ಸ್ವ ಪ್ರೇರಣೆ, ಸಮಯ ನಿರ್ವಹಣೆಯನ್ನು ಅಳವಡಿಸಿಕೊಂಡು, ಸ್ವಯಂ ಉದ್ಯಮಶೀಲ ಮಹಿಳೆಯಾಗುವುದರೊಂದಿಗೆ, ಸಾಮಾಜಿಕ, ಆರ್ಥಿಕವಾಗಿ ಸದೃಢರಾಗುವ ಮೂಲಕ ಮಹಿಳೆಯರು ಸಬಲೀಕರಣವಾಗಬೇಕೆಂದು ಕೆನರಾ ಬ್ಯಾಂಕ್ನ, ಅರಶಿನಕುಂಟೆ ಶಾಖೆಯ ವ್ಯವಸ್ಥಾಪಕರಾದ ಕಾವ್ಯ ಅವರು ಶಿಬಿರಾರ್ಥಿಗಳಿಗೆ ಕರೆ ನೀಡಿದರು.
ನೆಲಮಂಗಲ ತಾಲ್ಲೂಕಿನ ಅರಶಿನಕುಂಟೆಯಲ್ಲಿರುವ ರುಡ್ಸೆಟ್ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಜವಾಬ್ದಾರಿಗಳನ್ನು ಅರಿತು, ಸರಿಯಾದ ಮಾರ್ಗದಲ್ಲಿ ಮಹಿಳೆಯರು ಸ್ವಾಭಿಮಾನದ ಜೀವನವನ್ನು ಕಟ್ಟಿಕೊಳ್ಳಬೇಕೆಂದು ತಿಳಿಸಿದರಲ್ಲದೆ, ಸರ್ಕಾರ ಹಾಗೂ ಬ್ಯಾಂಕಿನಲ್ಲಿ ಮಹಿಳೆಯರಿಗೆಂದೇ ಇರುವ ಯೋಜನೆಗಳ ಸೌಲಭ್ಯ, ಸಹಾಯಧನದ ಸೌಲಭ್ಯಗಳನ್ನು ಪಡೆಯಬೇಕೆಂದು ಹೇಳಿದರು.
ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಉಕ್ತಿಯಂತೆ ಆಕೆಯಿಂದು ಎಲ್ಲ ಕ್ಷೇತ್ರದಲ್ಲೂ ತನ್ನನ್ನು ಗುರುತಿಸಿಕೊಂಡಿದ್ದಾಳೆ. ಅಂತೆಯೇ ಮಹಿಳಾ ಶಿಬಿರಾರ್ಥಿಗಳಾದ ಬದುಕಿನ ಅವಶ್ಯಕತೆಗಳ ಪೂರೈಕೆಗಾಗಿ ಕೌಶಲ್ಯಗಳನ್ನು ಹೊಂದಿ, ದುಡಿಮೆ ಆರಂಭಿಸಿ ಎಂದು ಸಲಹೆ ನೀಡಿದರಲ್ಲದೆ, ತಾವುಗಳು ಸಾಧನೆ ಮಾಡಲು ಅಗತ್ಯ ಪ್ರೇರಣೆ ಹೊಂದಿ ಸಾಧಿಸಬೇಕೆಂದು ಎಂದು ಹೇಳಿದರು.
ರುಡ್ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆದು ಯಶಸ್ವಿ ಮಹಿಳಾ ಉದ್ಯಮಿಗಳಾಗಿರುವವರ ಪೈಕಿ ಸಾಂಕೇತಿಕವಾಗಿ ಭವ್ಯ, ಗಾಯತ್ರಿ ಹಾಗೂ ಶೃತಿ ಎಂಬ ಮಹಿಳಾ ಉದ್ಯಮಿಗಳು ಭಾಗವಹಿಸಿ, ತಮ್ಮ ಉದ್ಯಮದ ದಾರಿ ಬೆಳೆದು ಬಂದ ಹಾದಿಯ ಕುರಿತು ಶಿಬಿರಾರ್ಥಿಗಳೊಂದಿಗೆ ಹಂಚಿಕೊಂಡರು.
ಮಹಿಳಾ ದಿನಾಚರಣೆ ನಿಮಿತ್ತ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಿಬಿರಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…