ಆರ್ ಟಿಐ ಕಾರ್ಯಕರ್ತ ಮೂರ್ತಿ ಹತ್ಯೆ ಖಂಡಿಸಿ ಪ್ರತಿಭಟನೆ

 

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ನರೇಗಾ) ಅಕ್ರಮ ಪ್ರಶ್ನಿಸಿದ್ದ ಸಾಮಾಜಿಕ ಕಾರ್ಯಕರ್ತ ಮೂರ್ತಿ ಹತ್ಯೆಗೆ ಸೂಕ್ತ ನ್ಯಾಯ ದೊರಕಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರುಆರೋಪಿಗಳನ್ನು ತಕ್ಷಣ ಬಂಧಿಸುವಂತೆ‌ ಒತ್ತಾಯಿಸಿದರು.

ಸಾತನೂರು ಹೋಬಳಿಯ ಹಲಸಿನಮರದೊಡ್ಡಿ ಗ್ರಾಮದ ಸಾಮಾಜಿಕ ಕಾರ್ಯಕರ್ತ ಮೂರ್ತಿ ಅವರನ್ನು ಡಿ.22ರಂದು ಬೆಳಿಗ್ಗೆ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಹತ್ಯೆ ಖಂಡಿಸಿ ಭಾನುವಾರ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.

ಗ್ರಾಮ ಪಂಚಾಯ್ತಿಯಲ್ಲಿ ಹಲವು ತಿಂಗಳಿನಿಂದ ನಡೆಯುತ್ತಿರುವ ನರೇಗಾ ಕಳಪೆ ಕಾಮಗಾರಿಗಳ ಬಗ್ಗೆ ಹಿರಿಯ ಅಧಿಕಾರಿಗಳು ಮತ್ತು ಸರ್ಕಾರಕ್ಕೆ ಮೂರ್ತಿ ಅವರು ದೂರು ನೀಡಿದ್ದೆ ಕೊಲೆಗೆ ಕಾರಣವಾಗಿದೆ. ಮೂರ್ತಿ ಅವರು ಆ ಭಾಗದಲ್ಲಿ ಅನೇಕ ಅಕ್ರಮಗಳನ್ನು ಆರ್‌ಟಿಐ ಮೂಲಕ ಬಯಲಿಗೆ ಎಳೆದಿದ್ದರು. ಇಂತಹ ಹೋರಾಟಗಾರನನ್ನು ಹತ್ಯೆ‌ ಮಾಡಿರುವುದು ಖಂಡನೀಯ ಎಂದು‌ ವೇದಿಕೆಯ ರಾಜ್ಯಾಧ್ಯಕ್ಷ ವಿ.ಹನುಮಂತರಾಯಪ್ಪ ಹೇಳಿದರು.

ಮೂರ್ತಿ ಅವರ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಬೇಕು. ಅಲ್ಲದೆ ಆರ್‌ಟಿಐ ಕಾರ್ಯಕರ್ತರಿಗೆ ರಕ್ಷಣೆ ನೀಡುವ ಕಾನೂನುಗಳಿಲ್ಲ. ಹಾಗಾಗಿಯೇ ಇಂತಹ ಘಟನೆಗಳು ನಡೆಯುತ್ತಿವೆ ಎಂದರು.

ಆರ್‌ಟಿಐ ಕಾರ್ಯಕರ್ತ ಮೂರ್ತಿ ಹತ್ಯೆ ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಸಬೇಕು. ಕೊಲೆಗಾರರನ್ನು ಗಲ್ಲಿಗೇರಿಸಬೇಕು. ಮೂರ್ತಿ ಕುಟುಂಬಕ್ಕೆ ಸರ್ಕಾರ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು. ಜೊತೆಗೆ ಕುಟುಂಬದ ಒಬ್ಬರಿಗೆ ಸರ್ಕಾರಿ‌ ನೌಕರಿ ನೀಡಬೇಕೆಂದು ಒತ್ತಾಯಿಸಿದರು.

ವೇದಿಕೆಯ ಕಾರ್ಯಾಧ್ಯಕ್ಷ ಆನಂದಮೂರ್ತಿ,
ಉಪಾಧ್ಯಕ್ಷ, ನರಸಿಂಹಮೂರ್ತಿ,
ರಾಜ್ಯ ಮಾಧ್ಯಮ ವಕ್ತಾರ ಜೆ.ಮುನಿರಾಜು,
ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಎಸ್.ಬಿ.ರಮೇಶ್, ದೇವನಹಳ್ಳಿ ತಾಲ್ಲೂಕು ಅದ್ಯಕ್ಷ ಆರ್.ಕೆ.ಎಂ.ಗೌಡ
ದೇವನಹಳ್ಳಿ ಮಹಿಳಾ ಘಟಕದ ಪುಷ್ಪಲತ,
ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ತ್ಯಾಗರಾಜು, ಸಮಾಜ ಸೇವಕ ಮಲ್ಲೇಶ್, ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ನಂಜಪ್ಪ, ರಾಜ್ಯ ಸಮಿತಿ ಖಜಾಂಚಿ ಗಂಗಮ್ಮ, ಪೀರ್ ಪಾಷ, ವೈರ್ ಶಿವಕುಮಾರ್ ಇತರರು ಬಾಗವಹಿಸಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

19 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

24 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago