ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯಕ್ಕೆ ಲಭಿಸಿದ ನ್ಯಾಕ್ ‘ಎ’ ಶ್ರೇಣಿ

ನಗರದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ-ನ್ಯಾಕ್‌ “ಎ” ಶ್ರೇಣಿ ನೀಡಿದೆ ಎಂದು ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ತಿಳಿಸಿದರು.

ಆರ್.ಎಲ್‌.ಜೆ.ಐ.ಟಿ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಾರ ಕಾಲೇಜಿಗೆ ಭೇಟಿ ನೀಡಿದ್ದ ತಜ್ಞರ ಸಮಿತಿ ಕಾಲೇಜಿನ ಮೂಲಸೌಕರ್ಯ, ಸಂಶೋಧನೆ ಮತ್ತು ಅಧ್ಯಯನ, ಬೋಧನಾ ಗುಣಮಟ್ಟ, ಪೂರಕ ಸವಲತ್ತು, ವಿದ್ಯಾರ್ಥಿಯ ಶೈಕ್ಷಣಿಕ ಬೆಳವಣಿಗೆ ಮತ್ತು ಪ್ರತಿಕ್ರಿಯೆ, ಸಾಮಾಜಿಕ ಕಾಳಜಿ, ವಸತಿ ನಿಲಯ, ಹಣಕಾಸು ನಿರ್ವಹಣೆ, ಕ್ರೀಡೆ, ಸಾಂಸ್ಕೃತಿಕ ಸವಲತ್ತುಗಳು ಸೇರಿದಂತೆ ವಿವಿಧ ಹಂತಗಳಲ್ಲಿ ಸಮಗ್ರ ಪರಿಶೀಲನೆ ನಡೆಸಿ 3.24 ಸಿಜಿಪಿಎ ಅಂಕಗಳೊಂದಿಗೆ ‘ಎ’ ಶ್ರೇಣಿ ನೀಡಲಾಗಿದ್ದು, ಮುಂದಿನ 5 ವರ್ಷಗಳವರೆಗೆ ಈ ಮೌಲ್ಯಾಂಕನ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಿದರು.

ತಾಂತ್ರಿಕ ಮಹಾವಿದ್ಯಾಲಯ ಆರಂಭವಾಗಿ 23 ವರ್ಷ ಕಳೆದಿದ್ದು, ಮೊದಲ ಯತ್ನದಲ್ಲೇ ನ್ಯಾಕ್‌ ‘ಎ’ ಶ್ರೇಣಿ ಪಡೆದಿರುವ ಆರ್‌ಎಲ್‌ಜೆಐಟಿ ಸಾಧನೆ ಅನನ್ಯ. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ದಿವಂಗತ ಆರ್.ಎಲ್.ಜಾಲಪ್ಪ ಅವರ ಸಾಮಾಜಿಕ ಕಾಳಜಿಯ ಆಲೋಚನೆಗಳನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸ್ಥಳೀಯರಿಗೆ ಹೆಚ್ಚಿನ ಶೈಕ್ಷಣಿಕ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ. ಎಲ್ಲ ಹಂತಗಳಲ್ಲೂ ಕಾಲೇಜು ಉನ್ನತೀಕರಣಗೊಂಡಿದೆ ಎಂದರು.

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವ್ಯವಹಾರ ನಿರ್ವಹಣಾ ಸ್ನಾತಕೋತ್ತರ ಪದವಿ ಎಂಬಿಎ ಹಾಗೂ ಮುಂಬರುವ ವರ್ಷದಿಂದ ಎಂ.ಟೆಕ್ ಪದವಿಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ಕೆ.ವಿಜಯ್ ಕಾರ್ತಿಕ್ ಮಾತನಾಡಿ, ಸತತ ಐದು ವರ್ಷಗಳ ಪರಿಶ್ರ‌ಮದ ಕಾರಣ ಈ ರಾಷ್ಟ್ರ ಮಟ್ಟದ ಗೌರವ ನಮ್ಮ ಕಾಲೇಜಿಗೆ ದೊರೆತಿದೆ. ಗುಣಮಟ್ಟದ ಶಿಕ್ಷಣ, ಸೌಲಭ್ಯ ನೀಡುವುದರ ಜೊತೆಗೆ ಸಿಬ್ಬಂದಿ, ಆಡಳಿತ ಮಂಡಳಿಯ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ ಎಂದರು.

ಮಾನವ ಸಂಪನ್ಮೂಲ ಅಧಿಕಾರಿ ಎನ್.ಎಸ್.ಬಾಬುರೆಡ್ಡಿ ಮಾತನಾಡಿ, ಕಾಲೇಜಿನ ವಾತಾವರಣ, ಸೌಲಭ್ಯ, ಶಿಕ್ಷಣ ಸೇರಿದಂತೆ ಸಿಬ್ಬಂದಿಗಳಿಗೆ ಒದಗಿಸಲಾದ ಸೌಲಭ್ಯ, ವಿದ್ಯಾರ್ಥಿಗಳಿಗೆ ದೊರೆತ ಉದ್ಯೋಗಾವಕಾಶಗಳನ್ನೂ ಆದ್ಯತೆಯಾಗಿ ಪರಿಗಣಿಸಲಾಗಿದೆ ಎಂದರು.

ಕಾರ್ಯನಿರ್ವಾಹಕ ಅಭಿಯಂತರ ಐ.ಎಂ.ರಮೇಶ್‌ಕುಮಾರ್ ಮಾತನಾಡಿ, ಕ್ಯಾಂಪಸ್‌ನಲ್ಲಿ ಅತ್ಯಾಧುನಿಕ ವ್ಯವಸ್ಥೆಗಳನ್ನು ಕಲ್ಪಿಸಲಾಗಿದ್ದು, ಹಸಿರು ಕ್ಯಾಂಪಸ್‌ ಮನ್ನಣೆಗೆ ಪಾತ್ರವಾಗಿದೆ. 400 ಮೀಟರ್ ಟ್ರಾಕ್‌, ಕ್ರೀಡಾಂಗಣ ಉನ್ನತೀಕರಣ, ಸೋಲಾರ್, ಬಯೋಗ್ಯಾಸ್ಮ ಈಜು ಕೊಳ, ಹಸಿರು ಮನೆ, ಆರ್‌ಒ ಘಟಕಗಳನ್ನು ಹೊಸದಾಗಿ ನಿರ್ಮಿಸಲಾಗಿದೆ ಎಂದರು.

ಉಪಪ್ರಾಂಶುಪಾಲ ಡಾ.ಶಿವಪ್ರಸಾದ್, ನ್ಯಾಕ್ ಸಂಯೋಜಕರು, ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

2 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

5 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

6 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

17 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

22 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

24 hours ago