ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯಕ್ಕೆ ಲಭಿಸಿದ ನ್ಯಾಕ್ ‘ಎ’ ಶ್ರೇಣಿ

ನಗರದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ-ನ್ಯಾಕ್‌ “ಎ” ಶ್ರೇಣಿ ನೀಡಿದೆ ಎಂದು ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ತಿಳಿಸಿದರು.

ಆರ್.ಎಲ್‌.ಜೆ.ಐ.ಟಿ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಾರ ಕಾಲೇಜಿಗೆ ಭೇಟಿ ನೀಡಿದ್ದ ತಜ್ಞರ ಸಮಿತಿ ಕಾಲೇಜಿನ ಮೂಲಸೌಕರ್ಯ, ಸಂಶೋಧನೆ ಮತ್ತು ಅಧ್ಯಯನ, ಬೋಧನಾ ಗುಣಮಟ್ಟ, ಪೂರಕ ಸವಲತ್ತು, ವಿದ್ಯಾರ್ಥಿಯ ಶೈಕ್ಷಣಿಕ ಬೆಳವಣಿಗೆ ಮತ್ತು ಪ್ರತಿಕ್ರಿಯೆ, ಸಾಮಾಜಿಕ ಕಾಳಜಿ, ವಸತಿ ನಿಲಯ, ಹಣಕಾಸು ನಿರ್ವಹಣೆ, ಕ್ರೀಡೆ, ಸಾಂಸ್ಕೃತಿಕ ಸವಲತ್ತುಗಳು ಸೇರಿದಂತೆ ವಿವಿಧ ಹಂತಗಳಲ್ಲಿ ಸಮಗ್ರ ಪರಿಶೀಲನೆ ನಡೆಸಿ 3.24 ಸಿಜಿಪಿಎ ಅಂಕಗಳೊಂದಿಗೆ ‘ಎ’ ಶ್ರೇಣಿ ನೀಡಲಾಗಿದ್ದು, ಮುಂದಿನ 5 ವರ್ಷಗಳವರೆಗೆ ಈ ಮೌಲ್ಯಾಂಕನ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಿದರು.

ತಾಂತ್ರಿಕ ಮಹಾವಿದ್ಯಾಲಯ ಆರಂಭವಾಗಿ 23 ವರ್ಷ ಕಳೆದಿದ್ದು, ಮೊದಲ ಯತ್ನದಲ್ಲೇ ನ್ಯಾಕ್‌ ‘ಎ’ ಶ್ರೇಣಿ ಪಡೆದಿರುವ ಆರ್‌ಎಲ್‌ಜೆಐಟಿ ಸಾಧನೆ ಅನನ್ಯ. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ದಿವಂಗತ ಆರ್.ಎಲ್.ಜಾಲಪ್ಪ ಅವರ ಸಾಮಾಜಿಕ ಕಾಳಜಿಯ ಆಲೋಚನೆಗಳನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸ್ಥಳೀಯರಿಗೆ ಹೆಚ್ಚಿನ ಶೈಕ್ಷಣಿಕ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ. ಎಲ್ಲ ಹಂತಗಳಲ್ಲೂ ಕಾಲೇಜು ಉನ್ನತೀಕರಣಗೊಂಡಿದೆ ಎಂದರು.

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವ್ಯವಹಾರ ನಿರ್ವಹಣಾ ಸ್ನಾತಕೋತ್ತರ ಪದವಿ ಎಂಬಿಎ ಹಾಗೂ ಮುಂಬರುವ ವರ್ಷದಿಂದ ಎಂ.ಟೆಕ್ ಪದವಿಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ಕೆ.ವಿಜಯ್ ಕಾರ್ತಿಕ್ ಮಾತನಾಡಿ, ಸತತ ಐದು ವರ್ಷಗಳ ಪರಿಶ್ರ‌ಮದ ಕಾರಣ ಈ ರಾಷ್ಟ್ರ ಮಟ್ಟದ ಗೌರವ ನಮ್ಮ ಕಾಲೇಜಿಗೆ ದೊರೆತಿದೆ. ಗುಣಮಟ್ಟದ ಶಿಕ್ಷಣ, ಸೌಲಭ್ಯ ನೀಡುವುದರ ಜೊತೆಗೆ ಸಿಬ್ಬಂದಿ, ಆಡಳಿತ ಮಂಡಳಿಯ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ ಎಂದರು.

ಮಾನವ ಸಂಪನ್ಮೂಲ ಅಧಿಕಾರಿ ಎನ್.ಎಸ್.ಬಾಬುರೆಡ್ಡಿ ಮಾತನಾಡಿ, ಕಾಲೇಜಿನ ವಾತಾವರಣ, ಸೌಲಭ್ಯ, ಶಿಕ್ಷಣ ಸೇರಿದಂತೆ ಸಿಬ್ಬಂದಿಗಳಿಗೆ ಒದಗಿಸಲಾದ ಸೌಲಭ್ಯ, ವಿದ್ಯಾರ್ಥಿಗಳಿಗೆ ದೊರೆತ ಉದ್ಯೋಗಾವಕಾಶಗಳನ್ನೂ ಆದ್ಯತೆಯಾಗಿ ಪರಿಗಣಿಸಲಾಗಿದೆ ಎಂದರು.

ಕಾರ್ಯನಿರ್ವಾಹಕ ಅಭಿಯಂತರ ಐ.ಎಂ.ರಮೇಶ್‌ಕುಮಾರ್ ಮಾತನಾಡಿ, ಕ್ಯಾಂಪಸ್‌ನಲ್ಲಿ ಅತ್ಯಾಧುನಿಕ ವ್ಯವಸ್ಥೆಗಳನ್ನು ಕಲ್ಪಿಸಲಾಗಿದ್ದು, ಹಸಿರು ಕ್ಯಾಂಪಸ್‌ ಮನ್ನಣೆಗೆ ಪಾತ್ರವಾಗಿದೆ. 400 ಮೀಟರ್ ಟ್ರಾಕ್‌, ಕ್ರೀಡಾಂಗಣ ಉನ್ನತೀಕರಣ, ಸೋಲಾರ್, ಬಯೋಗ್ಯಾಸ್ಮ ಈಜು ಕೊಳ, ಹಸಿರು ಮನೆ, ಆರ್‌ಒ ಘಟಕಗಳನ್ನು ಹೊಸದಾಗಿ ನಿರ್ಮಿಸಲಾಗಿದೆ ಎಂದರು.

ಉಪಪ್ರಾಂಶುಪಾಲ ಡಾ.ಶಿವಪ್ರಸಾದ್, ನ್ಯಾಕ್ ಸಂಯೋಜಕರು, ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನೇಪಾಳದ ದಂಗೆ……

ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…

4 hours ago

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

7 hours ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

17 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

18 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

21 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

23 hours ago