ಅತ್ಯಂತ ರೋಚಕತೆಯಿಂದ ಕೂಡಿದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮುರಿಯದ ಏಳನೇ ವಿಕೆಟ್ ಗೆ ಶ್ರೇಯಸ್ ಅಯ್ಯರ್ (29) ಹಾಗೂ ಆಲ್ ರೌಂಡರ್ ಆರ್. ಅಶ್ವಿನ್(42) ರನ್ ಗಳಿಸುವ ಮೂಲಕ 71 ರನ್ ಗಳ ಜೊತೆಯಾಟದ ನೆರವಿನಿಂದ ನಾಲ್ಕನೇ ದಿನದ ಪ್ರಾರಂಭದಲ್ಲಿಯೇ 3 ವಿಕೆಟ್ ಗಳ ಅಧಿಕಾರಯುತ ಜಯ ಸಾಧಿಸಿತು.
ಮೊದಲ ಇನಿಂಗ್ಸ್ ಮುನ್ನಡೆ ಕಾಯ್ದುಕೊಂಡಿದ್ದ ಭಾರತ ಎರಡನೇ ಇನಿಂಗ್ಸ್ ಆರಂಭಿಸಿದಾಗ ಗೆಲ್ಲಲು 144 ರನ್ ಗಳಿಸಿ ಸುಲಭ ಗೆಲುವಿನ ನಿರೀಕ್ಷೆಯಲ್ಲಿತ್ತು ಆದರೆ ಮಾರಕ ಬೌಲಿಂಗ್ ದಾಳಿ ನಡೆಸಿದ ಬಾಂಗ್ಲಾ ಬೌಲಿಂಗ್ ಪಡೆ ಎದುರಾಳಿ ತಂಡದ ಮೊತ್ತ 3 ರನ್ ದಾಟುಲಾಗಲೇ ನಾಯಕ ಹಾಗೂ ಆರಂಭಿಕ ಬ್ಯಾಟ್ಸ್ಮನ್ ಕೆ. ಎಲ್. ರಾಹುಲ್ ಅವರ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿತು.
ಆರಂಭಿಕ ಬ್ಯಾಟ್ಸ್ಮನ್ ಶುಭಮನ್ ಗಿಲ್, ಉಪನಾಯಕ ಚತೇಶ್ವರ ಪೂಜಾರ, ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಹೆಚ್ಚು ಕಾಲ ಕ್ರೀಸ್ ನಲ್ಲಿ ನಿಲ್ಲಲಿಲ್ಲ ಈ ಹಂತದಲ್ಲಿ ಆಲ್ ರೌಂಡರ್ ಅಕ್ಷರ್ ಪಟೇಲ್ 34 ರನ್ ಗಳಿಸುವ ಮೂಲಕ ತಂಡಕ್ಕೆ ಕೊಂಚ ಆಸರೆಯಾದರು.
ಒಂದು ಹಂತದಲ್ಲಿ 74 ರನ್ ಗೆ 7 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಯಲ್ಲಿದ್ದ ತಂಡವನ್ನು ಶ್ರೇಯಸ್ ಅಯ್ಯರ್ ಹಾಗೂ ಆಲ್ ರೌಂಡರ್ ಆರ್. ಅಶ್ವಿನ್ 71 ರನ್ ಗಳ ಜೊತೆಯಾಟ ಆಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು, ಅದರಲ್ಲೂ ಅಶ್ವಿನ್ ಒಂದೇ ಓವರ್ ನಲ್ಲಿ ಒಂದು ಸಿಕ್ಸರ್ ಎರಡು ಬೌಂಡರಿ ಸಹಿತ 16 ರನ್ ದೋಚುವ ಮೂಲಕ ತಾನೊಬ್ಬ ಬೆಸ್ಟ್ ಆಲ್ ರೌಂಡರ್ ಎಂದು ತಿಳಿಸಿದರು.
ಬಾಂಗ್ಲಾ ತಂಡದ ಪರವಾಗಿ ಹಸನ್ ಮೀರಜ್ ಐದು ವಿಕೆಟ್ ಗಳ ಗೊಂಚಲು ಪಡೆದರೆ ನಾಯಕ ಶಕೀಬ್ ಆಲ್ ಹಸನ್ ಎರಡು ವಿಕೆಟ್ ಪಡೆದರು. ಎರಡನೇ ಪಂದ್ಯದಲ್ಲಿ 54 ರನ್ ಹಾಗೂ 6 ವಿಕೆಟ್ ಪಡೆಯುವ ಮೂಲಕ ಆರ್. ಅಶ್ವಿನ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಮೊದಲ ಪಂದ್ಯದಲ್ಲಿ ಮಿಂಚಿದ್ದ ಚತೇಶ್ವರ ಪೂಜಾರ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…