ಆರ್. ಅಶ್ವಿನ್ ರೋಚಕ ಆಟ: ಬಾಂಗ್ಲಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಭಾರತ

ಅತ್ಯಂತ ರೋಚಕತೆಯಿಂದ ಕೂಡಿದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮುರಿಯದ ಏಳನೇ ವಿಕೆಟ್ ಗೆ ಶ್ರೇಯಸ್ ಅಯ್ಯರ್ (29) ಹಾಗೂ ಆಲ್ ರೌಂಡರ್ ಆರ್. ಅಶ್ವಿನ್(42) ರನ್ ಗಳಿಸುವ ಮೂಲಕ 71 ರನ್ ಗಳ ಜೊತೆಯಾಟದ ನೆರವಿನಿಂದ ನಾಲ್ಕನೇ ದಿನದ ಪ್ರಾರಂಭದಲ್ಲಿಯೇ 3 ವಿಕೆಟ್ ಗಳ ಅಧಿಕಾರಯುತ ಜಯ ಸಾಧಿಸಿತು.

ಮೊದಲ ಇನಿಂಗ್ಸ್ ಮುನ್ನಡೆ ಕಾಯ್ದುಕೊಂಡಿದ್ದ ಭಾರತ ಎರಡನೇ ಇನಿಂಗ್ಸ್ ಆರಂಭಿಸಿದಾಗ ಗೆಲ್ಲಲು 144 ರನ್ ಗಳಿಸಿ ಸುಲಭ ಗೆಲುವಿನ ನಿರೀಕ್ಷೆಯಲ್ಲಿತ್ತು ಆದರೆ ಮಾರಕ ಬೌಲಿಂಗ್ ದಾಳಿ ನಡೆಸಿದ ಬಾಂಗ್ಲಾ ಬೌಲಿಂಗ್ ಪಡೆ ಎದುರಾಳಿ ತಂಡದ ಮೊತ್ತ 3 ರನ್ ದಾಟುಲಾಗಲೇ ನಾಯಕ ಹಾಗೂ ಆರಂಭಿಕ ಬ್ಯಾಟ್ಸ್‌ಮನ್ ಕೆ. ಎಲ್. ರಾಹುಲ್ ಅವರ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿತು.

ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್, ಉಪನಾಯಕ ಚತೇಶ್ವರ ಪೂಜಾರ, ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಹೆಚ್ಚು ಕಾಲ ಕ್ರೀಸ್ ನಲ್ಲಿ ನಿಲ್ಲಲಿಲ್ಲ ಈ ಹಂತದಲ್ಲಿ ಆಲ್ ರೌಂಡರ್ ಅಕ್ಷರ್ ಪಟೇಲ್ 34 ರನ್ ಗಳಿಸುವ ಮೂಲಕ ತಂಡಕ್ಕೆ ಕೊಂಚ ಆಸರೆಯಾದರು.

ಒಂದು ಹಂತದಲ್ಲಿ 74 ರನ್ ಗೆ 7 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಯಲ್ಲಿದ್ದ ತಂಡವನ್ನು ಶ್ರೇಯಸ್ ಅಯ್ಯರ್ ಹಾಗೂ ಆಲ್ ರೌಂಡರ್ ಆರ್. ಅಶ್ವಿನ್ 71 ರನ್ ಗಳ ಜೊತೆಯಾಟ ಆಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು, ಅದರಲ್ಲೂ ಅಶ್ವಿನ್ ಒಂದೇ ಓವರ್ ನಲ್ಲಿ ಒಂದು ಸಿಕ್ಸರ್ ಎರಡು ಬೌಂಡರಿ ಸಹಿತ 16 ರನ್ ದೋಚುವ ಮೂಲಕ ತಾನೊಬ್ಬ ಬೆಸ್ಟ್ ಆಲ್ ರೌಂಡರ್ ಎಂದು ತಿಳಿಸಿದರು.

ಬಾಂಗ್ಲಾ ತಂಡದ ಪರವಾಗಿ ಹಸನ್ ಮೀರಜ್ ಐದು ವಿಕೆಟ್ ಗಳ ಗೊಂಚಲು ಪಡೆದರೆ ನಾಯಕ ಶಕೀಬ್ ಆಲ್ ಹಸನ್ ಎರಡು ವಿಕೆಟ್ ಪಡೆದರು. ಎರಡನೇ ಪಂದ್ಯದಲ್ಲಿ 54 ರನ್ ಹಾಗೂ 6 ವಿಕೆಟ್ ಪಡೆಯುವ ಮೂಲಕ ಆರ್. ಅಶ್ವಿನ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಮೊದಲ ಪಂದ್ಯದಲ್ಲಿ ಮಿಂಚಿದ್ದ ಚತೇಶ್ವರ ಪೂಜಾರ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

7 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

12 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

14 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

16 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

19 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago