ಕೋಲಾರ: ನಗರದ ಪ್ರಾದೇಶಿಕ ಸಾರಿಗೆ (ಆರ್.ಟಿ.ಒ) ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಲೋಕಾಯುಕ್ತ ತನಿಖೆಗೆ ಒತ್ತಾಯಿಸುವಂತೆ ಕರ್ನಾಟಕ ರಿಪಬ್ಲಿಕನ್ ಸಂಘಟನೆ ವತಿಯಿಂದ ತಮಟೆ ಚಳುವಳಿಗೆ ನಿರ್ಧರಿಸಲಾಗಿತ್ತು. ಮನವಿ ಸ್ವೀಕರಿಸಬೇಕಾದ ಅಧಿಕಾರಿಯೇ ಇಲ್ಲವಾಗಿದ್ದು, ಏ.16 ರಿಂದ ಕಛೇರಿ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತದೆ ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಚಿಕ್ಕನಾರಾಯಣ ತಿಳಿಸಿದರು.
ನಗರದ ಆರ್.ಟಿ.ಒ ಕಚೇರಿ ಮುಂದೆ ಮಾತನಾಡಿದ ಅವರು ಕೋಲಾರ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಭ್ರಷ್ಟಾಚಾರ ಮಿತಿಮೀರಿದೆ ಡೈವಿಂಗ್ ತರಬೇತಿ ಕೇಂದ್ರಗಳ ಮಾಲೀಕರ ಜೊತೆಗೆ ಕೈ ಜೋಡಿಸಿ ಅನರ್ಹ ಅಭ್ಯರ್ಥಿಗಳಿಗೆ ಪರವಾನಗಿಗಳನ್ನು ನೀಡುವ ಮೂಲಕ ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿದ್ದಾರೆ ಇದಕ್ಕೆ ಕಡಿವಾಣವಾಗಬೇಕಾದರೆ ಲೋಕಾಯುಕ್ತರು ತನಿಖೆ ನಡೆಸಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ವಹಿಸಬೇಕು ಪ್ರತಿಭಟನೆಗೆ ಕರೆ ನೀಡಿದರೆ ಮನವಿ ಸ್ವೀಕರಿಸುವ ಅಧಿಕಾರಿಗಳು ನಾಪತ್ತೆಯಾಗುತ್ತಾರೆ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ ಆರ್.ಟಿ.ಒ ಅಧಿಕಾರಿ ವೇಣುಗೋಪಾಲ ರೆಡ್ಡಿ ಕುಮ್ಮಕ್ಕು ನಿಂದಾಗಿ ಖಾಸಗಿ ಬಸ್ ಗಳಿಗೆ ಅಸಲಿ ಮಾರ್ಗಗಳು ಇಲ್ಲದೇ ಇದ್ದರೂ ಬೇಕಾಬಿಟ್ಟಿ ಮಾರ್ಗಗಳಲ್ಲಿ ಚಲುಸುತ್ತಿವೆ ನಕಲಿ ರಸೀದಿಯನ್ನು ಬಳಸಿಕೊಂಡು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಶಾಲಾ ಕಾಲೇಜುಗಳ ವಾಹನಗಳಿಂದ ತಿಂಗಳ ಮಾಮೂಲಿ ನಡೆಯಯತ್ತಿದೆ ಈ ಎಲ್ಲಾ ಭ್ರಷ್ಟಾಚಾರಕ್ಕೆ ಕಡಿವಾಣವಾಗಲು ಲೋಕಾಯುಕ್ತ ಸಂಸ್ಥೆಯಿಂದ ತನಿಖೆ ನಡೆಸಬೇಕು ಇದಕ್ಕಾಗಿ ಏಪ್ರಿಲ್16 ರಂದು ಕಛೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಯಲಿದೆ ಎಂದರು.
ಈ ಸಂದರ್ಭದಲ್ಲಿ ಪಿವಿಸಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಪಿವಿಸಿ ಮಣಿ, ಕರ್ನಾಟಕ ರಿಪಬ್ಲಿಕನ್ ಸಂಘಟನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಕೃಷ್ಣಮೂರ್ತಿ ಜಿಲ್ಲಾ ಅಧ್ಯಕ್ಷ ವಿ.ಅಮರೇಶ್, ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿ ತಿಪ್ಪಯ್ಯ ಇದ್ದರು.
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…