ಕೆಲವೇ ದಿನಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಶುರುವಾಗಿದ್ದು ಕ್ರಿಕೆಟ್ ಪ್ರೇಮಿಗಳು ರಸದೌತಣ ಸವಿಯಲು ಸಿದ್ದರಾಗಿದ್ದಾರೆ, ಜೊತೆ ಜೊತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಸೇನೆಗೆ ನೂತನ ಸಾರಥಿಯನ್ನು ನೇಮಿಸಿದೆ.
ಕಳೆದ ಬಾರಿ ಸೆಮಿಸ್ ಗೆ ತಲುಪಿದ್ದ ಆರ್ ಸಿ ಬಿ ಮೆಗಾ ಹಾರಾಜಿನ ನಂತರ ಹೊಸ ತಂಡವಾಗಿ ರೂಪುಗೊಂಡಿದ್ದು, ಹಲವು ಹೊಸ ಆಟಗಾರರಿಗೆ ತಂಡ ಮಣೆ ಹಾಕಿದ್ದೂ, ಕಪ್ ಗೆಲ್ಲುವ ನಿರೀಕ್ಷೆಯಲ್ಲಿದೆ. ಕಳೆದ ಬಾರಿ ತಂಡದ ನಾಯಕರಾಗಿದ್ದ ಫಾಫ್ ಡೂಪ್ಲೆಸಿಸ್, ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಷವೆಲ್ ನಂತಹ ಹಿರಿಯ ಆಟಗಾರರನ್ನು ಕೈಬಿಟ್ಟಿದ್ದು ಸ್ಫೋಟಕ ದಾಂಡಿಗರಾದ ಫಿಲ್ ಸಾಲ್ಟ್, ಟಿಮ್ ಡೇವಿಡ್, ಜಾಕೋಬ್ ಬೇತಲ್ ರಂತಹ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಹೊಸ ಹಾಗೂ ಹುರುಪಿನ ತಂಡವನ್ನು ಕಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನಾಯಕ ಆಯ್ಕೆ ಕಂಗಟ್ಟಾಗಿತ್ತು, ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿ ಮುನ್ನಡೆಸಿದ್ದ ಕೋಟ್ಯಂತರ ಅಭಿಮಾನಿಗಳ ಬಳಗ ಹೊಂದಿರುವ ಆರ್ ಸಿ ಬಿಗೆ ನೂತನ ನಾಯಕರಾಗಿ ಸ್ಪೋಟಕ ಆಟಗಾರ ರಜತ್ ಪಾಟಿದರ್ ಆಯ್ಕೆಯಾಗಿದ್ದಾರೆ.
ಹಲವಾರು ನಿರೀಕ್ಷೆಯೊಂದಿಗೆ ತಂಡದ ಆಡಳಿತ ಮಂಡಳಿ ಹಾಗೂ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಅವರು ಸೇರಿ ರಜತ್ ಪಾಟಿದರ್ ಅವರನ್ನು ಆಯ್ಕೆ ಮಾಡಿದ್ದು ತಂಡವನ್ನು ಸಮತೋಲನ ಹಾಗೂ ಸಮರ್ಥವಾಗಿ ಮುನ್ನಡೆಸಿ ತನ್ನ ಸಾಮರ್ಥ್ಯವನ್ನು ಅನಾವರಣ ಗೊಳಿಸಬೇಕಾಗಿದೆ.
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…