ಕೋಲಾರ: ಆರ್ ಟಿ ಒ ಕಚೇರಿಯಲ್ಲಿ ಸಾರ್ವಜನಿಕರ ದೂರಿನ ಮೇರೆಗೆ ಶಾಸಕ ಕೊತ್ತೂರು ಜಿ ಮಂಜುನಾಥ್ ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿ, ಶಾಸಕ ಕೊತ್ತೂರು ಮಂಜುನಾಥ್ ಆರ್ ಟಿ ಓ ಕಚೇರಿಯಲ್ಲಿ ಬ್ರೋಕರ್ ಗಳನ್ನು ದೂರವಿಟ್ಟು ಸಾರ್ವಜನಿಕರಿಗೆ ನೇರವಾಗಿ ಸ್ಪಂದಿಸಬೇಕು ಡ್ರೈವಿಂಗ್ ಲೈಸೆನ್ಸ್ ಹಾಗೂ ಸ್ಮಾರ್ಟ್ ಕಾರ್ಡ್ ವಿತರಣೆಯಲ್ಲಿ ವಿಳಂಬದಿಂದ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಮಾಹಿತಿ ಪಡೆದು ಈ ಬಗ್ಗೆ ಕೂಡಲೇ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಾದ್ಯಂತ ಖಾಸಗಿ ಬಸ್ ಗಳು ನಿಗದಿತ ಮಾರ್ಗದಲ್ಲಿ ಅನುಮತಿ ಹೊಂದಿದ್ದರೂ ನಿಯಮಬಾಹಿರವಾಗಿ ಸಂಚರಿಸುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಅನ್ಯ ಮಾರ್ಗದ ಪರ್ಮಿಟ್ ಹೊಂದಿರುವ ಬಸ್ಸುಗಳ ಪ್ರವೇಶವಾಗಿದ್ದು ಅಂತಹ ಬಸ್ಸುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು ಕಚೇರಿಯಲ್ಲಿ ಖಾಲಿ ಹುದ್ದೆಗಳ ಬಗ್ಗೆ ಮಾಹಿತಿ ಪಡೆದ ಶಾಸಕರು, ತಕ್ಷಣ ಖಾಲಿ ಹುದ್ದೆ ಭರ್ತಿಗೆ ಸರ್ಕಾರಕ್ಕೆ ಮನವಿ ಮಾಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಸಂಜಯ್ ರೆಡ್ಡಿ , ಮುಖಂಡರಾದ ಉರಟಾಗ್ರಹಾರ ಚೌಡರೆಡ್ಡಿ, ಮಲೇಷಿಯಾ ರಾಜಕುಮಾರ್ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…