ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯಲ್ಲಿ 08 ಮಂದಿ ಸ್ವ ಉದ್ಯೋಗ ಸಾಲ ಪಡೆದುಕೊಂಡಿದ್ದು ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೀಪಶ್ರೀ.ಕೆ ಅವರು ತಿಳಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ಫಲಾನುಭವಿಗಳನ್ನು ಸ್ವತಃ ಭೇಟಿ ಮಾಡಿ ಪಡೆದ ಸಾಲವನ್ನು ಸದುಪಯೋಗಪಡಿಸಿಕೊಳ್ಳುತ್ತಿರುವುದನ್ನು ಪರಿಶೀಲಿಸಿ ಖಾತರಿಪಡಿಸಿಕೊಂಡ ನಂತರ ಮಾತನಾಡಿದ ಅವರು.
ದಿನಸಿ ಅಂಗಡಿ ಮಾಲೀಕ ಫಲಾನುಭವಿಯು ನಿಗಮ ಕೊಟ್ಟ ಸಾಲವನ್ನು ಬಂಡವಾಳಕ್ಕೆ ಹೂಡಿಕೆ ಮಾಡಿ ವ್ಯಾಪಾರ ವೃದ್ದಿಸಿಕೊಂಡಿದ್ದಾರೆ ಹೀಗೆ ಉಳಿದ ಫಲಾನುಭವಿಗಳು ಇನ್ನಿತರ ವ್ಯಾಪಾರ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ರಾಜ್ಯಾದ್ಯಂತ 3000ಕ್ಕೂ ಅಧಿಕ ಫಲಾನುಭವಿಗಳಿಗೆ ನಿಗಮದ ಮೂಲಕ ಸ್ವ ಉದ್ಯೋಗ ಆರಂಭಿಸಲು ಸಾಲ ನೀಡಲಾಗಿದೆ. 1 ಲಕ್ಷ ರೂ. ಸಾಲ ಪಡೆದರೆ 20000 ಸಬ್ಸಿಡಿ ದೊರೆಯುತ್ತದೆ. ಉಳಿದ 80000 ಸಾಲವನ್ನು ಮೂರು ವರ್ಷಗಳ ಕಾಲಾವಧಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಮಾಸಿಕ ಕಂತುಗಳಲ್ಲಿ ಪಾವತಿ ಮಾಡುವ ವ್ಯವಸ್ಥೆ ಇರುವುದರಿಂದ ಸಾಲ ಪಡೆದ ಫಲಾನುಭವಿಗಳು ಕಂತುಗಳನ್ನು ಮರುಪಾವತಿ ಮಾಡುತ್ತಿದ್ದಾರೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೀಪಶ್ರೀ.ಕೆ ಅವರು ತಿಳಿಸಿದರು.
ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದಿಂದ ಸಾಲ ಪಡೆದ ಫಲಾನುಭವಿಗಳು ಗ್ರಾಮೀಣ ಭಾಗ ಮತ್ತು ತೀರಾ ಕುಗ್ರಾಮಗಳಲ್ಲಿ ವಾಸಿಸುತ್ತಿದ್ದಾರೆ. ಪ್ರತಿ ತಿಂಗಳು ಕಂತು ಪಾವತಿ ಮಾಡಲು ನಗರ ವ್ಯಾಪ್ತಿಯ ಬ್ಯಾಂಕುಗಳಿಗೆ ಬರುವುದು ಕಷ್ಟ. ಆದ್ದರಿಂದ ಫಲಾನುಭವಿಗಳು ತಮ್ಮ ಮನೆಯಿಂದಲೇ ಸುಲಭವಾಗಿ ಸಾಲ ಮರುಪಾವತಿ ಮಾಡುವ ಮೊಬೈಲ್ ಆ್ಯಪ್ಅನ್ನು ನಿಗಮದಿಂದ ಸೃಜಿಸಲಾಗಿದೆ.
ನಿಗಮದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಾರ ನೀಡುವ ಸಲುವಾಗಿ ಆರ್ಯವೈಶ್ಯ ಪೋರ್ಟಲ್ಅನ್ನು ನಿಗಮ ಸಿದ್ಧಪಡಿಸಿದೆ. ರಾಜ್ಯದಲ್ಲಿರುವ ಆರ್ಯವೈಶ್ಯ ಕುಟುಂಬಗಳ ವಿವರ ನಿರುದ್ಯೋಗಿಗಳು ಅಕ್ಷರಸ್ಥರು, ಅನಕ್ಷರಸ್ಥರು ಇತ್ಯಾದಿ ಮಾಹಿತಿ ಸಂಗ್ರಹಿಸಲು ಈ ಪೋರ್ಟಲ್ ಸಹಾಯ ಮಾಡಲಿದೆ ಎಂದು ತಿಳಿಸಿದರು.
ಪರಿಶೀಲನೆ ವೇಳೆ ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರಾದ ರಂಗನಾಥ್ ಅವರು ಉಪಸ್ಥಿತರಿದ್ದರು.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…