ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯಲ್ಲಿ 08 ಮಂದಿ ಸ್ವ ಉದ್ಯೋಗ ಸಾಲ ಪಡೆದುಕೊಂಡಿದ್ದು ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೀಪಶ್ರೀ.ಕೆ ಅವರು ತಿಳಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ಫಲಾನುಭವಿಗಳನ್ನು ಸ್ವತಃ ಭೇಟಿ ಮಾಡಿ ಪಡೆದ ಸಾಲವನ್ನು ಸದುಪಯೋಗಪಡಿಸಿಕೊಳ್ಳುತ್ತಿರುವುದನ್ನು ಪರಿಶೀಲಿಸಿ ಖಾತರಿಪಡಿಸಿಕೊಂಡ ನಂತರ ಮಾತನಾಡಿದ ಅವರು.
ದಿನಸಿ ಅಂಗಡಿ ಮಾಲೀಕ ಫಲಾನುಭವಿಯು ನಿಗಮ ಕೊಟ್ಟ ಸಾಲವನ್ನು ಬಂಡವಾಳಕ್ಕೆ ಹೂಡಿಕೆ ಮಾಡಿ ವ್ಯಾಪಾರ ವೃದ್ದಿಸಿಕೊಂಡಿದ್ದಾರೆ ಹೀಗೆ ಉಳಿದ ಫಲಾನುಭವಿಗಳು ಇನ್ನಿತರ ವ್ಯಾಪಾರ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ರಾಜ್ಯಾದ್ಯಂತ 3000ಕ್ಕೂ ಅಧಿಕ ಫಲಾನುಭವಿಗಳಿಗೆ ನಿಗಮದ ಮೂಲಕ ಸ್ವ ಉದ್ಯೋಗ ಆರಂಭಿಸಲು ಸಾಲ ನೀಡಲಾಗಿದೆ. 1 ಲಕ್ಷ ರೂ. ಸಾಲ ಪಡೆದರೆ 20000 ಸಬ್ಸಿಡಿ ದೊರೆಯುತ್ತದೆ. ಉಳಿದ 80000 ಸಾಲವನ್ನು ಮೂರು ವರ್ಷಗಳ ಕಾಲಾವಧಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಮಾಸಿಕ ಕಂತುಗಳಲ್ಲಿ ಪಾವತಿ ಮಾಡುವ ವ್ಯವಸ್ಥೆ ಇರುವುದರಿಂದ ಸಾಲ ಪಡೆದ ಫಲಾನುಭವಿಗಳು ಕಂತುಗಳನ್ನು ಮರುಪಾವತಿ ಮಾಡುತ್ತಿದ್ದಾರೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೀಪಶ್ರೀ.ಕೆ ಅವರು ತಿಳಿಸಿದರು.
ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದಿಂದ ಸಾಲ ಪಡೆದ ಫಲಾನುಭವಿಗಳು ಗ್ರಾಮೀಣ ಭಾಗ ಮತ್ತು ತೀರಾ ಕುಗ್ರಾಮಗಳಲ್ಲಿ ವಾಸಿಸುತ್ತಿದ್ದಾರೆ. ಪ್ರತಿ ತಿಂಗಳು ಕಂತು ಪಾವತಿ ಮಾಡಲು ನಗರ ವ್ಯಾಪ್ತಿಯ ಬ್ಯಾಂಕುಗಳಿಗೆ ಬರುವುದು ಕಷ್ಟ. ಆದ್ದರಿಂದ ಫಲಾನುಭವಿಗಳು ತಮ್ಮ ಮನೆಯಿಂದಲೇ ಸುಲಭವಾಗಿ ಸಾಲ ಮರುಪಾವತಿ ಮಾಡುವ ಮೊಬೈಲ್ ಆ್ಯಪ್ಅನ್ನು ನಿಗಮದಿಂದ ಸೃಜಿಸಲಾಗಿದೆ.
ನಿಗಮದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಾರ ನೀಡುವ ಸಲುವಾಗಿ ಆರ್ಯವೈಶ್ಯ ಪೋರ್ಟಲ್ಅನ್ನು ನಿಗಮ ಸಿದ್ಧಪಡಿಸಿದೆ. ರಾಜ್ಯದಲ್ಲಿರುವ ಆರ್ಯವೈಶ್ಯ ಕುಟುಂಬಗಳ ವಿವರ ನಿರುದ್ಯೋಗಿಗಳು ಅಕ್ಷರಸ್ಥರು, ಅನಕ್ಷರಸ್ಥರು ಇತ್ಯಾದಿ ಮಾಹಿತಿ ಸಂಗ್ರಹಿಸಲು ಈ ಪೋರ್ಟಲ್ ಸಹಾಯ ಮಾಡಲಿದೆ ಎಂದು ತಿಳಿಸಿದರು.
ಪರಿಶೀಲನೆ ವೇಳೆ ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರಾದ ರಂಗನಾಥ್ ಅವರು ಉಪಸ್ಥಿತರಿದ್ದರು.
ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…
. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…
ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…
ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…
ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…