ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯಕ್ಕೆ ಲಭಿಸಿದ ನ್ಯಾಕ್ ‘ಎ’ ಶ್ರೇಣಿ

ನಗರದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ-ನ್ಯಾಕ್‌ “ಎ” ಶ್ರೇಣಿ ನೀಡಿದೆ ಎಂದು ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ತಿಳಿಸಿದರು.

ಆರ್.ಎಲ್‌.ಜೆ.ಐ.ಟಿ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಾರ ಕಾಲೇಜಿಗೆ ಭೇಟಿ ನೀಡಿದ್ದ ತಜ್ಞರ ಸಮಿತಿ ಕಾಲೇಜಿನ ಮೂಲಸೌಕರ್ಯ, ಸಂಶೋಧನೆ ಮತ್ತು ಅಧ್ಯಯನ, ಬೋಧನಾ ಗುಣಮಟ್ಟ, ಪೂರಕ ಸವಲತ್ತು, ವಿದ್ಯಾರ್ಥಿಯ ಶೈಕ್ಷಣಿಕ ಬೆಳವಣಿಗೆ ಮತ್ತು ಪ್ರತಿಕ್ರಿಯೆ, ಸಾಮಾಜಿಕ ಕಾಳಜಿ, ವಸತಿ ನಿಲಯ, ಹಣಕಾಸು ನಿರ್ವಹಣೆ, ಕ್ರೀಡೆ, ಸಾಂಸ್ಕೃತಿಕ ಸವಲತ್ತುಗಳು ಸೇರಿದಂತೆ ವಿವಿಧ ಹಂತಗಳಲ್ಲಿ ಸಮಗ್ರ ಪರಿಶೀಲನೆ ನಡೆಸಿ 3.24 ಸಿಜಿಪಿಎ ಅಂಕಗಳೊಂದಿಗೆ ‘ಎ’ ಶ್ರೇಣಿ ನೀಡಲಾಗಿದ್ದು, ಮುಂದಿನ 5 ವರ್ಷಗಳವರೆಗೆ ಈ ಮೌಲ್ಯಾಂಕನ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಿದರು.

ತಾಂತ್ರಿಕ ಮಹಾವಿದ್ಯಾಲಯ ಆರಂಭವಾಗಿ 23 ವರ್ಷ ಕಳೆದಿದ್ದು, ಮೊದಲ ಯತ್ನದಲ್ಲೇ ನ್ಯಾಕ್‌ ‘ಎ’ ಶ್ರೇಣಿ ಪಡೆದಿರುವ ಆರ್‌ಎಲ್‌ಜೆಐಟಿ ಸಾಧನೆ ಅನನ್ಯ. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ದಿವಂಗತ ಆರ್.ಎಲ್.ಜಾಲಪ್ಪ ಅವರ ಸಾಮಾಜಿಕ ಕಾಳಜಿಯ ಆಲೋಚನೆಗಳನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸ್ಥಳೀಯರಿಗೆ ಹೆಚ್ಚಿನ ಶೈಕ್ಷಣಿಕ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ. ಎಲ್ಲ ಹಂತಗಳಲ್ಲೂ ಕಾಲೇಜು ಉನ್ನತೀಕರಣಗೊಂಡಿದೆ ಎಂದರು.

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವ್ಯವಹಾರ ನಿರ್ವಹಣಾ ಸ್ನಾತಕೋತ್ತರ ಪದವಿ ಎಂಬಿಎ ಹಾಗೂ ಮುಂಬರುವ ವರ್ಷದಿಂದ ಎಂ.ಟೆಕ್ ಪದವಿಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ಕೆ.ವಿಜಯ್ ಕಾರ್ತಿಕ್ ಮಾತನಾಡಿ, ಸತತ ಐದು ವರ್ಷಗಳ ಪರಿಶ್ರ‌ಮದ ಕಾರಣ ಈ ರಾಷ್ಟ್ರ ಮಟ್ಟದ ಗೌರವ ನಮ್ಮ ಕಾಲೇಜಿಗೆ ದೊರೆತಿದೆ. ಗುಣಮಟ್ಟದ ಶಿಕ್ಷಣ, ಸೌಲಭ್ಯ ನೀಡುವುದರ ಜೊತೆಗೆ ಸಿಬ್ಬಂದಿ, ಆಡಳಿತ ಮಂಡಳಿಯ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ ಎಂದರು.

ಮಾನವ ಸಂಪನ್ಮೂಲ ಅಧಿಕಾರಿ ಎನ್.ಎಸ್.ಬಾಬುರೆಡ್ಡಿ ಮಾತನಾಡಿ, ಕಾಲೇಜಿನ ವಾತಾವರಣ, ಸೌಲಭ್ಯ, ಶಿಕ್ಷಣ ಸೇರಿದಂತೆ ಸಿಬ್ಬಂದಿಗಳಿಗೆ ಒದಗಿಸಲಾದ ಸೌಲಭ್ಯ, ವಿದ್ಯಾರ್ಥಿಗಳಿಗೆ ದೊರೆತ ಉದ್ಯೋಗಾವಕಾಶಗಳನ್ನೂ ಆದ್ಯತೆಯಾಗಿ ಪರಿಗಣಿಸಲಾಗಿದೆ ಎಂದರು.

ಕಾರ್ಯನಿರ್ವಾಹಕ ಅಭಿಯಂತರ ಐ.ಎಂ.ರಮೇಶ್‌ಕುಮಾರ್ ಮಾತನಾಡಿ, ಕ್ಯಾಂಪಸ್‌ನಲ್ಲಿ ಅತ್ಯಾಧುನಿಕ ವ್ಯವಸ್ಥೆಗಳನ್ನು ಕಲ್ಪಿಸಲಾಗಿದ್ದು, ಹಸಿರು ಕ್ಯಾಂಪಸ್‌ ಮನ್ನಣೆಗೆ ಪಾತ್ರವಾಗಿದೆ. 400 ಮೀಟರ್ ಟ್ರಾಕ್‌, ಕ್ರೀಡಾಂಗಣ ಉನ್ನತೀಕರಣ, ಸೋಲಾರ್, ಬಯೋಗ್ಯಾಸ್ಮ ಈಜು ಕೊಳ, ಹಸಿರು ಮನೆ, ಆರ್‌ಒ ಘಟಕಗಳನ್ನು ಹೊಸದಾಗಿ ನಿರ್ಮಿಸಲಾಗಿದೆ ಎಂದರು.

ಉಪಪ್ರಾಂಶುಪಾಲ ಡಾ.ಶಿವಪ್ರಸಾದ್, ನ್ಯಾಕ್ ಸಂಯೋಜಕರು, ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago