ಕೆಲವೇ ದಿನಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಶುರುವಾಗಿದ್ದು ಕ್ರಿಕೆಟ್ ಪ್ರೇಮಿಗಳು ರಸದೌತಣ ಸವಿಯಲು ಸಿದ್ದರಾಗಿದ್ದಾರೆ, ಜೊತೆ ಜೊತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಸೇನೆಗೆ ನೂತನ ಸಾರಥಿಯನ್ನು ನೇಮಿಸಿದೆ.
ಕಳೆದ ಬಾರಿ ಸೆಮಿಸ್ ಗೆ ತಲುಪಿದ್ದ ಆರ್ ಸಿ ಬಿ ಮೆಗಾ ಹಾರಾಜಿನ ನಂತರ ಹೊಸ ತಂಡವಾಗಿ ರೂಪುಗೊಂಡಿದ್ದು, ಹಲವು ಹೊಸ ಆಟಗಾರರಿಗೆ ತಂಡ ಮಣೆ ಹಾಕಿದ್ದೂ, ಕಪ್ ಗೆಲ್ಲುವ ನಿರೀಕ್ಷೆಯಲ್ಲಿದೆ. ಕಳೆದ ಬಾರಿ ತಂಡದ ನಾಯಕರಾಗಿದ್ದ ಫಾಫ್ ಡೂಪ್ಲೆಸಿಸ್, ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಷವೆಲ್ ನಂತಹ ಹಿರಿಯ ಆಟಗಾರರನ್ನು ಕೈಬಿಟ್ಟಿದ್ದು ಸ್ಫೋಟಕ ದಾಂಡಿಗರಾದ ಫಿಲ್ ಸಾಲ್ಟ್, ಟಿಮ್ ಡೇವಿಡ್, ಜಾಕೋಬ್ ಬೇತಲ್ ರಂತಹ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಹೊಸ ಹಾಗೂ ಹುರುಪಿನ ತಂಡವನ್ನು ಕಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನಾಯಕ ಆಯ್ಕೆ ಕಂಗಟ್ಟಾಗಿತ್ತು, ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿ ಮುನ್ನಡೆಸಿದ್ದ ಕೋಟ್ಯಂತರ ಅಭಿಮಾನಿಗಳ ಬಳಗ ಹೊಂದಿರುವ ಆರ್ ಸಿ ಬಿಗೆ ನೂತನ ನಾಯಕರಾಗಿ ಸ್ಪೋಟಕ ಆಟಗಾರ ರಜತ್ ಪಾಟಿದರ್ ಆಯ್ಕೆಯಾಗಿದ್ದಾರೆ.
ಹಲವಾರು ನಿರೀಕ್ಷೆಯೊಂದಿಗೆ ತಂಡದ ಆಡಳಿತ ಮಂಡಳಿ ಹಾಗೂ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಅವರು ಸೇರಿ ರಜತ್ ಪಾಟಿದರ್ ಅವರನ್ನು ಆಯ್ಕೆ ಮಾಡಿದ್ದು ತಂಡವನ್ನು ಸಮತೋಲನ ಹಾಗೂ ಸಮರ್ಥವಾಗಿ ಮುನ್ನಡೆಸಿ ತನ್ನ ಸಾಮರ್ಥ್ಯವನ್ನು ಅನಾವರಣ ಗೊಳಿಸಬೇಕಾಗಿದೆ.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…