ಕೆಲವೇ ದಿನಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಶುರುವಾಗಿದ್ದು ಕ್ರಿಕೆಟ್ ಪ್ರೇಮಿಗಳು ರಸದೌತಣ ಸವಿಯಲು ಸಿದ್ದರಾಗಿದ್ದಾರೆ, ಜೊತೆ ಜೊತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಸೇನೆಗೆ ನೂತನ ಸಾರಥಿಯನ್ನು ನೇಮಿಸಿದೆ.
ಕಳೆದ ಬಾರಿ ಸೆಮಿಸ್ ಗೆ ತಲುಪಿದ್ದ ಆರ್ ಸಿ ಬಿ ಮೆಗಾ ಹಾರಾಜಿನ ನಂತರ ಹೊಸ ತಂಡವಾಗಿ ರೂಪುಗೊಂಡಿದ್ದು, ಹಲವು ಹೊಸ ಆಟಗಾರರಿಗೆ ತಂಡ ಮಣೆ ಹಾಕಿದ್ದೂ, ಕಪ್ ಗೆಲ್ಲುವ ನಿರೀಕ್ಷೆಯಲ್ಲಿದೆ. ಕಳೆದ ಬಾರಿ ತಂಡದ ನಾಯಕರಾಗಿದ್ದ ಫಾಫ್ ಡೂಪ್ಲೆಸಿಸ್, ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಷವೆಲ್ ನಂತಹ ಹಿರಿಯ ಆಟಗಾರರನ್ನು ಕೈಬಿಟ್ಟಿದ್ದು ಸ್ಫೋಟಕ ದಾಂಡಿಗರಾದ ಫಿಲ್ ಸಾಲ್ಟ್, ಟಿಮ್ ಡೇವಿಡ್, ಜಾಕೋಬ್ ಬೇತಲ್ ರಂತಹ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಹೊಸ ಹಾಗೂ ಹುರುಪಿನ ತಂಡವನ್ನು ಕಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನಾಯಕ ಆಯ್ಕೆ ಕಂಗಟ್ಟಾಗಿತ್ತು, ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿ ಮುನ್ನಡೆಸಿದ್ದ ಕೋಟ್ಯಂತರ ಅಭಿಮಾನಿಗಳ ಬಳಗ ಹೊಂದಿರುವ ಆರ್ ಸಿ ಬಿಗೆ ನೂತನ ನಾಯಕರಾಗಿ ಸ್ಪೋಟಕ ಆಟಗಾರ ರಜತ್ ಪಾಟಿದರ್ ಆಯ್ಕೆಯಾಗಿದ್ದಾರೆ.
ಹಲವಾರು ನಿರೀಕ್ಷೆಯೊಂದಿಗೆ ತಂಡದ ಆಡಳಿತ ಮಂಡಳಿ ಹಾಗೂ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಅವರು ಸೇರಿ ರಜತ್ ಪಾಟಿದರ್ ಅವರನ್ನು ಆಯ್ಕೆ ಮಾಡಿದ್ದು ತಂಡವನ್ನು ಸಮತೋಲನ ಹಾಗೂ ಸಮರ್ಥವಾಗಿ ಮುನ್ನಡೆಸಿ ತನ್ನ ಸಾಮರ್ಥ್ಯವನ್ನು ಅನಾವರಣ ಗೊಳಿಸಬೇಕಾಗಿದೆ.
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…