ಕೆಲವೇ ದಿನಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಶುರುವಾಗಿದ್ದು ಕ್ರಿಕೆಟ್ ಪ್ರೇಮಿಗಳು ರಸದೌತಣ ಸವಿಯಲು ಸಿದ್ದರಾಗಿದ್ದಾರೆ, ಜೊತೆ ಜೊತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಸೇನೆಗೆ ನೂತನ ಸಾರಥಿಯನ್ನು ನೇಮಿಸಿದೆ.
ಕಳೆದ ಬಾರಿ ಸೆಮಿಸ್ ಗೆ ತಲುಪಿದ್ದ ಆರ್ ಸಿ ಬಿ ಮೆಗಾ ಹಾರಾಜಿನ ನಂತರ ಹೊಸ ತಂಡವಾಗಿ ರೂಪುಗೊಂಡಿದ್ದು, ಹಲವು ಹೊಸ ಆಟಗಾರರಿಗೆ ತಂಡ ಮಣೆ ಹಾಕಿದ್ದೂ, ಕಪ್ ಗೆಲ್ಲುವ ನಿರೀಕ್ಷೆಯಲ್ಲಿದೆ. ಕಳೆದ ಬಾರಿ ತಂಡದ ನಾಯಕರಾಗಿದ್ದ ಫಾಫ್ ಡೂಪ್ಲೆಸಿಸ್, ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಷವೆಲ್ ನಂತಹ ಹಿರಿಯ ಆಟಗಾರರನ್ನು ಕೈಬಿಟ್ಟಿದ್ದು ಸ್ಫೋಟಕ ದಾಂಡಿಗರಾದ ಫಿಲ್ ಸಾಲ್ಟ್, ಟಿಮ್ ಡೇವಿಡ್, ಜಾಕೋಬ್ ಬೇತಲ್ ರಂತಹ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಹೊಸ ಹಾಗೂ ಹುರುಪಿನ ತಂಡವನ್ನು ಕಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನಾಯಕ ಆಯ್ಕೆ ಕಂಗಟ್ಟಾಗಿತ್ತು, ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿ ಮುನ್ನಡೆಸಿದ್ದ ಕೋಟ್ಯಂತರ ಅಭಿಮಾನಿಗಳ ಬಳಗ ಹೊಂದಿರುವ ಆರ್ ಸಿ ಬಿಗೆ ನೂತನ ನಾಯಕರಾಗಿ ಸ್ಪೋಟಕ ಆಟಗಾರ ರಜತ್ ಪಾಟಿದರ್ ಆಯ್ಕೆಯಾಗಿದ್ದಾರೆ.
ಹಲವಾರು ನಿರೀಕ್ಷೆಯೊಂದಿಗೆ ತಂಡದ ಆಡಳಿತ ಮಂಡಳಿ ಹಾಗೂ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಅವರು ಸೇರಿ ರಜತ್ ಪಾಟಿದರ್ ಅವರನ್ನು ಆಯ್ಕೆ ಮಾಡಿದ್ದು ತಂಡವನ್ನು ಸಮತೋಲನ ಹಾಗೂ ಸಮರ್ಥವಾಗಿ ಮುನ್ನಡೆಸಿ ತನ್ನ ಸಾಮರ್ಥ್ಯವನ್ನು ಅನಾವರಣ ಗೊಳಿಸಬೇಕಾಗಿದೆ.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…