ಮಹಿಳಾ ಉದ್ಯಮಿಗಳಾಗಿರುವವರ ಪೈಕಿ ಸಾಂಕೇತಿಕವಾಗಿ ಭವ್ಯ, ಗಾಯತ್ರಿ ಹಾಗೂ ಶೃತಿ ಎಂಬ ಮಹಿಳಾ ಉದ್ಯಮಿಗಳು ಭಾಗವಹಿಸಿ, ತಮ್ಮ ಉದ್ಯಮದ ದಾರಿ ಬೆಳೆದು ಬಂದ ಹಾದಿಯ ಕುರಿತು ಶಿಬಿರಾರ್ಥಿಗಳೊಂದಿಗೆ ಹಂಚಿಕೊಂಡರು.
ಮಹಿಳಾ ದಿನಾಚರಣೆ ನಿಮಿತ್ತ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಿಬಿರಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…