ಅತ್ಯಂತ ರೋಚಕತೆಯಿಂದ ಕೂಡಿದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮುರಿಯದ ಏಳನೇ ವಿಕೆಟ್ ಗೆ ಶ್ರೇಯಸ್ ಅಯ್ಯರ್ (29) ಹಾಗೂ ಆಲ್ ರೌಂಡರ್ ಆರ್. ಅಶ್ವಿನ್(42) ರನ್ ಗಳಿಸುವ ಮೂಲಕ 71 ರನ್ ಗಳ ಜೊತೆಯಾಟದ ನೆರವಿನಿಂದ ನಾಲ್ಕನೇ ದಿನದ ಪ್ರಾರಂಭದಲ್ಲಿಯೇ 3 ವಿಕೆಟ್ ಗಳ ಅಧಿಕಾರಯುತ ಜಯ ಸಾಧಿಸಿತು.
ಮೊದಲ ಇನಿಂಗ್ಸ್ ಮುನ್ನಡೆ ಕಾಯ್ದುಕೊಂಡಿದ್ದ ಭಾರತ ಎರಡನೇ ಇನಿಂಗ್ಸ್ ಆರಂಭಿಸಿದಾಗ ಗೆಲ್ಲಲು 144 ರನ್ ಗಳಿಸಿ ಸುಲಭ ಗೆಲುವಿನ ನಿರೀಕ್ಷೆಯಲ್ಲಿತ್ತು ಆದರೆ ಮಾರಕ ಬೌಲಿಂಗ್ ದಾಳಿ ನಡೆಸಿದ ಬಾಂಗ್ಲಾ ಬೌಲಿಂಗ್ ಪಡೆ ಎದುರಾಳಿ ತಂಡದ ಮೊತ್ತ 3 ರನ್ ದಾಟುಲಾಗಲೇ ನಾಯಕ ಹಾಗೂ ಆರಂಭಿಕ ಬ್ಯಾಟ್ಸ್ಮನ್ ಕೆ. ಎಲ್. ರಾಹುಲ್ ಅವರ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿತು.
ಆರಂಭಿಕ ಬ್ಯಾಟ್ಸ್ಮನ್ ಶುಭಮನ್ ಗಿಲ್, ಉಪನಾಯಕ ಚತೇಶ್ವರ ಪೂಜಾರ, ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಹೆಚ್ಚು ಕಾಲ ಕ್ರೀಸ್ ನಲ್ಲಿ ನಿಲ್ಲಲಿಲ್ಲ ಈ ಹಂತದಲ್ಲಿ ಆಲ್ ರೌಂಡರ್ ಅಕ್ಷರ್ ಪಟೇಲ್ 34 ರನ್ ಗಳಿಸುವ ಮೂಲಕ ತಂಡಕ್ಕೆ ಕೊಂಚ ಆಸರೆಯಾದರು.
ಒಂದು ಹಂತದಲ್ಲಿ 74 ರನ್ ಗೆ 7 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಯಲ್ಲಿದ್ದ ತಂಡವನ್ನು ಶ್ರೇಯಸ್ ಅಯ್ಯರ್ ಹಾಗೂ ಆಲ್ ರೌಂಡರ್ ಆರ್. ಅಶ್ವಿನ್ 71 ರನ್ ಗಳ ಜೊತೆಯಾಟ ಆಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು, ಅದರಲ್ಲೂ ಅಶ್ವಿನ್ ಒಂದೇ ಓವರ್ ನಲ್ಲಿ ಒಂದು ಸಿಕ್ಸರ್ ಎರಡು ಬೌಂಡರಿ ಸಹಿತ 16 ರನ್ ದೋಚುವ ಮೂಲಕ ತಾನೊಬ್ಬ ಬೆಸ್ಟ್ ಆಲ್ ರೌಂಡರ್ ಎಂದು ತಿಳಿಸಿದರು.
ಬಾಂಗ್ಲಾ ತಂಡದ ಪರವಾಗಿ ಹಸನ್ ಮೀರಜ್ ಐದು ವಿಕೆಟ್ ಗಳ ಗೊಂಚಲು ಪಡೆದರೆ ನಾಯಕ ಶಕೀಬ್ ಆಲ್ ಹಸನ್ ಎರಡು ವಿಕೆಟ್ ಪಡೆದರು. ಎರಡನೇ ಪಂದ್ಯದಲ್ಲಿ 54 ರನ್ ಹಾಗೂ 6 ವಿಕೆಟ್ ಪಡೆಯುವ ಮೂಲಕ ಆರ್. ಅಶ್ವಿನ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಮೊದಲ ಪಂದ್ಯದಲ್ಲಿ ಮಿಂಚಿದ್ದ ಚತೇಶ್ವರ ಪೂಜಾರ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…