ಆರ್. ಅಶ್ವಿನ್ ರೋಚಕ ಆಟ: ಬಾಂಗ್ಲಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಭಾರತ

ಅತ್ಯಂತ ರೋಚಕತೆಯಿಂದ ಕೂಡಿದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮುರಿಯದ ಏಳನೇ ವಿಕೆಟ್ ಗೆ ಶ್ರೇಯಸ್ ಅಯ್ಯರ್ (29) ಹಾಗೂ ಆಲ್ ರೌಂಡರ್ ಆರ್. ಅಶ್ವಿನ್(42) ರನ್ ಗಳಿಸುವ ಮೂಲಕ 71 ರನ್ ಗಳ ಜೊತೆಯಾಟದ ನೆರವಿನಿಂದ ನಾಲ್ಕನೇ ದಿನದ ಪ್ರಾರಂಭದಲ್ಲಿಯೇ 3 ವಿಕೆಟ್ ಗಳ ಅಧಿಕಾರಯುತ ಜಯ ಸಾಧಿಸಿತು.

ಮೊದಲ ಇನಿಂಗ್ಸ್ ಮುನ್ನಡೆ ಕಾಯ್ದುಕೊಂಡಿದ್ದ ಭಾರತ ಎರಡನೇ ಇನಿಂಗ್ಸ್ ಆರಂಭಿಸಿದಾಗ ಗೆಲ್ಲಲು 144 ರನ್ ಗಳಿಸಿ ಸುಲಭ ಗೆಲುವಿನ ನಿರೀಕ್ಷೆಯಲ್ಲಿತ್ತು ಆದರೆ ಮಾರಕ ಬೌಲಿಂಗ್ ದಾಳಿ ನಡೆಸಿದ ಬಾಂಗ್ಲಾ ಬೌಲಿಂಗ್ ಪಡೆ ಎದುರಾಳಿ ತಂಡದ ಮೊತ್ತ 3 ರನ್ ದಾಟುಲಾಗಲೇ ನಾಯಕ ಹಾಗೂ ಆರಂಭಿಕ ಬ್ಯಾಟ್ಸ್‌ಮನ್ ಕೆ. ಎಲ್. ರಾಹುಲ್ ಅವರ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿತು.

ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್, ಉಪನಾಯಕ ಚತೇಶ್ವರ ಪೂಜಾರ, ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಹೆಚ್ಚು ಕಾಲ ಕ್ರೀಸ್ ನಲ್ಲಿ ನಿಲ್ಲಲಿಲ್ಲ ಈ ಹಂತದಲ್ಲಿ ಆಲ್ ರೌಂಡರ್ ಅಕ್ಷರ್ ಪಟೇಲ್ 34 ರನ್ ಗಳಿಸುವ ಮೂಲಕ ತಂಡಕ್ಕೆ ಕೊಂಚ ಆಸರೆಯಾದರು.

ಒಂದು ಹಂತದಲ್ಲಿ 74 ರನ್ ಗೆ 7 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಯಲ್ಲಿದ್ದ ತಂಡವನ್ನು ಶ್ರೇಯಸ್ ಅಯ್ಯರ್ ಹಾಗೂ ಆಲ್ ರೌಂಡರ್ ಆರ್. ಅಶ್ವಿನ್ 71 ರನ್ ಗಳ ಜೊತೆಯಾಟ ಆಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು, ಅದರಲ್ಲೂ ಅಶ್ವಿನ್ ಒಂದೇ ಓವರ್ ನಲ್ಲಿ ಒಂದು ಸಿಕ್ಸರ್ ಎರಡು ಬೌಂಡರಿ ಸಹಿತ 16 ರನ್ ದೋಚುವ ಮೂಲಕ ತಾನೊಬ್ಬ ಬೆಸ್ಟ್ ಆಲ್ ರೌಂಡರ್ ಎಂದು ತಿಳಿಸಿದರು.

ಬಾಂಗ್ಲಾ ತಂಡದ ಪರವಾಗಿ ಹಸನ್ ಮೀರಜ್ ಐದು ವಿಕೆಟ್ ಗಳ ಗೊಂಚಲು ಪಡೆದರೆ ನಾಯಕ ಶಕೀಬ್ ಆಲ್ ಹಸನ್ ಎರಡು ವಿಕೆಟ್ ಪಡೆದರು. ಎರಡನೇ ಪಂದ್ಯದಲ್ಲಿ 54 ರನ್ ಹಾಗೂ 6 ವಿಕೆಟ್ ಪಡೆಯುವ ಮೂಲಕ ಆರ್. ಅಶ್ವಿನ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಮೊದಲ ಪಂದ್ಯದಲ್ಲಿ ಮಿಂಚಿದ್ದ ಚತೇಶ್ವರ ಪೂಜಾರ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಸಂಭ್ರಮ

ದೊಡ್ಡಬಳ್ಳಾಪುರ ತಾಲೂಕಿನ ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಪಟಾಕಿ ಸಿಡಿಸಿ, ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ…

11 hours ago

14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

14 ವರ್ಷದ ಮಗಳನ್ನು ಕೊಂದು ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಬಳಿಯ ಇಮ್ಮಡಿಹಳ್ಳಿಯಲ್ಲಿ ನಡೆದಿದೆ... ಮಗಳು…

13 hours ago

ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆ

ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆಯಾಗಿರುವ ಘಟನೆ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ…

16 hours ago

ತಂದೆಯಿಂದಲೇ 6 ವರ್ಷದ ಮಗನ ಕೊಲೆ: ಕಾರಣ ಏನು ಗೊತ್ತಾ….?

ವಿಜಯಪುರದಲ್ಲೋಂದು ವಿಚಿತ್ರ, ಅಮಾನವೀಯ, ಕರಳುಹಿಂಡುವ ಘಟನೆ ನಡೆದಿದೆ.‌ ಇಲ್ಲೊಬ್ಬ ಕಿರಾತಕ ತಂದೆ ಮಗನನ್ನೇ ಕೊಲೆ ಮಾಡಿದ್ದಾನೆ. ಮಗ ನೋಡಲು ತನ್ನಂತೆ…

17 hours ago

ಬಾಬಾ ಸಾಹೇಬ್ ಅಂಬೇಡ್ಕರ್ ಹಾದಿಯಲ್ಲಿ ನಾವು ಸಾಗಬೇಕು- ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಡಿ.ಎಂ.ರೇಣುಕಾಮೂರ್ತಿ

ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ,…

19 hours ago

ಮನೆಯಲ್ಲಿ ವ್ಯಕ್ತಿ ನೇಣಿಗೆ ಶರಣು

ಮನೆಯಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಿನ್ನೆ (ಏ.13) ರಾತ್ರಿ ನಡೆದಿದೆ... ವಿನೋದ್ ಕುಮಾರ್(44),…

23 hours ago