ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ ಎಂದು ಕೇಂದ್ರ ಮಂತ್ರಿ ಹಾಗೂ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ ಎಂದು ಹೇಳಿದ್ದಾರೆ.
ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರಕಾರವೇ ಹೊತ್ತುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರಕಾರ ಕೂಡಲೇ ಧಾವಿಸಬೇಕು ಎಂದು ಆಗ್ರಹಿಸಿದ್ದಾರೆ.
ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…