ಆರ್. ಅಶ್ವಿನ್ ರೋಚಕ ಆಟ: ಬಾಂಗ್ಲಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಭಾರತ

ಅತ್ಯಂತ ರೋಚಕತೆಯಿಂದ ಕೂಡಿದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮುರಿಯದ ಏಳನೇ ವಿಕೆಟ್ ಗೆ ಶ್ರೇಯಸ್ ಅಯ್ಯರ್ (29) ಹಾಗೂ ಆಲ್ ರೌಂಡರ್ ಆರ್. ಅಶ್ವಿನ್(42) ರನ್ ಗಳಿಸುವ ಮೂಲಕ 71 ರನ್ ಗಳ ಜೊತೆಯಾಟದ ನೆರವಿನಿಂದ ನಾಲ್ಕನೇ ದಿನದ ಪ್ರಾರಂಭದಲ್ಲಿಯೇ 3 ವಿಕೆಟ್ ಗಳ ಅಧಿಕಾರಯುತ ಜಯ ಸಾಧಿಸಿತು.

ಮೊದಲ ಇನಿಂಗ್ಸ್ ಮುನ್ನಡೆ ಕಾಯ್ದುಕೊಂಡಿದ್ದ ಭಾರತ ಎರಡನೇ ಇನಿಂಗ್ಸ್ ಆರಂಭಿಸಿದಾಗ ಗೆಲ್ಲಲು 144 ರನ್ ಗಳಿಸಿ ಸುಲಭ ಗೆಲುವಿನ ನಿರೀಕ್ಷೆಯಲ್ಲಿತ್ತು ಆದರೆ ಮಾರಕ ಬೌಲಿಂಗ್ ದಾಳಿ ನಡೆಸಿದ ಬಾಂಗ್ಲಾ ಬೌಲಿಂಗ್ ಪಡೆ ಎದುರಾಳಿ ತಂಡದ ಮೊತ್ತ 3 ರನ್ ದಾಟುಲಾಗಲೇ ನಾಯಕ ಹಾಗೂ ಆರಂಭಿಕ ಬ್ಯಾಟ್ಸ್‌ಮನ್ ಕೆ. ಎಲ್. ರಾಹುಲ್ ಅವರ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿತು.

ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್, ಉಪನಾಯಕ ಚತೇಶ್ವರ ಪೂಜಾರ, ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಹೆಚ್ಚು ಕಾಲ ಕ್ರೀಸ್ ನಲ್ಲಿ ನಿಲ್ಲಲಿಲ್ಲ ಈ ಹಂತದಲ್ಲಿ ಆಲ್ ರೌಂಡರ್ ಅಕ್ಷರ್ ಪಟೇಲ್ 34 ರನ್ ಗಳಿಸುವ ಮೂಲಕ ತಂಡಕ್ಕೆ ಕೊಂಚ ಆಸರೆಯಾದರು.

ಒಂದು ಹಂತದಲ್ಲಿ 74 ರನ್ ಗೆ 7 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಯಲ್ಲಿದ್ದ ತಂಡವನ್ನು ಶ್ರೇಯಸ್ ಅಯ್ಯರ್ ಹಾಗೂ ಆಲ್ ರೌಂಡರ್ ಆರ್. ಅಶ್ವಿನ್ 71 ರನ್ ಗಳ ಜೊತೆಯಾಟ ಆಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು, ಅದರಲ್ಲೂ ಅಶ್ವಿನ್ ಒಂದೇ ಓವರ್ ನಲ್ಲಿ ಒಂದು ಸಿಕ್ಸರ್ ಎರಡು ಬೌಂಡರಿ ಸಹಿತ 16 ರನ್ ದೋಚುವ ಮೂಲಕ ತಾನೊಬ್ಬ ಬೆಸ್ಟ್ ಆಲ್ ರೌಂಡರ್ ಎಂದು ತಿಳಿಸಿದರು.

ಬಾಂಗ್ಲಾ ತಂಡದ ಪರವಾಗಿ ಹಸನ್ ಮೀರಜ್ ಐದು ವಿಕೆಟ್ ಗಳ ಗೊಂಚಲು ಪಡೆದರೆ ನಾಯಕ ಶಕೀಬ್ ಆಲ್ ಹಸನ್ ಎರಡು ವಿಕೆಟ್ ಪಡೆದರು. ಎರಡನೇ ಪಂದ್ಯದಲ್ಲಿ 54 ರನ್ ಹಾಗೂ 6 ವಿಕೆಟ್ ಪಡೆಯುವ ಮೂಲಕ ಆರ್. ಅಶ್ವಿನ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಮೊದಲ ಪಂದ್ಯದಲ್ಲಿ ಮಿಂಚಿದ್ದ ಚತೇಶ್ವರ ಪೂಜಾರ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

9 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

9 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

11 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

13 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

16 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

21 hours ago