ಆರ್. ಅಶ್ವಿನ್ ರೋಚಕ ಆಟ: ಬಾಂಗ್ಲಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಭಾರತ

ಅತ್ಯಂತ ರೋಚಕತೆಯಿಂದ ಕೂಡಿದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮುರಿಯದ ಏಳನೇ ವಿಕೆಟ್ ಗೆ ಶ್ರೇಯಸ್ ಅಯ್ಯರ್ (29) ಹಾಗೂ ಆಲ್ ರೌಂಡರ್ ಆರ್. ಅಶ್ವಿನ್(42) ರನ್ ಗಳಿಸುವ ಮೂಲಕ 71 ರನ್ ಗಳ ಜೊತೆಯಾಟದ ನೆರವಿನಿಂದ ನಾಲ್ಕನೇ ದಿನದ ಪ್ರಾರಂಭದಲ್ಲಿಯೇ 3 ವಿಕೆಟ್ ಗಳ ಅಧಿಕಾರಯುತ ಜಯ ಸಾಧಿಸಿತು.

ಮೊದಲ ಇನಿಂಗ್ಸ್ ಮುನ್ನಡೆ ಕಾಯ್ದುಕೊಂಡಿದ್ದ ಭಾರತ ಎರಡನೇ ಇನಿಂಗ್ಸ್ ಆರಂಭಿಸಿದಾಗ ಗೆಲ್ಲಲು 144 ರನ್ ಗಳಿಸಿ ಸುಲಭ ಗೆಲುವಿನ ನಿರೀಕ್ಷೆಯಲ್ಲಿತ್ತು ಆದರೆ ಮಾರಕ ಬೌಲಿಂಗ್ ದಾಳಿ ನಡೆಸಿದ ಬಾಂಗ್ಲಾ ಬೌಲಿಂಗ್ ಪಡೆ ಎದುರಾಳಿ ತಂಡದ ಮೊತ್ತ 3 ರನ್ ದಾಟುಲಾಗಲೇ ನಾಯಕ ಹಾಗೂ ಆರಂಭಿಕ ಬ್ಯಾಟ್ಸ್‌ಮನ್ ಕೆ. ಎಲ್. ರಾಹುಲ್ ಅವರ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿತು.

ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್, ಉಪನಾಯಕ ಚತೇಶ್ವರ ಪೂಜಾರ, ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಹೆಚ್ಚು ಕಾಲ ಕ್ರೀಸ್ ನಲ್ಲಿ ನಿಲ್ಲಲಿಲ್ಲ ಈ ಹಂತದಲ್ಲಿ ಆಲ್ ರೌಂಡರ್ ಅಕ್ಷರ್ ಪಟೇಲ್ 34 ರನ್ ಗಳಿಸುವ ಮೂಲಕ ತಂಡಕ್ಕೆ ಕೊಂಚ ಆಸರೆಯಾದರು.

ಒಂದು ಹಂತದಲ್ಲಿ 74 ರನ್ ಗೆ 7 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಯಲ್ಲಿದ್ದ ತಂಡವನ್ನು ಶ್ರೇಯಸ್ ಅಯ್ಯರ್ ಹಾಗೂ ಆಲ್ ರೌಂಡರ್ ಆರ್. ಅಶ್ವಿನ್ 71 ರನ್ ಗಳ ಜೊತೆಯಾಟ ಆಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು, ಅದರಲ್ಲೂ ಅಶ್ವಿನ್ ಒಂದೇ ಓವರ್ ನಲ್ಲಿ ಒಂದು ಸಿಕ್ಸರ್ ಎರಡು ಬೌಂಡರಿ ಸಹಿತ 16 ರನ್ ದೋಚುವ ಮೂಲಕ ತಾನೊಬ್ಬ ಬೆಸ್ಟ್ ಆಲ್ ರೌಂಡರ್ ಎಂದು ತಿಳಿಸಿದರು.

ಬಾಂಗ್ಲಾ ತಂಡದ ಪರವಾಗಿ ಹಸನ್ ಮೀರಜ್ ಐದು ವಿಕೆಟ್ ಗಳ ಗೊಂಚಲು ಪಡೆದರೆ ನಾಯಕ ಶಕೀಬ್ ಆಲ್ ಹಸನ್ ಎರಡು ವಿಕೆಟ್ ಪಡೆದರು. ಎರಡನೇ ಪಂದ್ಯದಲ್ಲಿ 54 ರನ್ ಹಾಗೂ 6 ವಿಕೆಟ್ ಪಡೆಯುವ ಮೂಲಕ ಆರ್. ಅಶ್ವಿನ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಮೊದಲ ಪಂದ್ಯದಲ್ಲಿ ಮಿಂಚಿದ್ದ ಚತೇಶ್ವರ ಪೂಜಾರ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

6 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

13 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

14 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago