ಆರ್ ಟಿಐ ಕಾರ್ಯಕರ್ತ ಮೂರ್ತಿ ಹತ್ಯೆ ಖಂಡಿಸಿ ಪ್ರತಿಭಟನೆ

 

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ನರೇಗಾ) ಅಕ್ರಮ ಪ್ರಶ್ನಿಸಿದ್ದ ಸಾಮಾಜಿಕ ಕಾರ್ಯಕರ್ತ ಮೂರ್ತಿ ಹತ್ಯೆಗೆ ಸೂಕ್ತ ನ್ಯಾಯ ದೊರಕಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರುಆರೋಪಿಗಳನ್ನು ತಕ್ಷಣ ಬಂಧಿಸುವಂತೆ‌ ಒತ್ತಾಯಿಸಿದರು.

ಸಾತನೂರು ಹೋಬಳಿಯ ಹಲಸಿನಮರದೊಡ್ಡಿ ಗ್ರಾಮದ ಸಾಮಾಜಿಕ ಕಾರ್ಯಕರ್ತ ಮೂರ್ತಿ ಅವರನ್ನು ಡಿ.22ರಂದು ಬೆಳಿಗ್ಗೆ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಹತ್ಯೆ ಖಂಡಿಸಿ ಭಾನುವಾರ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.

ಗ್ರಾಮ ಪಂಚಾಯ್ತಿಯಲ್ಲಿ ಹಲವು ತಿಂಗಳಿನಿಂದ ನಡೆಯುತ್ತಿರುವ ನರೇಗಾ ಕಳಪೆ ಕಾಮಗಾರಿಗಳ ಬಗ್ಗೆ ಹಿರಿಯ ಅಧಿಕಾರಿಗಳು ಮತ್ತು ಸರ್ಕಾರಕ್ಕೆ ಮೂರ್ತಿ ಅವರು ದೂರು ನೀಡಿದ್ದೆ ಕೊಲೆಗೆ ಕಾರಣವಾಗಿದೆ. ಮೂರ್ತಿ ಅವರು ಆ ಭಾಗದಲ್ಲಿ ಅನೇಕ ಅಕ್ರಮಗಳನ್ನು ಆರ್‌ಟಿಐ ಮೂಲಕ ಬಯಲಿಗೆ ಎಳೆದಿದ್ದರು. ಇಂತಹ ಹೋರಾಟಗಾರನನ್ನು ಹತ್ಯೆ‌ ಮಾಡಿರುವುದು ಖಂಡನೀಯ ಎಂದು‌ ವೇದಿಕೆಯ ರಾಜ್ಯಾಧ್ಯಕ್ಷ ವಿ.ಹನುಮಂತರಾಯಪ್ಪ ಹೇಳಿದರು.

ಮೂರ್ತಿ ಅವರ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಬೇಕು. ಅಲ್ಲದೆ ಆರ್‌ಟಿಐ ಕಾರ್ಯಕರ್ತರಿಗೆ ರಕ್ಷಣೆ ನೀಡುವ ಕಾನೂನುಗಳಿಲ್ಲ. ಹಾಗಾಗಿಯೇ ಇಂತಹ ಘಟನೆಗಳು ನಡೆಯುತ್ತಿವೆ ಎಂದರು.

ಆರ್‌ಟಿಐ ಕಾರ್ಯಕರ್ತ ಮೂರ್ತಿ ಹತ್ಯೆ ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಸಬೇಕು. ಕೊಲೆಗಾರರನ್ನು ಗಲ್ಲಿಗೇರಿಸಬೇಕು. ಮೂರ್ತಿ ಕುಟುಂಬಕ್ಕೆ ಸರ್ಕಾರ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು. ಜೊತೆಗೆ ಕುಟುಂಬದ ಒಬ್ಬರಿಗೆ ಸರ್ಕಾರಿ‌ ನೌಕರಿ ನೀಡಬೇಕೆಂದು ಒತ್ತಾಯಿಸಿದರು.

ವೇದಿಕೆಯ ಕಾರ್ಯಾಧ್ಯಕ್ಷ ಆನಂದಮೂರ್ತಿ,
ಉಪಾಧ್ಯಕ್ಷ, ನರಸಿಂಹಮೂರ್ತಿ,
ರಾಜ್ಯ ಮಾಧ್ಯಮ ವಕ್ತಾರ ಜೆ.ಮುನಿರಾಜು,
ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಎಸ್.ಬಿ.ರಮೇಶ್, ದೇವನಹಳ್ಳಿ ತಾಲ್ಲೂಕು ಅದ್ಯಕ್ಷ ಆರ್.ಕೆ.ಎಂ.ಗೌಡ
ದೇವನಹಳ್ಳಿ ಮಹಿಳಾ ಘಟಕದ ಪುಷ್ಪಲತ,
ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ತ್ಯಾಗರಾಜು, ಸಮಾಜ ಸೇವಕ ಮಲ್ಲೇಶ್, ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ನಂಜಪ್ಪ, ರಾಜ್ಯ ಸಮಿತಿ ಖಜಾಂಚಿ ಗಂಗಮ್ಮ, ಪೀರ್ ಪಾಷ, ವೈರ್ ಶಿವಕುಮಾರ್ ಇತರರು ಬಾಗವಹಿಸಿದ್ದರು.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

2 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

4 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

5 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

18 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

22 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago