ಆರ್ ಸಿ ಬಿಗೆ ನೂತನ ಸಾರಥಿ, ಕೊಹ್ಲಿ ಶಿಷ್ಯನಿಗೆ ಪಟ್ಟ!

ಕೆಲವೇ ದಿನಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಶುರುವಾಗಿದ್ದು ಕ್ರಿಕೆಟ್ ಪ್ರೇಮಿಗಳು ರಸದೌತಣ ಸವಿಯಲು ಸಿದ್ದರಾಗಿದ್ದಾರೆ, ಜೊತೆ ಜೊತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಸೇನೆಗೆ ನೂತನ ಸಾರಥಿಯನ್ನು ನೇಮಿಸಿದೆ.

ಕಳೆದ ಬಾರಿ ಸೆಮಿಸ್ ಗೆ ತಲುಪಿದ್ದ ಆರ್ ಸಿ ಬಿ ಮೆಗಾ ಹಾರಾಜಿನ ನಂತರ ಹೊಸ ತಂಡವಾಗಿ ರೂಪುಗೊಂಡಿದ್ದು, ಹಲವು ಹೊಸ ಆಟಗಾರರಿಗೆ ತಂಡ ಮಣೆ ಹಾಕಿದ್ದೂ, ಕಪ್ ಗೆಲ್ಲುವ ನಿರೀಕ್ಷೆಯಲ್ಲಿದೆ. ಕಳೆದ ಬಾರಿ ತಂಡದ ನಾಯಕರಾಗಿದ್ದ ಫಾಫ್ ಡೂಪ್ಲೆಸಿಸ್, ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಷವೆಲ್ ನಂತಹ ಹಿರಿಯ ಆಟಗಾರರನ್ನು ಕೈಬಿಟ್ಟಿದ್ದು ಸ್ಫೋಟಕ ದಾಂಡಿಗರಾದ ಫಿಲ್ ಸಾಲ್ಟ್, ಟಿಮ್ ಡೇವಿಡ್, ಜಾಕೋಬ್ ಬೇತಲ್ ರಂತಹ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಹೊಸ ಹಾಗೂ ಹುರುಪಿನ ತಂಡವನ್ನು ಕಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನಾಯಕ ಆಯ್ಕೆ ಕಂಗಟ್ಟಾಗಿತ್ತು, ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿ ಮುನ್ನಡೆಸಿದ್ದ ಕೋಟ್ಯಂತರ ಅಭಿಮಾನಿಗಳ ಬಳಗ ಹೊಂದಿರುವ ಆರ್ ಸಿ ಬಿಗೆ ನೂತನ ನಾಯಕರಾಗಿ ಸ್ಪೋಟಕ ಆಟಗಾರ ರಜತ್ ಪಾಟಿದರ್ ಆಯ್ಕೆಯಾಗಿದ್ದಾರೆ.

ಹಲವಾರು ನಿರೀಕ್ಷೆಯೊಂದಿಗೆ ತಂಡದ ಆಡಳಿತ ಮಂಡಳಿ ಹಾಗೂ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಅವರು ಸೇರಿ ರಜತ್ ಪಾಟಿದರ್ ಅವರನ್ನು ಆಯ್ಕೆ ಮಾಡಿದ್ದು ತಂಡವನ್ನು ಸಮತೋಲನ ಹಾಗೂ ಸಮರ್ಥವಾಗಿ ಮುನ್ನಡೆಸಿ ತನ್ನ ಸಾಮರ್ಥ್ಯವನ್ನು ಅನಾವರಣ ಗೊಳಿಸಬೇಕಾಗಿದೆ.

Ramesh Babu

Journalist

Share
Published by
Ramesh Babu

Recent Posts

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

44 minutes ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

4 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

4 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

15 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

16 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

16 hours ago