ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯಲ್ಲಿ 08 ಮಂದಿ ಸ್ವ ಉದ್ಯೋಗ ಸಾಲ ಪಡೆದುಕೊಂಡಿದ್ದು ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೀಪಶ್ರೀ.ಕೆ ಅವರು ತಿಳಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ಫಲಾನುಭವಿಗಳನ್ನು ಸ್ವತಃ ಭೇಟಿ ಮಾಡಿ ಪಡೆದ ಸಾಲವನ್ನು ಸದುಪಯೋಗಪಡಿಸಿಕೊಳ್ಳುತ್ತಿರುವುದನ್ನು ಪರಿಶೀಲಿಸಿ ಖಾತರಿಪಡಿಸಿಕೊಂಡ ನಂತರ ಮಾತನಾಡಿದ ಅವರು.
ದಿನಸಿ ಅಂಗಡಿ ಮಾಲೀಕ ಫಲಾನುಭವಿಯು ನಿಗಮ ಕೊಟ್ಟ ಸಾಲವನ್ನು ಬಂಡವಾಳಕ್ಕೆ ಹೂಡಿಕೆ ಮಾಡಿ ವ್ಯಾಪಾರ ವೃದ್ದಿಸಿಕೊಂಡಿದ್ದಾರೆ ಹೀಗೆ ಉಳಿದ ಫಲಾನುಭವಿಗಳು ಇನ್ನಿತರ ವ್ಯಾಪಾರ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ರಾಜ್ಯಾದ್ಯಂತ 3000ಕ್ಕೂ ಅಧಿಕ ಫಲಾನುಭವಿಗಳಿಗೆ ನಿಗಮದ ಮೂಲಕ ಸ್ವ ಉದ್ಯೋಗ ಆರಂಭಿಸಲು ಸಾಲ ನೀಡಲಾಗಿದೆ. 1 ಲಕ್ಷ ರೂ. ಸಾಲ ಪಡೆದರೆ 20000 ಸಬ್ಸಿಡಿ ದೊರೆಯುತ್ತದೆ. ಉಳಿದ 80000 ಸಾಲವನ್ನು ಮೂರು ವರ್ಷಗಳ ಕಾಲಾವಧಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಮಾಸಿಕ ಕಂತುಗಳಲ್ಲಿ ಪಾವತಿ ಮಾಡುವ ವ್ಯವಸ್ಥೆ ಇರುವುದರಿಂದ ಸಾಲ ಪಡೆದ ಫಲಾನುಭವಿಗಳು ಕಂತುಗಳನ್ನು ಮರುಪಾವತಿ ಮಾಡುತ್ತಿದ್ದಾರೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೀಪಶ್ರೀ.ಕೆ ಅವರು ತಿಳಿಸಿದರು.
ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದಿಂದ ಸಾಲ ಪಡೆದ ಫಲಾನುಭವಿಗಳು ಗ್ರಾಮೀಣ ಭಾಗ ಮತ್ತು ತೀರಾ ಕುಗ್ರಾಮಗಳಲ್ಲಿ ವಾಸಿಸುತ್ತಿದ್ದಾರೆ. ಪ್ರತಿ ತಿಂಗಳು ಕಂತು ಪಾವತಿ ಮಾಡಲು ನಗರ ವ್ಯಾಪ್ತಿಯ ಬ್ಯಾಂಕುಗಳಿಗೆ ಬರುವುದು ಕಷ್ಟ. ಆದ್ದರಿಂದ ಫಲಾನುಭವಿಗಳು ತಮ್ಮ ಮನೆಯಿಂದಲೇ ಸುಲಭವಾಗಿ ಸಾಲ ಮರುಪಾವತಿ ಮಾಡುವ ಮೊಬೈಲ್ ಆ್ಯಪ್ಅನ್ನು ನಿಗಮದಿಂದ ಸೃಜಿಸಲಾಗಿದೆ.
ನಿಗಮದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಾರ ನೀಡುವ ಸಲುವಾಗಿ ಆರ್ಯವೈಶ್ಯ ಪೋರ್ಟಲ್ಅನ್ನು ನಿಗಮ ಸಿದ್ಧಪಡಿಸಿದೆ. ರಾಜ್ಯದಲ್ಲಿರುವ ಆರ್ಯವೈಶ್ಯ ಕುಟುಂಬಗಳ ವಿವರ ನಿರುದ್ಯೋಗಿಗಳು ಅಕ್ಷರಸ್ಥರು, ಅನಕ್ಷರಸ್ಥರು ಇತ್ಯಾದಿ ಮಾಹಿತಿ ಸಂಗ್ರಹಿಸಲು ಈ ಪೋರ್ಟಲ್ ಸಹಾಯ ಮಾಡಲಿದೆ ಎಂದು ತಿಳಿಸಿದರು.
ಪರಿಶೀಲನೆ ವೇಳೆ ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರಾದ ರಂಗನಾಥ್ ಅವರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…