Categories: ಕೋಲಾರ

ಆರ್.ಟಿ.ಒ ಕಚೇರಿಯಲ್ಲಿ ಭ್ರಷ್ಟಾಚಾರ ಲೋಕಾಯುಕ್ತ ತನಿಖೆಗೆ ಒತ್ತಾಯ: ಮನವಿ ಸ್ವೀಕರಿಸುವ ಅಧಿಕಾರಿಯೇ ನಾಪತ್ತೆ: ಏ.16 ರಿಂದ ಕೆ.ಆರ್.ಎಸ್ ಸಂಘಟನೆಯಿಂದ ಧರಣಿ ಸತ್ಯಾಗ್ರಹಕ್ಕೆ ನಿರ್ಧಾರ

ಕೋಲಾರ: ನಗರದ ಪ್ರಾದೇಶಿಕ ಸಾರಿಗೆ (ಆರ್.ಟಿ.ಒ) ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಲೋಕಾಯುಕ್ತ ತನಿಖೆಗೆ ಒತ್ತಾಯಿಸುವಂತೆ ಕರ್ನಾಟಕ ರಿಪಬ್ಲಿಕನ್ ಸಂಘಟನೆ ವತಿಯಿಂದ ತಮಟೆ ಚಳುವಳಿಗೆ ನಿರ್ಧರಿಸಲಾಗಿತ್ತು. ಮನವಿ ಸ್ವೀಕರಿಸಬೇಕಾದ ಅಧಿಕಾರಿಯೇ ಇಲ್ಲವಾಗಿದ್ದು, ಏ.16 ರಿಂದ ಕಛೇರಿ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತದೆ ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಚಿಕ್ಕನಾರಾಯಣ ತಿಳಿಸಿದರು.

ನಗರದ ಆರ್.ಟಿ.ಒ ಕಚೇರಿ ಮುಂದೆ ಮಾತನಾಡಿದ ಅವರು ಕೋಲಾರ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಭ್ರಷ್ಟಾಚಾರ ಮಿತಿಮೀರಿದೆ ಡೈವಿಂಗ್ ತರಬೇತಿ ಕೇಂದ್ರಗಳ ಮಾಲೀಕರ ಜೊತೆಗೆ ಕೈ ಜೋಡಿಸಿ ಅನರ್ಹ ಅಭ್ಯರ್ಥಿಗಳಿಗೆ ಪರವಾನಗಿಗಳನ್ನು ನೀಡುವ ಮೂಲಕ ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿದ್ದಾರೆ ಇದಕ್ಕೆ ಕಡಿವಾಣವಾಗಬೇಕಾದರೆ ಲೋಕಾಯುಕ್ತರು ತನಿಖೆ ನಡೆಸಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ವಹಿಸಬೇಕು ಪ್ರತಿಭಟನೆಗೆ ಕರೆ ನೀಡಿದರೆ ಮನವಿ ಸ್ವೀಕರಿಸುವ ಅಧಿಕಾರಿಗಳು ನಾಪತ್ತೆಯಾಗುತ್ತಾರೆ ಎಂದು ಆರೋಪಿಸಿದರು.

ಜಿಲ್ಲೆಯಲ್ಲಿ ಆರ್.ಟಿ.ಒ ಅಧಿಕಾರಿ ವೇಣುಗೋಪಾಲ ರೆಡ್ಡಿ ಕುಮ್ಮಕ್ಕು ನಿಂದಾಗಿ ಖಾಸಗಿ ಬಸ್ ಗಳಿಗೆ ಅಸಲಿ ಮಾರ್ಗಗಳು ಇಲ್ಲದೇ ಇದ್ದರೂ ಬೇಕಾಬಿಟ್ಟಿ ಮಾರ್ಗಗಳಲ್ಲಿ ಚಲುಸುತ್ತಿವೆ ನಕಲಿ ರಸೀದಿಯನ್ನು ಬಳಸಿಕೊಂಡು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಶಾಲಾ ಕಾಲೇಜುಗಳ ವಾಹನಗಳಿಂದ ತಿಂಗಳ ಮಾಮೂಲಿ ನಡೆಯಯತ್ತಿದೆ ಈ ಎಲ್ಲಾ ಭ್ರಷ್ಟಾಚಾರಕ್ಕೆ ಕಡಿವಾಣವಾಗಲು ಲೋಕಾಯುಕ್ತ ಸಂಸ್ಥೆಯಿಂದ ತನಿಖೆ ನಡೆಸಬೇಕು ಇದಕ್ಕಾಗಿ ಏಪ್ರಿಲ್16 ರಂದು ಕಛೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಯಲಿದೆ ಎಂದರು.

ಈ ಸಂದರ್ಭದಲ್ಲಿ ಪಿವಿಸಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಪಿವಿಸಿ ಮಣಿ, ಕರ್ನಾಟಕ ರಿಪಬ್ಲಿಕನ್ ಸಂಘಟನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಕೃಷ್ಣಮೂರ್ತಿ ಜಿಲ್ಲಾ ಅಧ್ಯಕ್ಷ ವಿ.ಅಮರೇಶ್, ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿ ತಿಪ್ಪಯ್ಯ ಇದ್ದರು.

Ramesh Babu

Journalist

Recent Posts

ತಿರುಮಗೊಂಡಹಳ್ಳಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಘಾಟಿ ಪ್ರಾಧಿಕಾರದ ಸದಸ್ಯರ ಮನವಿ

ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ‌‌ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…

5 hours ago

ಅಧಿಕಾರಿಗಳಲ್ಲಿ ಮಾಹಿತಿ ಕೊರತೆಯಿಂದ ಆರ್‌ಟಿಐ ಅರ್ಜಿಗಳ ವಿಲೇವಾರಿ ವಿಳಂಬ- ಮಾಹಿತಿ ಆಯುಕ್ತ ಹರೀಶ್ ಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…

6 hours ago

ಧರ್ಮಸ್ಥಳ ಕೇಸ್ ವಿಚಾರ: ತನಿಖೆ ಬೇಗ ಮುಗಿಸಿ ನ್ಯಾಯ ಕೊಡಿಸಿ ಭಾರತೀಯ ಪರಂಪರೆಯನ್ನ ಉಳಿಸಬೇಕು- ಸಚಿವ ವಿ.ಸೋಮಣ್ಣ

ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…

7 hours ago

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ…

7 hours ago

ಪ್ರಜ್ವಲ್ ರೇವಣ್ಣ ಕೇಸ್: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಜೀವನ‌ಪರ್ಯಂತ ಸೆರೆಮನೆ ವಾಸ

ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ದೋಷಿ ಎಂದು…

9 hours ago

ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ

ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…

19 hours ago