Categories: ಕೋಲಾರ

ಆರ್.ಟಿ.ಒ ಕಚೇರಿಯಲ್ಲಿ ಭ್ರಷ್ಟಾಚಾರ ಆರೋಪ: ಲೋಕಾಯುಕ್ತ ತನಿಖೆಗೆ ಒತ್ತಾಯಿಸಿ ಮಾ.25 ರಂದು ಕೆ.ಆರ್.ಎಸ್ ಸಂಘಟನೆಯಿಂದ ತಮಟೆ ಚಳುವಳಿ

ಕೋಲಾರ: ನಗರದಲ್ಲಿರುವ ಪ್ರಾದೇಶಿಕ ಸಾರಿಗೆ (ಆರ್.ಟಿ.ಒ) ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಲೋಕಾಯುಕ್ತ ತನಿಖೆಗೆ ಒತ್ತಾಯಿಸಿ ಕರ್ನಾಟಕ ರಿಪಬ್ಲಿಕನ್ ಸಂಘಟನೆ ವತಿಯಿಂದ ಮಾ.25 ರಂದು ಮಂಗಳವಾರ ಕಚೇರಿ ಮುಂದೆ ತಮಟೆ ಚಳುವಳಿ ನಡೆಯಲಿದೆ ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಚಿಕ್ಕನಾರಾಯಣ ತಿಳಿಸಿದರು.

ನಗರದ ಆರ್.ಟಿ.ಒ ಕಚೇರಿ ಮುಂದೆ ಮಾತನಾಡಿದ ಅವರು ಕೋಲಾರ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಡ್ರೈವಿಂಗ್ ತರಬೇತಿ ಕೇಂದ್ರಗಳ ಮಾಲೀಕರ ಜೊತೆಗೆ ಕೈ ಜೋಡಿಸಿ ಅನರ್ಹ ಅಭ್ಯರ್ಥಿಗಳಿಗೆ ಪರವಾನಗಿಗಳನ್ನು ನೀಡುವ ಮೂಲಕ ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿದ್ದಾರೆ. ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಜೊತೆಗೆ ಲೋಕಾಯುಕ್ತ ತನಿಖೆ ನಡೆಸಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುತ್ತದೆ ಎಂದರು.

ಕೋಲಾರ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳಿಗೆ ಅಸಲಿ ಮಾರ್ಗಗಳು ಇಲ್ಲದೇ ಇದ್ದರೂ ಬೇಕಾಬಿಟ್ಟಿ ಮಾರ್ಗಗಳಲ್ಲಿ ಚಲುಸುತ್ತಿವೆ ಜೊತೆಗೆ ಪರವಾನಿಗೆಗೆ ಇಂತಿಷ್ಟು ಹಣ ನಿಗದಿ ಮಾಡಲಾಗಿದೆ ಕೇವಲ ಕಡೆಗಳಲ್ಲಿ ನಕಲಿ ರಸೀದಿಯನ್ನು ಬಳಸಿಕೊಂಡು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಶಾಲಾ ಕಾಲೇಜುಗಳ ವಾಹನಗಳಿಂದ ತಿಂಗಳ ಮಾಮೂಲಿ ನಡೆಯಯತ್ತಿದೆ ಈ ಎಲ್ಲಾ ಭ್ರಷ್ಟಾಚಾರಕ್ಕೆ ಕಡಿವಾಣವಾಗಲು ಲೋಕಾಯುಕ್ತ ಸಂಸ್ಥೆಯಿಂದ ತನಿಖೆ ನಡೆಸಲು ಒತ್ತಾಯಿಸಿ ಮಾ 25 ರಂದು ಕಚೇರಿ ಮುಂದೆ ತಮಟೆ ಚಳುವಳಿ ನಡೆಯಲಿದೆ ಎಂದರು.

ಈ ಸಂದರ್ಭದಲ್ಲಿ ಪಿವಿಸಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಪಿವಿಸಿ ಮಣಿ, ಕರ್ನಾಟಕ ರಿಪಬ್ಲಿಕನ್ ಸಂಘಟನೆ ರಾಜ್ಯ ಸಂಘಟನಾ ಕಾರ್ಯದರ್ಶಿ ವಿ ಮಂಜುನಾಥ್, ಜಿಲ್ಲಾ ಅಧ್ಯಕ್ಷ ವಿ.ಅಮರೇಶ್, ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿ ತಿಪ್ಪಯ್ಯ ಇದ್ದರು.

Ramesh Babu

Journalist

Recent Posts

ಧರ್ಮಸ್ಥಳ ಕೇಸ್ ವಿಚಾರ: ತನಿಖೆ ಬೇಗ ಮುಗಿಸಿ ನ್ಯಾಯ ಕೊಡಿಸಿ ಭಾರತೀಯ ಪರಂಪರೆಯನ್ನ ಉಳಿಸಬೇಕು- ಸಚಿವ ವಿ.ಸೋಮಣ್ಣ

ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…

24 minutes ago

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ…

41 minutes ago

ಪ್ರಜ್ವಲ್ ರೇವಣ್ಣ ಕೇಸ್: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಜೀವನ‌ಪರ್ಯಂತ ಸೆರೆಮನೆ ವಾಸ

ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ದೋಷಿ ಎಂದು…

3 hours ago

ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ

ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…

12 hours ago

ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆ ಬಳಿಕ ರಕ್ಷಕ್ ಬುಲೆಟ್ ಫಸ್ಟ್ ರಿಯಾಕ್ಟ್

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…

22 hours ago

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆಗೆ ಹಾಜರಾದ ರಕ್ಷಕ್ ಬುಲೆಟ್: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…

23 hours ago