ಆರ್ ಸಿ ಬಿಗೆ ನೂತನ ಸಾರಥಿ, ಕೊಹ್ಲಿ ಶಿಷ್ಯನಿಗೆ ಪಟ್ಟ!

ಕೆಲವೇ ದಿನಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಶುರುವಾಗಿದ್ದು ಕ್ರಿಕೆಟ್ ಪ್ರೇಮಿಗಳು ರಸದೌತಣ ಸವಿಯಲು ಸಿದ್ದರಾಗಿದ್ದಾರೆ, ಜೊತೆ ಜೊತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಸೇನೆಗೆ ನೂತನ ಸಾರಥಿಯನ್ನು ನೇಮಿಸಿದೆ.

ಕಳೆದ ಬಾರಿ ಸೆಮಿಸ್ ಗೆ ತಲುಪಿದ್ದ ಆರ್ ಸಿ ಬಿ ಮೆಗಾ ಹಾರಾಜಿನ ನಂತರ ಹೊಸ ತಂಡವಾಗಿ ರೂಪುಗೊಂಡಿದ್ದು, ಹಲವು ಹೊಸ ಆಟಗಾರರಿಗೆ ತಂಡ ಮಣೆ ಹಾಕಿದ್ದೂ, ಕಪ್ ಗೆಲ್ಲುವ ನಿರೀಕ್ಷೆಯಲ್ಲಿದೆ. ಕಳೆದ ಬಾರಿ ತಂಡದ ನಾಯಕರಾಗಿದ್ದ ಫಾಫ್ ಡೂಪ್ಲೆಸಿಸ್, ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಷವೆಲ್ ನಂತಹ ಹಿರಿಯ ಆಟಗಾರರನ್ನು ಕೈಬಿಟ್ಟಿದ್ದು ಸ್ಫೋಟಕ ದಾಂಡಿಗರಾದ ಫಿಲ್ ಸಾಲ್ಟ್, ಟಿಮ್ ಡೇವಿಡ್, ಜಾಕೋಬ್ ಬೇತಲ್ ರಂತಹ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಹೊಸ ಹಾಗೂ ಹುರುಪಿನ ತಂಡವನ್ನು ಕಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನಾಯಕ ಆಯ್ಕೆ ಕಂಗಟ್ಟಾಗಿತ್ತು, ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿ ಮುನ್ನಡೆಸಿದ್ದ ಕೋಟ್ಯಂತರ ಅಭಿಮಾನಿಗಳ ಬಳಗ ಹೊಂದಿರುವ ಆರ್ ಸಿ ಬಿಗೆ ನೂತನ ನಾಯಕರಾಗಿ ಸ್ಪೋಟಕ ಆಟಗಾರ ರಜತ್ ಪಾಟಿದರ್ ಆಯ್ಕೆಯಾಗಿದ್ದಾರೆ.

ಹಲವಾರು ನಿರೀಕ್ಷೆಯೊಂದಿಗೆ ತಂಡದ ಆಡಳಿತ ಮಂಡಳಿ ಹಾಗೂ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಅವರು ಸೇರಿ ರಜತ್ ಪಾಟಿದರ್ ಅವರನ್ನು ಆಯ್ಕೆ ಮಾಡಿದ್ದು ತಂಡವನ್ನು ಸಮತೋಲನ ಹಾಗೂ ಸಮರ್ಥವಾಗಿ ಮುನ್ನಡೆಸಿ ತನ್ನ ಸಾಮರ್ಥ್ಯವನ್ನು ಅನಾವರಣ ಗೊಳಿಸಬೇಕಾಗಿದೆ.

Ramesh Babu

Journalist

Recent Posts

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

9 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

13 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

21 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

23 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

1 day ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

1 day ago