ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯಲ್ಲಿ 08 ಮಂದಿ ಸ್ವ ಉದ್ಯೋಗ ಸಾಲ ಪಡೆದುಕೊಂಡಿದ್ದು ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೀಪಶ್ರೀ.ಕೆ ಅವರು ತಿಳಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ಫಲಾನುಭವಿಗಳನ್ನು ಸ್ವತಃ ಭೇಟಿ ಮಾಡಿ ಪಡೆದ ಸಾಲವನ್ನು ಸದುಪಯೋಗಪಡಿಸಿಕೊಳ್ಳುತ್ತಿರುವುದನ್ನು ಪರಿಶೀಲಿಸಿ ಖಾತರಿಪಡಿಸಿಕೊಂಡ ನಂತರ ಮಾತನಾಡಿದ ಅವರು.
ದಿನಸಿ ಅಂಗಡಿ ಮಾಲೀಕ ಫಲಾನುಭವಿಯು ನಿಗಮ ಕೊಟ್ಟ ಸಾಲವನ್ನು ಬಂಡವಾಳಕ್ಕೆ ಹೂಡಿಕೆ ಮಾಡಿ ವ್ಯಾಪಾರ ವೃದ್ದಿಸಿಕೊಂಡಿದ್ದಾರೆ ಹೀಗೆ ಉಳಿದ ಫಲಾನುಭವಿಗಳು ಇನ್ನಿತರ ವ್ಯಾಪಾರ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ರಾಜ್ಯಾದ್ಯಂತ 3000ಕ್ಕೂ ಅಧಿಕ ಫಲಾನುಭವಿಗಳಿಗೆ ನಿಗಮದ ಮೂಲಕ ಸ್ವ ಉದ್ಯೋಗ ಆರಂಭಿಸಲು ಸಾಲ ನೀಡಲಾಗಿದೆ. 1 ಲಕ್ಷ ರೂ. ಸಾಲ ಪಡೆದರೆ 20000 ಸಬ್ಸಿಡಿ ದೊರೆಯುತ್ತದೆ. ಉಳಿದ 80000 ಸಾಲವನ್ನು ಮೂರು ವರ್ಷಗಳ ಕಾಲಾವಧಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಮಾಸಿಕ ಕಂತುಗಳಲ್ಲಿ ಪಾವತಿ ಮಾಡುವ ವ್ಯವಸ್ಥೆ ಇರುವುದರಿಂದ ಸಾಲ ಪಡೆದ ಫಲಾನುಭವಿಗಳು ಕಂತುಗಳನ್ನು ಮರುಪಾವತಿ ಮಾಡುತ್ತಿದ್ದಾರೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೀಪಶ್ರೀ.ಕೆ ಅವರು ತಿಳಿಸಿದರು.
ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದಿಂದ ಸಾಲ ಪಡೆದ ಫಲಾನುಭವಿಗಳು ಗ್ರಾಮೀಣ ಭಾಗ ಮತ್ತು ತೀರಾ ಕುಗ್ರಾಮಗಳಲ್ಲಿ ವಾಸಿಸುತ್ತಿದ್ದಾರೆ. ಪ್ರತಿ ತಿಂಗಳು ಕಂತು ಪಾವತಿ ಮಾಡಲು ನಗರ ವ್ಯಾಪ್ತಿಯ ಬ್ಯಾಂಕುಗಳಿಗೆ ಬರುವುದು ಕಷ್ಟ. ಆದ್ದರಿಂದ ಫಲಾನುಭವಿಗಳು ತಮ್ಮ ಮನೆಯಿಂದಲೇ ಸುಲಭವಾಗಿ ಸಾಲ ಮರುಪಾವತಿ ಮಾಡುವ ಮೊಬೈಲ್ ಆ್ಯಪ್ಅನ್ನು ನಿಗಮದಿಂದ ಸೃಜಿಸಲಾಗಿದೆ.
ನಿಗಮದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಾರ ನೀಡುವ ಸಲುವಾಗಿ ಆರ್ಯವೈಶ್ಯ ಪೋರ್ಟಲ್ಅನ್ನು ನಿಗಮ ಸಿದ್ಧಪಡಿಸಿದೆ. ರಾಜ್ಯದಲ್ಲಿರುವ ಆರ್ಯವೈಶ್ಯ ಕುಟುಂಬಗಳ ವಿವರ ನಿರುದ್ಯೋಗಿಗಳು ಅಕ್ಷರಸ್ಥರು, ಅನಕ್ಷರಸ್ಥರು ಇತ್ಯಾದಿ ಮಾಹಿತಿ ಸಂಗ್ರಹಿಸಲು ಈ ಪೋರ್ಟಲ್ ಸಹಾಯ ಮಾಡಲಿದೆ ಎಂದು ತಿಳಿಸಿದರು.
ಪರಿಶೀಲನೆ ವೇಳೆ ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರಾದ ರಂಗನಾಥ್ ಅವರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…