ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಸ್ವ ಉದ್ಯೋಗ ಸಾಲ-ದೀಪಶ್ರೀ.ಕೆ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯಲ್ಲಿ 08 ಮಂದಿ ಸ್ವ ಉದ್ಯೋಗ ಸಾಲ ಪಡೆದುಕೊಂಡಿದ್ದು ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೀಪಶ್ರೀ.ಕೆ ಅವರು ತಿಳಿಸಿದರು.

ದೊಡ್ಡಬಳ್ಳಾಪುರ ತಾಲೂಕಿನ ಫಲಾನುಭವಿಗಳನ್ನು ಸ್ವತಃ ಭೇಟಿ ಮಾಡಿ ಪಡೆದ ಸಾಲವನ್ನು ಸದುಪಯೋಗಪಡಿಸಿಕೊಳ್ಳುತ್ತಿರುವುದನ್ನು ಪರಿಶೀಲಿಸಿ ಖಾತರಿಪಡಿಸಿಕೊಂಡ ನಂತರ ಮಾತನಾಡಿದ ಅವರು.

ದಿನಸಿ ಅಂಗಡಿ ಮಾಲೀಕ ಫಲಾನುಭವಿಯು ನಿಗಮ ಕೊಟ್ಟ ಸಾಲವನ್ನು ಬಂಡವಾಳಕ್ಕೆ ಹೂಡಿಕೆ ಮಾಡಿ ವ್ಯಾಪಾರ ವೃದ್ದಿಸಿಕೊಂಡಿದ್ದಾರೆ ಹೀಗೆ ಉಳಿದ ಫಲಾನುಭವಿಗಳು ಇನ್ನಿತರ ವ್ಯಾಪಾರ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

1 ಲಕ್ಷ ರೂ. ಸಾಲ ಪಡೆದರೆ 20 ಸಾವಿರ ರೂ. ಸಬ್ಸಿಡಿ

ರಾಜ್ಯಾದ್ಯಂತ 3000ಕ್ಕೂ ಅಧಿಕ ಫಲಾನುಭವಿಗಳಿಗೆ ನಿಗಮದ ಮೂಲಕ ಸ್ವ ಉದ್ಯೋಗ ಆರಂಭಿಸಲು ಸಾಲ ನೀಡಲಾಗಿದೆ. 1 ಲಕ್ಷ ರೂ. ಸಾಲ ಪಡೆದರೆ 20000 ಸಬ್ಸಿಡಿ ದೊರೆಯುತ್ತದೆ. ಉಳಿದ 80000 ಸಾಲವನ್ನು ಮೂರು ವರ್ಷಗಳ ಕಾಲಾವಧಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಮಾಸಿಕ ಕಂತುಗಳಲ್ಲಿ ಪಾವತಿ ಮಾಡುವ ವ್ಯವಸ್ಥೆ ಇರುವುದರಿಂದ ಸಾಲ ಪಡೆದ ಫಲಾನುಭವಿಗಳು ಕಂತುಗಳನ್ನು ಮರುಪಾವತಿ ಮಾಡುತ್ತಿದ್ದಾರೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೀಪಶ್ರೀ.ಕೆ ಅವರು ತಿಳಿಸಿದರು.

ಮರುಪಾವತಿಗಾಗಿ ಆ್ಯಪ್ ಆರ್ಯ ವೈಶ್ಯ ನಿಗಮವೇ ಮೊದಲು

ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದಿಂದ ಸಾಲ ಪಡೆದ ಫಲಾನುಭವಿಗಳು ಗ್ರಾಮೀಣ ಭಾಗ ಮತ್ತು ತೀರಾ ಕುಗ್ರಾಮಗಳಲ್ಲಿ ವಾಸಿಸುತ್ತಿದ್ದಾರೆ. ಪ್ರತಿ ತಿಂಗಳು ಕಂತು ಪಾವತಿ ಮಾಡಲು ನಗರ ವ್ಯಾಪ್ತಿಯ ಬ್ಯಾಂಕುಗಳಿಗೆ ಬರುವುದು ಕಷ್ಟ. ಆದ್ದರಿಂದ ಫಲಾನುಭವಿಗಳು ತಮ್ಮ ಮನೆಯಿಂದಲೇ ಸುಲಭವಾಗಿ ಸಾಲ ಮರುಪಾವತಿ ಮಾಡುವ ಮೊಬೈಲ್ ಆ್ಯಪ್‌ಅನ್ನು ನಿಗಮದಿಂದ ಸೃಜಿಸಲಾಗಿದೆ.

ಆರ್ಯ ವೈಶ್ಯ ಪೋರ್ಟಲ್

ನಿಗಮದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಾರ ನೀಡುವ ಸಲುವಾಗಿ ಆರ್ಯವೈಶ್ಯ ಪೋರ್ಟಲ್‌ಅನ್ನು ನಿಗಮ ಸಿದ್ಧಪಡಿಸಿದೆ. ರಾಜ್ಯದಲ್ಲಿರುವ ಆರ್ಯವೈಶ್ಯ ಕುಟುಂಬಗಳ ವಿವರ ನಿರುದ್ಯೋಗಿಗಳು ಅಕ್ಷರಸ್ಥರು, ಅನಕ್ಷರಸ್ಥರು ಇತ್ಯಾದಿ ಮಾಹಿತಿ ಸಂಗ್ರಹಿಸಲು ಈ ಪೋರ್ಟಲ್ ಸಹಾಯ ಮಾಡಲಿದೆ ಎಂದು ತಿಳಿಸಿದರು.
ಪರಿಶೀಲನೆ ವೇಳೆ ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರಾದ ರಂಗನಾಥ್ ಅವರು ಉಪಸ್ಥಿತರಿದ್ದರು.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

3 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

7 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

7 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

9 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

10 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

13 hours ago