ಆರ್. ನಾರಾಯಣಪ್ಪ ಸ್ಮರಣಾರ್ಥ ತೂಬಗೆರೆಯಲ್ಲಿ ಆರೋಗ್ಯ ಶಿಬಿರ–ಕಬ್ಬಡಿ ಪಂದ್ಯಾವಳಿ: ಶಾಸಕ ಧೀರಜ್ ಮುನಿರಾಜು ಚಾಲನೆ

 

ದೊಡ್ಡಬಳ್ಳಾಪುರ: ಸಮಾಜಸೇವೆಗೆ ಹೆಸರಾಗಿದ್ದ ಕೀರ್ತಿ ಶೇಷರಾದ ಆರ್. ನಾರಾಯಣಪ್ಪ ನೆನಪಿಗಾಗಿ, ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ಶನಿವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿ ಅರ್ಥಪೂರ್ಣವಾಗಿ ನಡೆಯಿತು.

ಇಲ್ಲಿನ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿದ್ದ ಆರೋಗ್ಯ ಶಿಬಿರವನ್ನು ಶಾಸಕ ಧೀರಜ್ ಮುನಿರಾಜು ಉದ್ಘಾಟಿಸಿ ಮಾತನಾಡಿ, “ತಮ್ಮ ಜೀವನಪೂರ್ತಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಆರ್. ನಾರಾಯಣಪ್ಪ ಅವರು ತೂಬಗೆರೆ ಭಾಗದಲ್ಲಿ ‘ಅನ್ನದಾನಿ ನಾರಾಯಣಪ್ಪ’ ಎಂದೇ ಖ್ಯಾತಿ ಪಡೆದಿದ್ದರು. ಅವರ ಅಗಲಿಕೆ ಸಮಾಜಕ್ಕೆ ಅಪಾರ ನಷ್ಟ. ಆದರೆ ಅವರ ಸೇವಾ ಪರಂಪರೆ ಇಂತಹ ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ಮುಂದುವರಿಯುತ್ತಿರುವುದು ಶ್ಲಾಘನೀಯ,” ಎಂದರು.

ಇದೇ ಸಂದರ್ಭದಲ್ಲಿ ವೈ.ಕೆ.ಸಿ ಕಬ್ಬಡಿ ಕ್ಲಬ್ ವತಿಯಿಂದ ಆಯೋಜಿಸಿದ್ದ ‘ಶ್ರೀ ಸಬ್ಸಿಡಿ ಆರ್. ನಾರಾಯಣಪ್ಪ ಕಪ್’ ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.

 

ದೇವನಹಳ್ಳಿ ಬಿಜೆಪಿ ಮಂಡಲ ಅಧ್ಯಕ್ಷ ಅಂಬರೀಶ್ ಗೌಡ ಮಾತನಾಡಿ, “ಯುವಕರು ದುಶ್ಚಟಗಳಿಂದ ದೂರವಿರಲು ಕ್ರೀಡಾಕೂಟಗಳು ಅಗತ್ಯ. ಇಲ್ಲಿ ಗೆಲುವು–ಸೋಲು ಮುಖ್ಯವಲ್ಲ, ಭಾಗವಹಿಸುವ ಮನೋಭಾವವೇ ಮಹತ್ವದ್ದು. ಕ್ರೀಡೆಯಲ್ಲಿ ಶಿಸ್ತು, ಪರಿಶ್ರಮ ಮತ್ತು ತಪಸ್ಸು ಅಡಗಿದೆ,” ಎಂದು ಹೇಳಿದರು.

ಆಕಾಶ್ ಆಸ್ಪತ್ರೆ, ಲಯನ್ಸ್ ಕ್ಲಬ್ ದೊಡ್ಡಬಳ್ಳಾಪುರ ಹಾಗೂ ಟಿ.ಎನ್. ಕೃಷ್ಣಪ್ಪ ಅವರ ಕುಟುಂಬಸ್ಥರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ಶಿಬಿರದಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ ನೂರಾರು ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಪ್ರದೇಶದ ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ಮುಖಂಡ ಹನುಮಂತರಾಯಪ್ಪ, ಕೆಪಿಸಿಸಿ ಸದಸ್ಯ ಮುನಿರಾಜು, ಘಾಟಿ ಪ್ರಾಧಿಕಾರ ಸದಸ್ಯ ರಂಗಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ದಪ್ಪ, ವಕೀಲ ಪ್ರತಾಪ್, ಓಬದೇನಹಳ್ಳಿ ಮುನಿಯಪ್ಪ, ನಿವೃತ್ತ ಯೋಧ ಅನಂತರಾಜ ಗೋಪಾಲ್, ಮುಖಂಡ ಬಿ.ಕೆ. ನಾರಾಯಣಸ್ವಾಮಿ, ಬಿಜೆಪಿ ಹೋಬಳಿ ಅಧ್ಯಕ್ಷ ಕೃಷ್ಣಪ್ಪ, ರೈತ ಮುಖಂಡ ವಾಸು, ಮುಖಂಡರಾದ ಕನಕದಾಸ, ಧನುಂಜಯ, ಮುನಿಕೃಷ್ಣಪ್ಪ, ಯುವ ಮುಖಂಡ ಉದಯ ಆರಾಧ್ಯ, ಮಧು, ನಿಖಿಲ್, ವಿನಯ್, ಲಯನ್ಸ್ ಕ್ಲಬ್ ಸದಸ್ಯರು, ಆಕಾಶ್ ಆಸ್ಪತ್ರೆಯ ಪ್ರತಿನಿಧಿಗಳು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

12 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

19 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

20 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago