ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯಲ್ಲಿ 08 ಮಂದಿ ಸ್ವ ಉದ್ಯೋಗ ಸಾಲ ಪಡೆದುಕೊಂಡಿದ್ದು ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೀಪಶ್ರೀ.ಕೆ ಅವರು ತಿಳಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ಫಲಾನುಭವಿಗಳನ್ನು ಸ್ವತಃ ಭೇಟಿ ಮಾಡಿ ಪಡೆದ ಸಾಲವನ್ನು ಸದುಪಯೋಗಪಡಿಸಿಕೊಳ್ಳುತ್ತಿರುವುದನ್ನು ಪರಿಶೀಲಿಸಿ ಖಾತರಿಪಡಿಸಿಕೊಂಡ ನಂತರ ಮಾತನಾಡಿದ ಅವರು.
ದಿನಸಿ ಅಂಗಡಿ ಮಾಲೀಕ ಫಲಾನುಭವಿಯು ನಿಗಮ ಕೊಟ್ಟ ಸಾಲವನ್ನು ಬಂಡವಾಳಕ್ಕೆ ಹೂಡಿಕೆ ಮಾಡಿ ವ್ಯಾಪಾರ ವೃದ್ದಿಸಿಕೊಂಡಿದ್ದಾರೆ ಹೀಗೆ ಉಳಿದ ಫಲಾನುಭವಿಗಳು ಇನ್ನಿತರ ವ್ಯಾಪಾರ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ರಾಜ್ಯಾದ್ಯಂತ 3000ಕ್ಕೂ ಅಧಿಕ ಫಲಾನುಭವಿಗಳಿಗೆ ನಿಗಮದ ಮೂಲಕ ಸ್ವ ಉದ್ಯೋಗ ಆರಂಭಿಸಲು ಸಾಲ ನೀಡಲಾಗಿದೆ. 1 ಲಕ್ಷ ರೂ. ಸಾಲ ಪಡೆದರೆ 20000 ಸಬ್ಸಿಡಿ ದೊರೆಯುತ್ತದೆ. ಉಳಿದ 80000 ಸಾಲವನ್ನು ಮೂರು ವರ್ಷಗಳ ಕಾಲಾವಧಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಮಾಸಿಕ ಕಂತುಗಳಲ್ಲಿ ಪಾವತಿ ಮಾಡುವ ವ್ಯವಸ್ಥೆ ಇರುವುದರಿಂದ ಸಾಲ ಪಡೆದ ಫಲಾನುಭವಿಗಳು ಕಂತುಗಳನ್ನು ಮರುಪಾವತಿ ಮಾಡುತ್ತಿದ್ದಾರೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೀಪಶ್ರೀ.ಕೆ ಅವರು ತಿಳಿಸಿದರು.
ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದಿಂದ ಸಾಲ ಪಡೆದ ಫಲಾನುಭವಿಗಳು ಗ್ರಾಮೀಣ ಭಾಗ ಮತ್ತು ತೀರಾ ಕುಗ್ರಾಮಗಳಲ್ಲಿ ವಾಸಿಸುತ್ತಿದ್ದಾರೆ. ಪ್ರತಿ ತಿಂಗಳು ಕಂತು ಪಾವತಿ ಮಾಡಲು ನಗರ ವ್ಯಾಪ್ತಿಯ ಬ್ಯಾಂಕುಗಳಿಗೆ ಬರುವುದು ಕಷ್ಟ. ಆದ್ದರಿಂದ ಫಲಾನುಭವಿಗಳು ತಮ್ಮ ಮನೆಯಿಂದಲೇ ಸುಲಭವಾಗಿ ಸಾಲ ಮರುಪಾವತಿ ಮಾಡುವ ಮೊಬೈಲ್ ಆ್ಯಪ್ಅನ್ನು ನಿಗಮದಿಂದ ಸೃಜಿಸಲಾಗಿದೆ.
ನಿಗಮದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಾರ ನೀಡುವ ಸಲುವಾಗಿ ಆರ್ಯವೈಶ್ಯ ಪೋರ್ಟಲ್ಅನ್ನು ನಿಗಮ ಸಿದ್ಧಪಡಿಸಿದೆ. ರಾಜ್ಯದಲ್ಲಿರುವ ಆರ್ಯವೈಶ್ಯ ಕುಟುಂಬಗಳ ವಿವರ ನಿರುದ್ಯೋಗಿಗಳು ಅಕ್ಷರಸ್ಥರು, ಅನಕ್ಷರಸ್ಥರು ಇತ್ಯಾದಿ ಮಾಹಿತಿ ಸಂಗ್ರಹಿಸಲು ಈ ಪೋರ್ಟಲ್ ಸಹಾಯ ಮಾಡಲಿದೆ ಎಂದು ತಿಳಿಸಿದರು.
ಪರಿಶೀಲನೆ ವೇಳೆ ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರಾದ ರಂಗನಾಥ್ ಅವರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…