ಸ್ವ ಪ್ರೇರಣೆ, ಸಮಯ ನಿರ್ವಹಣೆಯನ್ನು ಅಳವಡಿಸಿಕೊಂಡು, ಸ್ವಯಂ ಉದ್ಯಮಶೀಲ ಮಹಿಳೆಯಾಗುವುದರೊಂದಿಗೆ, ಸಾಮಾಜಿಕ, ಆರ್ಥಿಕವಾಗಿ ಸದೃಢರಾಗುವ ಮೂಲಕ ಮಹಿಳೆಯರು ಸಬಲೀಕರಣವಾಗಬೇಕೆಂದು ಕೆನರಾ ಬ್ಯಾಂಕ್ನ, ಅರಶಿನಕುಂಟೆ ಶಾಖೆಯ ವ್ಯವಸ್ಥಾಪಕರಾದ ಕಾವ್ಯ ಅವರು ಶಿಬಿರಾರ್ಥಿಗಳಿಗೆ ಕರೆ ನೀಡಿದರು.
ನೆಲಮಂಗಲ ತಾಲ್ಲೂಕಿನ ಅರಶಿನಕುಂಟೆಯಲ್ಲಿರುವ ರುಡ್ಸೆಟ್ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಜವಾಬ್ದಾರಿಗಳನ್ನು ಅರಿತು, ಸರಿಯಾದ ಮಾರ್ಗದಲ್ಲಿ ಮಹಿಳೆಯರು ಸ್ವಾಭಿಮಾನದ ಜೀವನವನ್ನು ಕಟ್ಟಿಕೊಳ್ಳಬೇಕೆಂದು ತಿಳಿಸಿದರಲ್ಲದೆ, ಸರ್ಕಾರ ಹಾಗೂ ಬ್ಯಾಂಕಿನಲ್ಲಿ ಮಹಿಳೆಯರಿಗೆಂದೇ ಇರುವ ಯೋಜನೆಗಳ ಸೌಲಭ್ಯ, ಸಹಾಯಧನದ ಸೌಲಭ್ಯಗಳನ್ನು ಪಡೆಯಬೇಕೆಂದು ಹೇಳಿದರು.
ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಉಕ್ತಿಯಂತೆ ಆಕೆಯಿಂದು ಎಲ್ಲ ಕ್ಷೇತ್ರದಲ್ಲೂ ತನ್ನನ್ನು ಗುರುತಿಸಿಕೊಂಡಿದ್ದಾಳೆ. ಅಂತೆಯೇ ಮಹಿಳಾ ಶಿಬಿರಾರ್ಥಿಗಳಾದ ಬದುಕಿನ ಅವಶ್ಯಕತೆಗಳ ಪೂರೈಕೆಗಾಗಿ ಕೌಶಲ್ಯಗಳನ್ನು ಹೊಂದಿ, ದುಡಿಮೆ ಆರಂಭಿಸಿ ಎಂದು ಸಲಹೆ ನೀಡಿದರಲ್ಲದೆ, ತಾವುಗಳು ಸಾಧನೆ ಮಾಡಲು ಅಗತ್ಯ ಪ್ರೇರಣೆ ಹೊಂದಿ ಸಾಧಿಸಬೇಕೆಂದು ಎಂದು ಹೇಳಿದರು.
ರುಡ್ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆದು ಯಶಸ್ವಿ ಮಹಿಳಾ ಉದ್ಯಮಿಗಳಾಗಿರುವವರ ಪೈಕಿ ಸಾಂಕೇತಿಕವಾಗಿ ಭವ್ಯ, ಗಾಯತ್ರಿ ಹಾಗೂ ಶೃತಿ ಎಂಬ ಮಹಿಳಾ ಉದ್ಯಮಿಗಳು ಭಾಗವಹಿಸಿ, ತಮ್ಮ ಉದ್ಯಮದ ದಾರಿ ಬೆಳೆದು ಬಂದ ಹಾದಿಯ ಕುರಿತು ಶಿಬಿರಾರ್ಥಿಗಳೊಂದಿಗೆ ಹಂಚಿಕೊಂಡರು.
ಮಹಿಳಾ ದಿನಾಚರಣೆ ನಿಮಿತ್ತ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಿಬಿರಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…