ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯಕ್ಕೆ ಲಭಿಸಿದ ನ್ಯಾಕ್ ‘ಎ’ ಶ್ರೇಣಿ

ನಗರದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ-ನ್ಯಾಕ್‌ “ಎ” ಶ್ರೇಣಿ ನೀಡಿದೆ ಎಂದು ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ತಿಳಿಸಿದರು.

ಆರ್.ಎಲ್‌.ಜೆ.ಐ.ಟಿ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಾರ ಕಾಲೇಜಿಗೆ ಭೇಟಿ ನೀಡಿದ್ದ ತಜ್ಞರ ಸಮಿತಿ ಕಾಲೇಜಿನ ಮೂಲಸೌಕರ್ಯ, ಸಂಶೋಧನೆ ಮತ್ತು ಅಧ್ಯಯನ, ಬೋಧನಾ ಗುಣಮಟ್ಟ, ಪೂರಕ ಸವಲತ್ತು, ವಿದ್ಯಾರ್ಥಿಯ ಶೈಕ್ಷಣಿಕ ಬೆಳವಣಿಗೆ ಮತ್ತು ಪ್ರತಿಕ್ರಿಯೆ, ಸಾಮಾಜಿಕ ಕಾಳಜಿ, ವಸತಿ ನಿಲಯ, ಹಣಕಾಸು ನಿರ್ವಹಣೆ, ಕ್ರೀಡೆ, ಸಾಂಸ್ಕೃತಿಕ ಸವಲತ್ತುಗಳು ಸೇರಿದಂತೆ ವಿವಿಧ ಹಂತಗಳಲ್ಲಿ ಸಮಗ್ರ ಪರಿಶೀಲನೆ ನಡೆಸಿ 3.24 ಸಿಜಿಪಿಎ ಅಂಕಗಳೊಂದಿಗೆ ‘ಎ’ ಶ್ರೇಣಿ ನೀಡಲಾಗಿದ್ದು, ಮುಂದಿನ 5 ವರ್ಷಗಳವರೆಗೆ ಈ ಮೌಲ್ಯಾಂಕನ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಿದರು.

ತಾಂತ್ರಿಕ ಮಹಾವಿದ್ಯಾಲಯ ಆರಂಭವಾಗಿ 23 ವರ್ಷ ಕಳೆದಿದ್ದು, ಮೊದಲ ಯತ್ನದಲ್ಲೇ ನ್ಯಾಕ್‌ ‘ಎ’ ಶ್ರೇಣಿ ಪಡೆದಿರುವ ಆರ್‌ಎಲ್‌ಜೆಐಟಿ ಸಾಧನೆ ಅನನ್ಯ. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ದಿವಂಗತ ಆರ್.ಎಲ್.ಜಾಲಪ್ಪ ಅವರ ಸಾಮಾಜಿಕ ಕಾಳಜಿಯ ಆಲೋಚನೆಗಳನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸ್ಥಳೀಯರಿಗೆ ಹೆಚ್ಚಿನ ಶೈಕ್ಷಣಿಕ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ. ಎಲ್ಲ ಹಂತಗಳಲ್ಲೂ ಕಾಲೇಜು ಉನ್ನತೀಕರಣಗೊಂಡಿದೆ ಎಂದರು.

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವ್ಯವಹಾರ ನಿರ್ವಹಣಾ ಸ್ನಾತಕೋತ್ತರ ಪದವಿ ಎಂಬಿಎ ಹಾಗೂ ಮುಂಬರುವ ವರ್ಷದಿಂದ ಎಂ.ಟೆಕ್ ಪದವಿಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ಕೆ.ವಿಜಯ್ ಕಾರ್ತಿಕ್ ಮಾತನಾಡಿ, ಸತತ ಐದು ವರ್ಷಗಳ ಪರಿಶ್ರ‌ಮದ ಕಾರಣ ಈ ರಾಷ್ಟ್ರ ಮಟ್ಟದ ಗೌರವ ನಮ್ಮ ಕಾಲೇಜಿಗೆ ದೊರೆತಿದೆ. ಗುಣಮಟ್ಟದ ಶಿಕ್ಷಣ, ಸೌಲಭ್ಯ ನೀಡುವುದರ ಜೊತೆಗೆ ಸಿಬ್ಬಂದಿ, ಆಡಳಿತ ಮಂಡಳಿಯ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ ಎಂದರು.

ಮಾನವ ಸಂಪನ್ಮೂಲ ಅಧಿಕಾರಿ ಎನ್.ಎಸ್.ಬಾಬುರೆಡ್ಡಿ ಮಾತನಾಡಿ, ಕಾಲೇಜಿನ ವಾತಾವರಣ, ಸೌಲಭ್ಯ, ಶಿಕ್ಷಣ ಸೇರಿದಂತೆ ಸಿಬ್ಬಂದಿಗಳಿಗೆ ಒದಗಿಸಲಾದ ಸೌಲಭ್ಯ, ವಿದ್ಯಾರ್ಥಿಗಳಿಗೆ ದೊರೆತ ಉದ್ಯೋಗಾವಕಾಶಗಳನ್ನೂ ಆದ್ಯತೆಯಾಗಿ ಪರಿಗಣಿಸಲಾಗಿದೆ ಎಂದರು.

ಕಾರ್ಯನಿರ್ವಾಹಕ ಅಭಿಯಂತರ ಐ.ಎಂ.ರಮೇಶ್‌ಕುಮಾರ್ ಮಾತನಾಡಿ, ಕ್ಯಾಂಪಸ್‌ನಲ್ಲಿ ಅತ್ಯಾಧುನಿಕ ವ್ಯವಸ್ಥೆಗಳನ್ನು ಕಲ್ಪಿಸಲಾಗಿದ್ದು, ಹಸಿರು ಕ್ಯಾಂಪಸ್‌ ಮನ್ನಣೆಗೆ ಪಾತ್ರವಾಗಿದೆ. 400 ಮೀಟರ್ ಟ್ರಾಕ್‌, ಕ್ರೀಡಾಂಗಣ ಉನ್ನತೀಕರಣ, ಸೋಲಾರ್, ಬಯೋಗ್ಯಾಸ್ಮ ಈಜು ಕೊಳ, ಹಸಿರು ಮನೆ, ಆರ್‌ಒ ಘಟಕಗಳನ್ನು ಹೊಸದಾಗಿ ನಿರ್ಮಿಸಲಾಗಿದೆ ಎಂದರು.

ಉಪಪ್ರಾಂಶುಪಾಲ ಡಾ.ಶಿವಪ್ರಸಾದ್, ನ್ಯಾಕ್ ಸಂಯೋಜಕರು, ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

3 hours ago

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

15 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

16 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

16 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

17 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

19 hours ago