ಕೋಲಾರ: ನಗರದ ಪ್ರಾದೇಶಿಕ ಸಾರಿಗೆ (ಆರ್.ಟಿ.ಒ) ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಲೋಕಾಯುಕ್ತ ತನಿಖೆಗೆ ಒತ್ತಾಯಿಸುವಂತೆ ಕರ್ನಾಟಕ ರಿಪಬ್ಲಿಕನ್ ಸಂಘಟನೆ ವತಿಯಿಂದ ತಮಟೆ ಚಳುವಳಿಗೆ ನಿರ್ಧರಿಸಲಾಗಿತ್ತು. ಮನವಿ ಸ್ವೀಕರಿಸಬೇಕಾದ ಅಧಿಕಾರಿಯೇ ಇಲ್ಲವಾಗಿದ್ದು, ಏ.16 ರಿಂದ ಕಛೇರಿ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತದೆ ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಚಿಕ್ಕನಾರಾಯಣ ತಿಳಿಸಿದರು.
ನಗರದ ಆರ್.ಟಿ.ಒ ಕಚೇರಿ ಮುಂದೆ ಮಾತನಾಡಿದ ಅವರು ಕೋಲಾರ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಭ್ರಷ್ಟಾಚಾರ ಮಿತಿಮೀರಿದೆ ಡೈವಿಂಗ್ ತರಬೇತಿ ಕೇಂದ್ರಗಳ ಮಾಲೀಕರ ಜೊತೆಗೆ ಕೈ ಜೋಡಿಸಿ ಅನರ್ಹ ಅಭ್ಯರ್ಥಿಗಳಿಗೆ ಪರವಾನಗಿಗಳನ್ನು ನೀಡುವ ಮೂಲಕ ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿದ್ದಾರೆ ಇದಕ್ಕೆ ಕಡಿವಾಣವಾಗಬೇಕಾದರೆ ಲೋಕಾಯುಕ್ತರು ತನಿಖೆ ನಡೆಸಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ವಹಿಸಬೇಕು ಪ್ರತಿಭಟನೆಗೆ ಕರೆ ನೀಡಿದರೆ ಮನವಿ ಸ್ವೀಕರಿಸುವ ಅಧಿಕಾರಿಗಳು ನಾಪತ್ತೆಯಾಗುತ್ತಾರೆ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ ಆರ್.ಟಿ.ಒ ಅಧಿಕಾರಿ ವೇಣುಗೋಪಾಲ ರೆಡ್ಡಿ ಕುಮ್ಮಕ್ಕು ನಿಂದಾಗಿ ಖಾಸಗಿ ಬಸ್ ಗಳಿಗೆ ಅಸಲಿ ಮಾರ್ಗಗಳು ಇಲ್ಲದೇ ಇದ್ದರೂ ಬೇಕಾಬಿಟ್ಟಿ ಮಾರ್ಗಗಳಲ್ಲಿ ಚಲುಸುತ್ತಿವೆ ನಕಲಿ ರಸೀದಿಯನ್ನು ಬಳಸಿಕೊಂಡು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಶಾಲಾ ಕಾಲೇಜುಗಳ ವಾಹನಗಳಿಂದ ತಿಂಗಳ ಮಾಮೂಲಿ ನಡೆಯಯತ್ತಿದೆ ಈ ಎಲ್ಲಾ ಭ್ರಷ್ಟಾಚಾರಕ್ಕೆ ಕಡಿವಾಣವಾಗಲು ಲೋಕಾಯುಕ್ತ ಸಂಸ್ಥೆಯಿಂದ ತನಿಖೆ ನಡೆಸಬೇಕು ಇದಕ್ಕಾಗಿ ಏಪ್ರಿಲ್16 ರಂದು ಕಛೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಯಲಿದೆ ಎಂದರು.
ಈ ಸಂದರ್ಭದಲ್ಲಿ ಪಿವಿಸಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಪಿವಿಸಿ ಮಣಿ, ಕರ್ನಾಟಕ ರಿಪಬ್ಲಿಕನ್ ಸಂಘಟನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಕೃಷ್ಣಮೂರ್ತಿ ಜಿಲ್ಲಾ ಅಧ್ಯಕ್ಷ ವಿ.ಅಮರೇಶ್, ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿ ತಿಪ್ಪಯ್ಯ ಇದ್ದರು.
ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…