ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಸ್ವ ಉದ್ಯೋಗ ಸಾಲ-ದೀಪಶ್ರೀ.ಕೆ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯಲ್ಲಿ 08 ಮಂದಿ ಸ್ವ ಉದ್ಯೋಗ ಸಾಲ ಪಡೆದುಕೊಂಡಿದ್ದು ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೀಪಶ್ರೀ.ಕೆ ಅವರು ತಿಳಿಸಿದರು.

ದೊಡ್ಡಬಳ್ಳಾಪುರ ತಾಲೂಕಿನ ಫಲಾನುಭವಿಗಳನ್ನು ಸ್ವತಃ ಭೇಟಿ ಮಾಡಿ ಪಡೆದ ಸಾಲವನ್ನು ಸದುಪಯೋಗಪಡಿಸಿಕೊಳ್ಳುತ್ತಿರುವುದನ್ನು ಪರಿಶೀಲಿಸಿ ಖಾತರಿಪಡಿಸಿಕೊಂಡ ನಂತರ ಮಾತನಾಡಿದ ಅವರು.

ದಿನಸಿ ಅಂಗಡಿ ಮಾಲೀಕ ಫಲಾನುಭವಿಯು ನಿಗಮ ಕೊಟ್ಟ ಸಾಲವನ್ನು ಬಂಡವಾಳಕ್ಕೆ ಹೂಡಿಕೆ ಮಾಡಿ ವ್ಯಾಪಾರ ವೃದ್ದಿಸಿಕೊಂಡಿದ್ದಾರೆ ಹೀಗೆ ಉಳಿದ ಫಲಾನುಭವಿಗಳು ಇನ್ನಿತರ ವ್ಯಾಪಾರ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

1 ಲಕ್ಷ ರೂ. ಸಾಲ ಪಡೆದರೆ 20 ಸಾವಿರ ರೂ. ಸಬ್ಸಿಡಿ

ರಾಜ್ಯಾದ್ಯಂತ 3000ಕ್ಕೂ ಅಧಿಕ ಫಲಾನುಭವಿಗಳಿಗೆ ನಿಗಮದ ಮೂಲಕ ಸ್ವ ಉದ್ಯೋಗ ಆರಂಭಿಸಲು ಸಾಲ ನೀಡಲಾಗಿದೆ. 1 ಲಕ್ಷ ರೂ. ಸಾಲ ಪಡೆದರೆ 20000 ಸಬ್ಸಿಡಿ ದೊರೆಯುತ್ತದೆ. ಉಳಿದ 80000 ಸಾಲವನ್ನು ಮೂರು ವರ್ಷಗಳ ಕಾಲಾವಧಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಮಾಸಿಕ ಕಂತುಗಳಲ್ಲಿ ಪಾವತಿ ಮಾಡುವ ವ್ಯವಸ್ಥೆ ಇರುವುದರಿಂದ ಸಾಲ ಪಡೆದ ಫಲಾನುಭವಿಗಳು ಕಂತುಗಳನ್ನು ಮರುಪಾವತಿ ಮಾಡುತ್ತಿದ್ದಾರೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೀಪಶ್ರೀ.ಕೆ ಅವರು ತಿಳಿಸಿದರು.

ಮರುಪಾವತಿಗಾಗಿ ಆ್ಯಪ್ ಆರ್ಯ ವೈಶ್ಯ ನಿಗಮವೇ ಮೊದಲು

ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದಿಂದ ಸಾಲ ಪಡೆದ ಫಲಾನುಭವಿಗಳು ಗ್ರಾಮೀಣ ಭಾಗ ಮತ್ತು ತೀರಾ ಕುಗ್ರಾಮಗಳಲ್ಲಿ ವಾಸಿಸುತ್ತಿದ್ದಾರೆ. ಪ್ರತಿ ತಿಂಗಳು ಕಂತು ಪಾವತಿ ಮಾಡಲು ನಗರ ವ್ಯಾಪ್ತಿಯ ಬ್ಯಾಂಕುಗಳಿಗೆ ಬರುವುದು ಕಷ್ಟ. ಆದ್ದರಿಂದ ಫಲಾನುಭವಿಗಳು ತಮ್ಮ ಮನೆಯಿಂದಲೇ ಸುಲಭವಾಗಿ ಸಾಲ ಮರುಪಾವತಿ ಮಾಡುವ ಮೊಬೈಲ್ ಆ್ಯಪ್‌ಅನ್ನು ನಿಗಮದಿಂದ ಸೃಜಿಸಲಾಗಿದೆ.

ಆರ್ಯ ವೈಶ್ಯ ಪೋರ್ಟಲ್

ನಿಗಮದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಾರ ನೀಡುವ ಸಲುವಾಗಿ ಆರ್ಯವೈಶ್ಯ ಪೋರ್ಟಲ್‌ಅನ್ನು ನಿಗಮ ಸಿದ್ಧಪಡಿಸಿದೆ. ರಾಜ್ಯದಲ್ಲಿರುವ ಆರ್ಯವೈಶ್ಯ ಕುಟುಂಬಗಳ ವಿವರ ನಿರುದ್ಯೋಗಿಗಳು ಅಕ್ಷರಸ್ಥರು, ಅನಕ್ಷರಸ್ಥರು ಇತ್ಯಾದಿ ಮಾಹಿತಿ ಸಂಗ್ರಹಿಸಲು ಈ ಪೋರ್ಟಲ್ ಸಹಾಯ ಮಾಡಲಿದೆ ಎಂದು ತಿಳಿಸಿದರು.
ಪರಿಶೀಲನೆ ವೇಳೆ ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರಾದ ರಂಗನಾಥ್ ಅವರು ಉಪಸ್ಥಿತರಿದ್ದರು.

Ramesh Babu

Journalist

Recent Posts

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

2 hours ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

13 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

13 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

17 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

19 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

22 hours ago