ಆರ್. ಅಶ್ವಿನ್ ರೋಚಕ ಆಟ: ಬಾಂಗ್ಲಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಭಾರತ

ಅತ್ಯಂತ ರೋಚಕತೆಯಿಂದ ಕೂಡಿದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮುರಿಯದ ಏಳನೇ ವಿಕೆಟ್ ಗೆ ಶ್ರೇಯಸ್ ಅಯ್ಯರ್ (29) ಹಾಗೂ ಆಲ್ ರೌಂಡರ್ ಆರ್. ಅಶ್ವಿನ್(42) ರನ್ ಗಳಿಸುವ ಮೂಲಕ 71 ರನ್ ಗಳ ಜೊತೆಯಾಟದ ನೆರವಿನಿಂದ ನಾಲ್ಕನೇ ದಿನದ ಪ್ರಾರಂಭದಲ್ಲಿಯೇ 3 ವಿಕೆಟ್ ಗಳ ಅಧಿಕಾರಯುತ ಜಯ ಸಾಧಿಸಿತು.

ಮೊದಲ ಇನಿಂಗ್ಸ್ ಮುನ್ನಡೆ ಕಾಯ್ದುಕೊಂಡಿದ್ದ ಭಾರತ ಎರಡನೇ ಇನಿಂಗ್ಸ್ ಆರಂಭಿಸಿದಾಗ ಗೆಲ್ಲಲು 144 ರನ್ ಗಳಿಸಿ ಸುಲಭ ಗೆಲುವಿನ ನಿರೀಕ್ಷೆಯಲ್ಲಿತ್ತು ಆದರೆ ಮಾರಕ ಬೌಲಿಂಗ್ ದಾಳಿ ನಡೆಸಿದ ಬಾಂಗ್ಲಾ ಬೌಲಿಂಗ್ ಪಡೆ ಎದುರಾಳಿ ತಂಡದ ಮೊತ್ತ 3 ರನ್ ದಾಟುಲಾಗಲೇ ನಾಯಕ ಹಾಗೂ ಆರಂಭಿಕ ಬ್ಯಾಟ್ಸ್‌ಮನ್ ಕೆ. ಎಲ್. ರಾಹುಲ್ ಅವರ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿತು.

ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್, ಉಪನಾಯಕ ಚತೇಶ್ವರ ಪೂಜಾರ, ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಹೆಚ್ಚು ಕಾಲ ಕ್ರೀಸ್ ನಲ್ಲಿ ನಿಲ್ಲಲಿಲ್ಲ ಈ ಹಂತದಲ್ಲಿ ಆಲ್ ರೌಂಡರ್ ಅಕ್ಷರ್ ಪಟೇಲ್ 34 ರನ್ ಗಳಿಸುವ ಮೂಲಕ ತಂಡಕ್ಕೆ ಕೊಂಚ ಆಸರೆಯಾದರು.

ಒಂದು ಹಂತದಲ್ಲಿ 74 ರನ್ ಗೆ 7 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಯಲ್ಲಿದ್ದ ತಂಡವನ್ನು ಶ್ರೇಯಸ್ ಅಯ್ಯರ್ ಹಾಗೂ ಆಲ್ ರೌಂಡರ್ ಆರ್. ಅಶ್ವಿನ್ 71 ರನ್ ಗಳ ಜೊತೆಯಾಟ ಆಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು, ಅದರಲ್ಲೂ ಅಶ್ವಿನ್ ಒಂದೇ ಓವರ್ ನಲ್ಲಿ ಒಂದು ಸಿಕ್ಸರ್ ಎರಡು ಬೌಂಡರಿ ಸಹಿತ 16 ರನ್ ದೋಚುವ ಮೂಲಕ ತಾನೊಬ್ಬ ಬೆಸ್ಟ್ ಆಲ್ ರೌಂಡರ್ ಎಂದು ತಿಳಿಸಿದರು.

ಬಾಂಗ್ಲಾ ತಂಡದ ಪರವಾಗಿ ಹಸನ್ ಮೀರಜ್ ಐದು ವಿಕೆಟ್ ಗಳ ಗೊಂಚಲು ಪಡೆದರೆ ನಾಯಕ ಶಕೀಬ್ ಆಲ್ ಹಸನ್ ಎರಡು ವಿಕೆಟ್ ಪಡೆದರು. ಎರಡನೇ ಪಂದ್ಯದಲ್ಲಿ 54 ರನ್ ಹಾಗೂ 6 ವಿಕೆಟ್ ಪಡೆಯುವ ಮೂಲಕ ಆರ್. ಅಶ್ವಿನ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಮೊದಲ ಪಂದ್ಯದಲ್ಲಿ ಮಿಂಚಿದ್ದ ಚತೇಶ್ವರ ಪೂಜಾರ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

6 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

17 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

18 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

18 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

21 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

24 hours ago