ಕೋಲಾರ: ನಗರದ ಪ್ರಾದೇಶಿಕ ಸಾರಿಗೆ (ಆರ್.ಟಿ.ಒ) ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಲೋಕಾಯುಕ್ತ ತನಿಖೆಗೆ ಒತ್ತಾಯಿಸುವಂತೆ ಕರ್ನಾಟಕ ರಿಪಬ್ಲಿಕನ್ ಸಂಘಟನೆ ವತಿಯಿಂದ ತಮಟೆ ಚಳುವಳಿಗೆ ನಿರ್ಧರಿಸಲಾಗಿತ್ತು. ಮನವಿ ಸ್ವೀಕರಿಸಬೇಕಾದ ಅಧಿಕಾರಿಯೇ ಇಲ್ಲವಾಗಿದ್ದು, ಏ.16 ರಿಂದ ಕಛೇರಿ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತದೆ ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಚಿಕ್ಕನಾರಾಯಣ ತಿಳಿಸಿದರು.
ನಗರದ ಆರ್.ಟಿ.ಒ ಕಚೇರಿ ಮುಂದೆ ಮಾತನಾಡಿದ ಅವರು ಕೋಲಾರ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಭ್ರಷ್ಟಾಚಾರ ಮಿತಿಮೀರಿದೆ ಡೈವಿಂಗ್ ತರಬೇತಿ ಕೇಂದ್ರಗಳ ಮಾಲೀಕರ ಜೊತೆಗೆ ಕೈ ಜೋಡಿಸಿ ಅನರ್ಹ ಅಭ್ಯರ್ಥಿಗಳಿಗೆ ಪರವಾನಗಿಗಳನ್ನು ನೀಡುವ ಮೂಲಕ ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿದ್ದಾರೆ ಇದಕ್ಕೆ ಕಡಿವಾಣವಾಗಬೇಕಾದರೆ ಲೋಕಾಯುಕ್ತರು ತನಿಖೆ ನಡೆಸಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ವಹಿಸಬೇಕು ಪ್ರತಿಭಟನೆಗೆ ಕರೆ ನೀಡಿದರೆ ಮನವಿ ಸ್ವೀಕರಿಸುವ ಅಧಿಕಾರಿಗಳು ನಾಪತ್ತೆಯಾಗುತ್ತಾರೆ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ ಆರ್.ಟಿ.ಒ ಅಧಿಕಾರಿ ವೇಣುಗೋಪಾಲ ರೆಡ್ಡಿ ಕುಮ್ಮಕ್ಕು ನಿಂದಾಗಿ ಖಾಸಗಿ ಬಸ್ ಗಳಿಗೆ ಅಸಲಿ ಮಾರ್ಗಗಳು ಇಲ್ಲದೇ ಇದ್ದರೂ ಬೇಕಾಬಿಟ್ಟಿ ಮಾರ್ಗಗಳಲ್ಲಿ ಚಲುಸುತ್ತಿವೆ ನಕಲಿ ರಸೀದಿಯನ್ನು ಬಳಸಿಕೊಂಡು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಶಾಲಾ ಕಾಲೇಜುಗಳ ವಾಹನಗಳಿಂದ ತಿಂಗಳ ಮಾಮೂಲಿ ನಡೆಯಯತ್ತಿದೆ ಈ ಎಲ್ಲಾ ಭ್ರಷ್ಟಾಚಾರಕ್ಕೆ ಕಡಿವಾಣವಾಗಲು ಲೋಕಾಯುಕ್ತ ಸಂಸ್ಥೆಯಿಂದ ತನಿಖೆ ನಡೆಸಬೇಕು ಇದಕ್ಕಾಗಿ ಏಪ್ರಿಲ್16 ರಂದು ಕಛೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಯಲಿದೆ ಎಂದರು.
ಈ ಸಂದರ್ಭದಲ್ಲಿ ಪಿವಿಸಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಪಿವಿಸಿ ಮಣಿ, ಕರ್ನಾಟಕ ರಿಪಬ್ಲಿಕನ್ ಸಂಘಟನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಕೃಷ್ಣಮೂರ್ತಿ ಜಿಲ್ಲಾ ಅಧ್ಯಕ್ಷ ವಿ.ಅಮರೇಶ್, ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿ ತಿಪ್ಪಯ್ಯ ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…