Categories: ಕೋಲಾರ

ಆರ್.ಟಿ.ಒ ಕಚೇರಿಯಲ್ಲಿ ಭ್ರಷ್ಟಾಚಾರ ಲೋಕಾಯುಕ್ತ ತನಿಖೆಗೆ ಒತ್ತಾಯ: ಮನವಿ ಸ್ವೀಕರಿಸುವ ಅಧಿಕಾರಿಯೇ ನಾಪತ್ತೆ: ಏ.16 ರಿಂದ ಕೆ.ಆರ್.ಎಸ್ ಸಂಘಟನೆಯಿಂದ ಧರಣಿ ಸತ್ಯಾಗ್ರಹಕ್ಕೆ ನಿರ್ಧಾರ

ಕೋಲಾರ: ನಗರದ ಪ್ರಾದೇಶಿಕ ಸಾರಿಗೆ (ಆರ್.ಟಿ.ಒ) ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಲೋಕಾಯುಕ್ತ ತನಿಖೆಗೆ ಒತ್ತಾಯಿಸುವಂತೆ ಕರ್ನಾಟಕ ರಿಪಬ್ಲಿಕನ್ ಸಂಘಟನೆ ವತಿಯಿಂದ ತಮಟೆ ಚಳುವಳಿಗೆ ನಿರ್ಧರಿಸಲಾಗಿತ್ತು. ಮನವಿ ಸ್ವೀಕರಿಸಬೇಕಾದ ಅಧಿಕಾರಿಯೇ ಇಲ್ಲವಾಗಿದ್ದು, ಏ.16 ರಿಂದ ಕಛೇರಿ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತದೆ ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಚಿಕ್ಕನಾರಾಯಣ ತಿಳಿಸಿದರು.

ನಗರದ ಆರ್.ಟಿ.ಒ ಕಚೇರಿ ಮುಂದೆ ಮಾತನಾಡಿದ ಅವರು ಕೋಲಾರ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಭ್ರಷ್ಟಾಚಾರ ಮಿತಿಮೀರಿದೆ ಡೈವಿಂಗ್ ತರಬೇತಿ ಕೇಂದ್ರಗಳ ಮಾಲೀಕರ ಜೊತೆಗೆ ಕೈ ಜೋಡಿಸಿ ಅನರ್ಹ ಅಭ್ಯರ್ಥಿಗಳಿಗೆ ಪರವಾನಗಿಗಳನ್ನು ನೀಡುವ ಮೂಲಕ ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿದ್ದಾರೆ ಇದಕ್ಕೆ ಕಡಿವಾಣವಾಗಬೇಕಾದರೆ ಲೋಕಾಯುಕ್ತರು ತನಿಖೆ ನಡೆಸಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ವಹಿಸಬೇಕು ಪ್ರತಿಭಟನೆಗೆ ಕರೆ ನೀಡಿದರೆ ಮನವಿ ಸ್ವೀಕರಿಸುವ ಅಧಿಕಾರಿಗಳು ನಾಪತ್ತೆಯಾಗುತ್ತಾರೆ ಎಂದು ಆರೋಪಿಸಿದರು.

ಜಿಲ್ಲೆಯಲ್ಲಿ ಆರ್.ಟಿ.ಒ ಅಧಿಕಾರಿ ವೇಣುಗೋಪಾಲ ರೆಡ್ಡಿ ಕುಮ್ಮಕ್ಕು ನಿಂದಾಗಿ ಖಾಸಗಿ ಬಸ್ ಗಳಿಗೆ ಅಸಲಿ ಮಾರ್ಗಗಳು ಇಲ್ಲದೇ ಇದ್ದರೂ ಬೇಕಾಬಿಟ್ಟಿ ಮಾರ್ಗಗಳಲ್ಲಿ ಚಲುಸುತ್ತಿವೆ ನಕಲಿ ರಸೀದಿಯನ್ನು ಬಳಸಿಕೊಂಡು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಶಾಲಾ ಕಾಲೇಜುಗಳ ವಾಹನಗಳಿಂದ ತಿಂಗಳ ಮಾಮೂಲಿ ನಡೆಯಯತ್ತಿದೆ ಈ ಎಲ್ಲಾ ಭ್ರಷ್ಟಾಚಾರಕ್ಕೆ ಕಡಿವಾಣವಾಗಲು ಲೋಕಾಯುಕ್ತ ಸಂಸ್ಥೆಯಿಂದ ತನಿಖೆ ನಡೆಸಬೇಕು ಇದಕ್ಕಾಗಿ ಏಪ್ರಿಲ್16 ರಂದು ಕಛೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಯಲಿದೆ ಎಂದರು.

ಈ ಸಂದರ್ಭದಲ್ಲಿ ಪಿವಿಸಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಪಿವಿಸಿ ಮಣಿ, ಕರ್ನಾಟಕ ರಿಪಬ್ಲಿಕನ್ ಸಂಘಟನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಕೃಷ್ಣಮೂರ್ತಿ ಜಿಲ್ಲಾ ಅಧ್ಯಕ್ಷ ವಿ.ಅಮರೇಶ್, ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿ ತಿಪ್ಪಯ್ಯ ಇದ್ದರು.

Ramesh Babu

Journalist

Recent Posts

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

5 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

6 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

17 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

18 hours ago

ಹೊರಗುತ್ತಿಗೆ ನೇಮಕಾತಿಯಲ್ಲೂ ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಕಡ್ಡಾಯ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…

18 hours ago

ಆತ್ರೇಯ ಆಯುರ್ವೇದ ಕಾಲೇಜಿಗೆ ಬೀಗ; 400 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ: ಪರ್ಯಾಯ ವ್ಯವಸ್ಥೆಗೆ ಆಗ್ರಹಿಸಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

  ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…

18 hours ago