ಕೋಲಾರ: ನಗರದಲ್ಲಿರುವ ಪ್ರಾದೇಶಿಕ ಸಾರಿಗೆ (ಆರ್.ಟಿ.ಒ) ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಲೋಕಾಯುಕ್ತ ತನಿಖೆಗೆ ಒತ್ತಾಯಿಸಿ ಕರ್ನಾಟಕ ರಿಪಬ್ಲಿಕನ್ ಸಂಘಟನೆ ವತಿಯಿಂದ ಮಾ.25 ರಂದು ಮಂಗಳವಾರ ಕಚೇರಿ ಮುಂದೆ ತಮಟೆ ಚಳುವಳಿ ನಡೆಯಲಿದೆ ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಚಿಕ್ಕನಾರಾಯಣ ತಿಳಿಸಿದರು.
ನಗರದ ಆರ್.ಟಿ.ಒ ಕಚೇರಿ ಮುಂದೆ ಮಾತನಾಡಿದ ಅವರು ಕೋಲಾರ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಡ್ರೈವಿಂಗ್ ತರಬೇತಿ ಕೇಂದ್ರಗಳ ಮಾಲೀಕರ ಜೊತೆಗೆ ಕೈ ಜೋಡಿಸಿ ಅನರ್ಹ ಅಭ್ಯರ್ಥಿಗಳಿಗೆ ಪರವಾನಗಿಗಳನ್ನು ನೀಡುವ ಮೂಲಕ ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿದ್ದಾರೆ. ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಜೊತೆಗೆ ಲೋಕಾಯುಕ್ತ ತನಿಖೆ ನಡೆಸಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುತ್ತದೆ ಎಂದರು.
ಕೋಲಾರ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳಿಗೆ ಅಸಲಿ ಮಾರ್ಗಗಳು ಇಲ್ಲದೇ ಇದ್ದರೂ ಬೇಕಾಬಿಟ್ಟಿ ಮಾರ್ಗಗಳಲ್ಲಿ ಚಲುಸುತ್ತಿವೆ ಜೊತೆಗೆ ಪರವಾನಿಗೆಗೆ ಇಂತಿಷ್ಟು ಹಣ ನಿಗದಿ ಮಾಡಲಾಗಿದೆ ಕೇವಲ ಕಡೆಗಳಲ್ಲಿ ನಕಲಿ ರಸೀದಿಯನ್ನು ಬಳಸಿಕೊಂಡು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಶಾಲಾ ಕಾಲೇಜುಗಳ ವಾಹನಗಳಿಂದ ತಿಂಗಳ ಮಾಮೂಲಿ ನಡೆಯಯತ್ತಿದೆ ಈ ಎಲ್ಲಾ ಭ್ರಷ್ಟಾಚಾರಕ್ಕೆ ಕಡಿವಾಣವಾಗಲು ಲೋಕಾಯುಕ್ತ ಸಂಸ್ಥೆಯಿಂದ ತನಿಖೆ ನಡೆಸಲು ಒತ್ತಾಯಿಸಿ ಮಾ 25 ರಂದು ಕಚೇರಿ ಮುಂದೆ ತಮಟೆ ಚಳುವಳಿ ನಡೆಯಲಿದೆ ಎಂದರು.
ಈ ಸಂದರ್ಭದಲ್ಲಿ ಪಿವಿಸಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಪಿವಿಸಿ ಮಣಿ, ಕರ್ನಾಟಕ ರಿಪಬ್ಲಿಕನ್ ಸಂಘಟನೆ ರಾಜ್ಯ ಸಂಘಟನಾ ಕಾರ್ಯದರ್ಶಿ ವಿ ಮಂಜುನಾಥ್, ಜಿಲ್ಲಾ ಅಧ್ಯಕ್ಷ ವಿ.ಅಮರೇಶ್, ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿ ತಿಪ್ಪಯ್ಯ ಇದ್ದರು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…