‘ಆರ್ಥಿಕ ಸಾಕ್ಷರತೆಯನ್ನು ಹೊಂದುವ ಮೂಲಕ ಮಹಿಳೆಯರು ಸಬಲೀಕರಣವಾಗಬೇಕು’

ಸ್ವ ಪ್ರೇರಣೆ, ಸಮಯ ನಿರ್ವಹಣೆಯನ್ನು ಅಳವಡಿಸಿಕೊಂಡು, ಸ್ವಯಂ ಉದ್ಯಮಶೀಲ ಮಹಿಳೆಯಾಗುವುದರೊಂದಿಗೆ, ಸಾಮಾಜಿಕ, ಆರ್ಥಿಕವಾಗಿ ಸದೃಢರಾಗುವ ಮೂಲಕ ಮಹಿಳೆಯರು ಸಬಲೀಕರಣವಾಗಬೇಕೆಂದು ಕೆನರಾ ಬ್ಯಾಂಕ್‌ನ, ಅರಶಿನಕುಂಟೆ ಶಾಖೆಯ ವ್ಯವಸ್ಥಾಪಕರಾದ ಕಾವ್ಯ ಅವರು ಶಿಬಿರಾರ್ಥಿಗಳಿಗೆ ಕರೆ ನೀಡಿದರು.

ನೆಲಮಂಗಲ ತಾಲ್ಲೂಕಿನ ಅರಶಿನಕುಂಟೆಯಲ್ಲಿರುವ ರುಡ್‌ಸೆಟ್‌ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಜವಾಬ್ದಾರಿಗಳನ್ನು ಅರಿತು, ಸರಿಯಾದ ಮಾರ್ಗದಲ್ಲಿ ಮಹಿಳೆಯರು ಸ್ವಾಭಿಮಾನದ ಜೀವನವನ್ನು ಕಟ್ಟಿಕೊಳ್ಳಬೇಕೆಂದು ತಿಳಿಸಿದರಲ್ಲದೆ, ಸರ್ಕಾರ ಹಾಗೂ ಬ್ಯಾಂಕಿನಲ್ಲಿ ಮಹಿಳೆಯರಿಗೆಂದೇ ಇರುವ ಯೋಜನೆಗಳ ಸೌಲಭ್ಯ, ಸಹಾಯಧನದ ಸೌಲಭ್ಯಗಳನ್ನು ಪಡೆಯಬೇಕೆಂದು ಹೇಳಿದರು.

ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಹೆಣ್ಣು ಕೇವಲ ಸಂತಾನಾಭಿವೃದ್ಧಿಗೆ ಮಾತ್ರವಲ್ಲದೇ, ಎಲ್ಲ ಕ್ಷೇತ್ರಗಳಲ್ಲೂ ಸರಿ ಸಮಾನವಾದ ಪಾಲನ್ನು ಪಡೆದಿದ್ದಾಳೆ, ತನ್ನದೇ ಆದ ಛಾಪನ್ನು ಮೂಡಿಸಿದ್ದಾಳೆ ಎಂದರು.

ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಉಕ್ತಿಯಂತೆ ಆಕೆಯಿಂದು ಎಲ್ಲ ಕ್ಷೇತ್ರದಲ್ಲೂ ತನ್ನನ್ನು ಗುರುತಿಸಿಕೊಂಡಿದ್ದಾಳೆ. ಅಂತೆಯೇ ಮಹಿಳಾ ಶಿಬಿರಾರ್ಥಿಗಳಾದ ಬದುಕಿನ ಅವಶ್ಯಕತೆಗಳ ಪೂರೈಕೆಗಾಗಿ ಕೌಶಲ್ಯಗಳನ್ನು ಹೊಂದಿ, ದುಡಿಮೆ ಆರಂಭಿಸಿ ಎಂದು ಸಲಹೆ ನೀಡಿದರಲ್ಲದೆ, ತಾವುಗಳು ಸಾಧನೆ ಮಾಡಲು ಅಗತ್ಯ ಪ್ರೇರಣೆ ಹೊಂದಿ ಸಾಧಿಸಬೇಕೆಂದು ಎಂದು ಹೇಳಿದರು.

ರುಡ್‌ಸೆಟ್‌ ಸಂಸ್ಥೆಯಲ್ಲಿ ತರಬೇತಿ ಪಡೆದು ಯಶಸ್ವಿ ಮಹಿಳಾ ಉದ್ಯಮಿಗಳಾಗಿರುವವರ ಪೈಕಿ ಸಾಂಕೇತಿಕವಾಗಿ ಭವ್ಯ, ಗಾಯತ್ರಿ ಹಾಗೂ ಶೃತಿ ಎಂಬ ಮಹಿಳಾ ಉದ್ಯಮಿಗಳು ಭಾಗವಹಿಸಿ, ತಮ್ಮ ಉದ್ಯಮದ ದಾರಿ ಬೆಳೆದು ಬಂದ ಹಾದಿಯ ಕುರಿತು ಶಿಬಿರಾರ್ಥಿಗಳೊಂದಿಗೆ ಹಂಚಿಕೊಂಡರು.

ಮಹಿಳಾ ದಿನಾಚರಣೆ ನಿಮಿತ್ತ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ‌ ಶಿಬಿರಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರುಡ್‌ಸೆಟ್‌ ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ ಹಾಗೂ ವಿದ್ಯಾ ಹೊಸಮನಿ,‌ ಕಚೇರಿ ಸಹಾಯಕರಾದ ಅರುಣ್‌ಕುಮಾರ್ ಹಾಗೂ ಸಂತೋಷ್ ಸೇರಿದಂತೆ ಸಹಸಿಬ್ಬಂದಿ ಹಾಗೂ ಬ್ಯೂಟಿಪಾರ್ಲರ್ ತರಬೇತಿಯ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಶಿಬಿರಾರ್ಥಿಗಳಿಂದ ಜಾಥಾ ಕಾರ್ಯಕ್ರಮ ಹಾಗೂ ಮಾನವ ಸರಪಳಿ ನಿರ್ಮಿಸಿ, ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 hour ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

8 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

24 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago