Categories: ಕೋಲಾರ

ಆರ್.ಟಿ.ಒ ಕಚೇರಿಯಲ್ಲಿ ಭ್ರಷ್ಟಾಚಾರ ಆರೋಪ: ಲೋಕಾಯುಕ್ತ ತನಿಖೆಗೆ ಒತ್ತಾಯಿಸಿ ಮಾ.25 ರಂದು ಕೆ.ಆರ್.ಎಸ್ ಸಂಘಟನೆಯಿಂದ ತಮಟೆ ಚಳುವಳಿ

ಕೋಲಾರ: ನಗರದಲ್ಲಿರುವ ಪ್ರಾದೇಶಿಕ ಸಾರಿಗೆ (ಆರ್.ಟಿ.ಒ) ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಲೋಕಾಯುಕ್ತ ತನಿಖೆಗೆ ಒತ್ತಾಯಿಸಿ ಕರ್ನಾಟಕ ರಿಪಬ್ಲಿಕನ್ ಸಂಘಟನೆ ವತಿಯಿಂದ ಮಾ.25 ರಂದು ಮಂಗಳವಾರ ಕಚೇರಿ ಮುಂದೆ ತಮಟೆ ಚಳುವಳಿ ನಡೆಯಲಿದೆ ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಚಿಕ್ಕನಾರಾಯಣ ತಿಳಿಸಿದರು.

ನಗರದ ಆರ್.ಟಿ.ಒ ಕಚೇರಿ ಮುಂದೆ ಮಾತನಾಡಿದ ಅವರು ಕೋಲಾರ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಡ್ರೈವಿಂಗ್ ತರಬೇತಿ ಕೇಂದ್ರಗಳ ಮಾಲೀಕರ ಜೊತೆಗೆ ಕೈ ಜೋಡಿಸಿ ಅನರ್ಹ ಅಭ್ಯರ್ಥಿಗಳಿಗೆ ಪರವಾನಗಿಗಳನ್ನು ನೀಡುವ ಮೂಲಕ ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿದ್ದಾರೆ. ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಜೊತೆಗೆ ಲೋಕಾಯುಕ್ತ ತನಿಖೆ ನಡೆಸಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುತ್ತದೆ ಎಂದರು.

ಕೋಲಾರ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳಿಗೆ ಅಸಲಿ ಮಾರ್ಗಗಳು ಇಲ್ಲದೇ ಇದ್ದರೂ ಬೇಕಾಬಿಟ್ಟಿ ಮಾರ್ಗಗಳಲ್ಲಿ ಚಲುಸುತ್ತಿವೆ ಜೊತೆಗೆ ಪರವಾನಿಗೆಗೆ ಇಂತಿಷ್ಟು ಹಣ ನಿಗದಿ ಮಾಡಲಾಗಿದೆ ಕೇವಲ ಕಡೆಗಳಲ್ಲಿ ನಕಲಿ ರಸೀದಿಯನ್ನು ಬಳಸಿಕೊಂಡು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಶಾಲಾ ಕಾಲೇಜುಗಳ ವಾಹನಗಳಿಂದ ತಿಂಗಳ ಮಾಮೂಲಿ ನಡೆಯಯತ್ತಿದೆ ಈ ಎಲ್ಲಾ ಭ್ರಷ್ಟಾಚಾರಕ್ಕೆ ಕಡಿವಾಣವಾಗಲು ಲೋಕಾಯುಕ್ತ ಸಂಸ್ಥೆಯಿಂದ ತನಿಖೆ ನಡೆಸಲು ಒತ್ತಾಯಿಸಿ ಮಾ 25 ರಂದು ಕಚೇರಿ ಮುಂದೆ ತಮಟೆ ಚಳುವಳಿ ನಡೆಯಲಿದೆ ಎಂದರು.

ಈ ಸಂದರ್ಭದಲ್ಲಿ ಪಿವಿಸಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಪಿವಿಸಿ ಮಣಿ, ಕರ್ನಾಟಕ ರಿಪಬ್ಲಿಕನ್ ಸಂಘಟನೆ ರಾಜ್ಯ ಸಂಘಟನಾ ಕಾರ್ಯದರ್ಶಿ ವಿ ಮಂಜುನಾಥ್, ಜಿಲ್ಲಾ ಅಧ್ಯಕ್ಷ ವಿ.ಅಮರೇಶ್, ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿ ತಿಪ್ಪಯ್ಯ ಇದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಆಚರಣೆ: ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಕಾಡನೂರು ಗ್ರಾ.ಪಂ ಗೆ ಬಹುಮಾನ ವಿತರಣೆ

ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…

42 minutes ago

ಜೆಡಿಎಸ್ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…

3 hours ago

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

8 hours ago

Effektives Schreiben einer Facharbeit_ Ein Leitfaden

Das Schreiben einer Facharbeit stellt für viele Schüler und Studenten eine große Herausforderung dar. Der…

8 hours ago

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

13 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

1 day ago