ಕೆಲವೇ ದಿನಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಶುರುವಾಗಿದ್ದು ಕ್ರಿಕೆಟ್ ಪ್ರೇಮಿಗಳು ರಸದೌತಣ ಸವಿಯಲು ಸಿದ್ದರಾಗಿದ್ದಾರೆ, ಜೊತೆ ಜೊತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಸೇನೆಗೆ ನೂತನ ಸಾರಥಿಯನ್ನು ನೇಮಿಸಿದೆ.
ಕಳೆದ ಬಾರಿ ಸೆಮಿಸ್ ಗೆ ತಲುಪಿದ್ದ ಆರ್ ಸಿ ಬಿ ಮೆಗಾ ಹಾರಾಜಿನ ನಂತರ ಹೊಸ ತಂಡವಾಗಿ ರೂಪುಗೊಂಡಿದ್ದು, ಹಲವು ಹೊಸ ಆಟಗಾರರಿಗೆ ತಂಡ ಮಣೆ ಹಾಕಿದ್ದೂ, ಕಪ್ ಗೆಲ್ಲುವ ನಿರೀಕ್ಷೆಯಲ್ಲಿದೆ. ಕಳೆದ ಬಾರಿ ತಂಡದ ನಾಯಕರಾಗಿದ್ದ ಫಾಫ್ ಡೂಪ್ಲೆಸಿಸ್, ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಷವೆಲ್ ನಂತಹ ಹಿರಿಯ ಆಟಗಾರರನ್ನು ಕೈಬಿಟ್ಟಿದ್ದು ಸ್ಫೋಟಕ ದಾಂಡಿಗರಾದ ಫಿಲ್ ಸಾಲ್ಟ್, ಟಿಮ್ ಡೇವಿಡ್, ಜಾಕೋಬ್ ಬೇತಲ್ ರಂತಹ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಹೊಸ ಹಾಗೂ ಹುರುಪಿನ ತಂಡವನ್ನು ಕಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನಾಯಕ ಆಯ್ಕೆ ಕಂಗಟ್ಟಾಗಿತ್ತು, ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿ ಮುನ್ನಡೆಸಿದ್ದ ಕೋಟ್ಯಂತರ ಅಭಿಮಾನಿಗಳ ಬಳಗ ಹೊಂದಿರುವ ಆರ್ ಸಿ ಬಿಗೆ ನೂತನ ನಾಯಕರಾಗಿ ಸ್ಪೋಟಕ ಆಟಗಾರ ರಜತ್ ಪಾಟಿದರ್ ಆಯ್ಕೆಯಾಗಿದ್ದಾರೆ.
ಹಲವಾರು ನಿರೀಕ್ಷೆಯೊಂದಿಗೆ ತಂಡದ ಆಡಳಿತ ಮಂಡಳಿ ಹಾಗೂ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಅವರು ಸೇರಿ ರಜತ್ ಪಾಟಿದರ್ ಅವರನ್ನು ಆಯ್ಕೆ ಮಾಡಿದ್ದು ತಂಡವನ್ನು ಸಮತೋಲನ ಹಾಗೂ ಸಮರ್ಥವಾಗಿ ಮುನ್ನಡೆಸಿ ತನ್ನ ಸಾಮರ್ಥ್ಯವನ್ನು ಅನಾವರಣ ಗೊಳಿಸಬೇಕಾಗಿದೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…