ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಸ್ವ ಉದ್ಯೋಗ ಸಾಲ-ದೀಪಶ್ರೀ.ಕೆ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯಲ್ಲಿ 08 ಮಂದಿ ಸ್ವ ಉದ್ಯೋಗ ಸಾಲ ಪಡೆದುಕೊಂಡಿದ್ದು ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೀಪಶ್ರೀ.ಕೆ ಅವರು ತಿಳಿಸಿದರು.

ದೊಡ್ಡಬಳ್ಳಾಪುರ ತಾಲೂಕಿನ ಫಲಾನುಭವಿಗಳನ್ನು ಸ್ವತಃ ಭೇಟಿ ಮಾಡಿ ಪಡೆದ ಸಾಲವನ್ನು ಸದುಪಯೋಗಪಡಿಸಿಕೊಳ್ಳುತ್ತಿರುವುದನ್ನು ಪರಿಶೀಲಿಸಿ ಖಾತರಿಪಡಿಸಿಕೊಂಡ ನಂತರ ಮಾತನಾಡಿದ ಅವರು.

ದಿನಸಿ ಅಂಗಡಿ ಮಾಲೀಕ ಫಲಾನುಭವಿಯು ನಿಗಮ ಕೊಟ್ಟ ಸಾಲವನ್ನು ಬಂಡವಾಳಕ್ಕೆ ಹೂಡಿಕೆ ಮಾಡಿ ವ್ಯಾಪಾರ ವೃದ್ದಿಸಿಕೊಂಡಿದ್ದಾರೆ ಹೀಗೆ ಉಳಿದ ಫಲಾನುಭವಿಗಳು ಇನ್ನಿತರ ವ್ಯಾಪಾರ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

1 ಲಕ್ಷ ರೂ. ಸಾಲ ಪಡೆದರೆ 20 ಸಾವಿರ ರೂ. ಸಬ್ಸಿಡಿ

ರಾಜ್ಯಾದ್ಯಂತ 3000ಕ್ಕೂ ಅಧಿಕ ಫಲಾನುಭವಿಗಳಿಗೆ ನಿಗಮದ ಮೂಲಕ ಸ್ವ ಉದ್ಯೋಗ ಆರಂಭಿಸಲು ಸಾಲ ನೀಡಲಾಗಿದೆ. 1 ಲಕ್ಷ ರೂ. ಸಾಲ ಪಡೆದರೆ 20000 ಸಬ್ಸಿಡಿ ದೊರೆಯುತ್ತದೆ. ಉಳಿದ 80000 ಸಾಲವನ್ನು ಮೂರು ವರ್ಷಗಳ ಕಾಲಾವಧಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಮಾಸಿಕ ಕಂತುಗಳಲ್ಲಿ ಪಾವತಿ ಮಾಡುವ ವ್ಯವಸ್ಥೆ ಇರುವುದರಿಂದ ಸಾಲ ಪಡೆದ ಫಲಾನುಭವಿಗಳು ಕಂತುಗಳನ್ನು ಮರುಪಾವತಿ ಮಾಡುತ್ತಿದ್ದಾರೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೀಪಶ್ರೀ.ಕೆ ಅವರು ತಿಳಿಸಿದರು.

ಮರುಪಾವತಿಗಾಗಿ ಆ್ಯಪ್ ಆರ್ಯ ವೈಶ್ಯ ನಿಗಮವೇ ಮೊದಲು

ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದಿಂದ ಸಾಲ ಪಡೆದ ಫಲಾನುಭವಿಗಳು ಗ್ರಾಮೀಣ ಭಾಗ ಮತ್ತು ತೀರಾ ಕುಗ್ರಾಮಗಳಲ್ಲಿ ವಾಸಿಸುತ್ತಿದ್ದಾರೆ. ಪ್ರತಿ ತಿಂಗಳು ಕಂತು ಪಾವತಿ ಮಾಡಲು ನಗರ ವ್ಯಾಪ್ತಿಯ ಬ್ಯಾಂಕುಗಳಿಗೆ ಬರುವುದು ಕಷ್ಟ. ಆದ್ದರಿಂದ ಫಲಾನುಭವಿಗಳು ತಮ್ಮ ಮನೆಯಿಂದಲೇ ಸುಲಭವಾಗಿ ಸಾಲ ಮರುಪಾವತಿ ಮಾಡುವ ಮೊಬೈಲ್ ಆ್ಯಪ್‌ಅನ್ನು ನಿಗಮದಿಂದ ಸೃಜಿಸಲಾಗಿದೆ.

ಆರ್ಯ ವೈಶ್ಯ ಪೋರ್ಟಲ್

ನಿಗಮದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಾರ ನೀಡುವ ಸಲುವಾಗಿ ಆರ್ಯವೈಶ್ಯ ಪೋರ್ಟಲ್‌ಅನ್ನು ನಿಗಮ ಸಿದ್ಧಪಡಿಸಿದೆ. ರಾಜ್ಯದಲ್ಲಿರುವ ಆರ್ಯವೈಶ್ಯ ಕುಟುಂಬಗಳ ವಿವರ ನಿರುದ್ಯೋಗಿಗಳು ಅಕ್ಷರಸ್ಥರು, ಅನಕ್ಷರಸ್ಥರು ಇತ್ಯಾದಿ ಮಾಹಿತಿ ಸಂಗ್ರಹಿಸಲು ಈ ಪೋರ್ಟಲ್ ಸಹಾಯ ಮಾಡಲಿದೆ ಎಂದು ತಿಳಿಸಿದರು.
ಪರಿಶೀಲನೆ ವೇಳೆ ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರಾದ ರಂಗನಾಥ್ ಅವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

7 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

16 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

22 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

23 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago